
ಆರ್ಯನ್ ಬೆನ್ನಿಗೆ ನಿಂತ ನಟಿ ರಮ್ಯಾ
ಈ ಬಗ್ಗೆ ಪ್ರತಿಕ್ರಿಯಿಸಿರುವ ರಮ್ಯಾ ಆರ್ಯನ್ ಖಾನ್ ಬಳಿ ಮಾದಕ ವಸ್ತು ಇರುವುದಕ್ಕೆ ಅಥವಾ ಆರ್ಯನ್ ಮಾದಕ ವಸ್ತು ಸೇವಿಸಿದ್ದರ ಬಗ್ಗೆ ದಾಖಲೆ ಇಲ್ಲ. ಆದಾಗ್ಯೂ, ಅವರನ್ನು ಬಂಧಿಸಿ, ವಿಚಾರಣೆ ಮಾಡಲಾಗಿದೆ. ಆದರೆ, ಕೇಂದ್ರ ಸಚಿವರ ಪುತ್ರ ಕಾರು ಚಲಾಯಿಸಿ, ನಾಲ್ವರು ರೈತರನ್ನು ಕೊಲೈಗೈದಿದ್ದಾನೆ ಮತ್ತು ಆದಾಗ್ಯೂ ಆತ ಆರಾಮಾಗಿ ಓಡಾಡಿಕೊಂಡಿದ್ದಾನೆ. ಯಾಕೆ ಆತನ ಬಂಧನ ಇನ್ನೂ ಆಗಿಲ್ಲ? ಯಾವುದೇ ಮಾಹಿತಿ ನೀಡದೆ, ಮೃತ ರೈತರ ಕುಟುಂಬದವರನ್ನು ಭೇಟಿಯಾಗಲು ಹೋಗುತ್ತಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸುತ್ತೀರಿ. ಇದು ಹೊಸ ಭಾರತ. ಅಧಿಕಾರದಲ್ಲಿರುವ ಹುಚ್ಚಾಟದಿಂದ ದೇಶ ನಡೆಯುತ್ತಿದೆ ಎಂದು ನಟಿ ರಮ್ಯಾ ಆಕ್ರೋಶ ವ್ಯೆಕ್ತಪಡಿಸಿದ್ದಾರೆ.