• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ತಮಿಳುನಾಡು ವಿಧಾನಸಭೆ ಚುನಾವಣೆ: ಕೊಯಮತ್ತೂರು ದಕ್ಷಿಣ ಕ್ಶೇತ್ರದಿಂದ ನಾಮಪತ್ರ ಸಲ್ಲಿಸಿದ ಕಮಲ್ ಹಾಸನ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ತಮಿಳುನಾಡು ವಿಧಾನಸಭೆ ಚುನಾವಣೆ: ಕೊಯಮತ್ತೂರು ದಕ್ಷಿಣ ಕ್ಶೇತ್ರದಿಂದ ನಾಮಪತ್ರ ಸಲ್ಲಿಸಿದ ಕಮಲ್ ಹಾಸನ್
0
SHARES
0
VIEWS
Share on FacebookShare on Twitter

ಕೊಯಮತ್ತೂರು, ಮಾ. 16: ಮಕ್ಕಳ್ ನೀಧಿ ಮೈಯಮ್ (ಎಂಎನ್​ಎಂ) ಪಕ್ಷದ ಸ್ಥಾಪಕ ಕಮಲ್ ಹಾಸನ್ ಸೋಮವಾರ ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 6ರಂದು ನಡೆಯಲಿರುವ ಚುನಾವಣೆಯಲ್ಲಿ ಕಮಲ್ ಹಾಸನ್ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಎದುರಿಸಲಿದ್ದಾರೆ. ತಮಿಳುನಾಡಿನ ಪ್ರಮುಖ ರಾಜಕೀಯ ಪಕ್ಷಗಳಾದ ಎಐಎಡಿಎಂಕೆ ಮತ್ತು ಡಿಎಂಕೆ ಈ ಕ್ಷೇತ್ರವನ್ನು ಬಿಜೆಪಿ ಮತ್ತು ಕಾಂಗ್ರೆಸ್​ಗೆ ಬಿಟ್ಟುಕೊಟ್ಟಿವೆ ಎಂಬುದು ಗಮನಾರ್ಹ ಸಂಗತಿ.

ಕಮಲ್ ಹಾಸನ್ ಫೆಬ್ರುವರಿ 2018ರಲ್ಲಿಯೇ ಎಂಎನ್​ಎಂ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ತಾವು ಸ್ವತಃ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸಿರಲಿಲ್ಲ. 2019ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಅಭ್ಯರ್ಥಿಗಳನ್ನು ನಿಲ್ಲಿಸಿದ್ದರು. ಕಮಲ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಶೇ 3.75ರಷ್ಟು ಮತಗಳನ್ನು ತನ್ನದಾಗಿಸಿಕೊಂಡಿತ್ತು.

ಎಐಎಡಿಎಂಕೆಯ ಅಮ್ಮಾನ್ ಕೆ.ಅರ್ಜುನನ್ ಈ ಮೊದಲು ಕೊಯಮತ್ತೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಈ ಸಲ ಎಐಎಡಿಎಂಕೆ ಈ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟಿದೆ. ಅರ್ಜುನನ್ ಕೊಯಮತ್ತೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ಕಮಲ್ ಹಾಸನ್ ಎದುರು ಬಿಜೆಪಿಯ ವನತಿ ಶ್ರೀನಿವಾಸನ್ ಮತ್ತು ಕಾಂಗ್ರೆಸ್​ನ ಮಯೂರ ಎಸ್.ಜಯಕುಮಾರ್ ಸ್ಪರ್ಧಿಸಲಿದ್ದಾರೆ.

ರಸ್ತೆ ನಿರ್ಮಾಣ, ಕುಡಿಯುವ ನೀರು ಸರಬರಾಜು ಮತ್ತು ವಿಮಾನ ನಿಲ್ದಾಣ ವಿಸ್ತರಣೆ ಸೇರಿದಂತೆ ಹಲವು ಯೋಜನೆಗಳನ್ನು ಪೂರ್ಣಗೊಳಿಸುವ ಭರವಸೆಯನ್ನು ಕಮಲ್ ಹಾಸನ್ ನೀಡಿದ್ದಾರೆ. ‘ಕೊಯಮತ್ತೂರನ್ನು ಕೇವಲ ಭಾರತದ ಅತ್ಯುತ್ತಮ ನಗರವನ್ನಾಗಿ ಅಲ್ಲ, ವಿಶ್ವದ ಅತ್ಯುತ್ತಮ ನಗರವನ್ನಾಗಿ ರೂಪಿಸುವ ಆಸೆ ನನಗಿದೆ. ಇತರರಂತೆ ರಾಜಕಾರಣ ನನ್ನ ವೃತ್ತಿ ಅಲ್ಲ. ರಾಜಕಾರಣ ನನ್ನ ಕರ್ತವ್ಯ. ನಾನಿದನ್ನು ಬದ್ಧತೆಯಿಂದ ನಿರ್ವಹಿಸುತ್ತೇನೆ’. ‘ಹೊರಗಿನವನು’ ಎಂಬ ಆರೋಪ ಗೆಲುವಿನ ಸಾಧ್ಯತೆಯನ್ನು ಕಡಿಮೆ ಮಾಡಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಮಲ್ ಹಾಸನ್, ‘ಇವೆಲ್ಲವೂ ಸಾಮಾಜಿಕ ಮಾಧ್ಯಮಗಳು ಮತ್ತು ಕೆಲ ರಾಜಕೀಯ ಪಕ್ಷಗಳ ಸೃಷ್ಟಿ. ನನಗೆ ಇಂಥ ಸಮಸ್ಯೆ ಎದುರಾಗಿಲ್ಲ’ ಎಂದು ಹೇಳಿದರು.

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.