• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪ್ರೀತಿಯನ್ನು ತಿರಸ್ಕರಿಸಿದ್ದಕ್ಕಾಗಿ ಪ್ರಥಮ ಪಿಯು ಯುವತಿಗೆ 14 ಬಾರಿ ಇರಿದ ಆರೋಪಿ ಶವವಾಗಿ ಪತ್ತೆ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
Stabbed
0
SHARES
0
VIEWS
Share on FacebookShare on Twitter

ತಮಿಳುನಾಡಿನ(Tamilnadu) ತಿರುಚ್ಚಿಯಲ್ಲಿ(Tiruchi) 16 ವರ್ಷದ ಯುವತಿಯೊಬ್ಬಳು ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದೇ ನಿರಾಕರಿಸಿದಳು ಎಂಬ ಕಾರಣಕ್ಕಾಗಿ 22 ವರ್ಷದ ಯುವಕ, ಯುವತಿಗೆ 14 ಬಾರಿ ಚಾಕುವಿನಿಂದ ಇರಿದಿದ್ದಾನೆ.

Stabbed

ವ್ಯಕ್ತಿಯನ್ನು ಕೇಶವನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಪತ್ತೆಹಚ್ಚುತ್ತಿದ್ದಾರೆ ಎಂದು ವರದಿ ತಿಳಿಸಿತ್ತು. ತಿರುಚ್ಚಿಯ ಅತಿಕುಲಂ ನಿವಾಸಿಯಾಗಿರುವ ಯುವತಿ ಪ್ರಥಮ ಪಿಯುಸಿ ಓದುತ್ತಿದ್ದಳು. ಪರೀಕ್ಷೆ ಮುಗಿಸಿ ಸಂತ್ರಸ್ತೆ ತನ್ನ ಸಂಬಂಧಿಯನ್ನು ಭೇಟಿಯಾಗಲು ತೆರಳುತ್ತಿದ್ದಾಗ, ಆರೋಪಿ ಕೇಶವನ್ ರೈಲ್ವೇ ಮೇಲ್ಸೇತುವೆ ಬಳಿ ಆಕೆಯನ್ನು ತಡೆದಿದ್ದಾನೆ.

ಕೇಶವನ್ ಬಾಲಕಿಯನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಜೂನ್ 2021 ರಲ್ಲಿ ಅದೇ ಹುಡುಗಿಯನ್ನು ಅಪಹರಿಸಿದ್ದಕ್ಕಾಗಿ ಕೇಶವನ್ ನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ, 2012 (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು ಎಂದು ಸಂತ್ರಸ್ತೆಯ ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಜೈಲು ಶಿಕ್ಷೆ ಅನುಭವಿಸಿ ಇತ್ತೀಚೆಗೆ ಜೈಲಿನಿಂದ ಬಿಡುಗಡೆಗೊಂಡಿದ್ದನ್ನು.

ஒவ்வொரு முறையும் இப்படிப்பட்ட கொடூரங்கள் நடக்கும்போது வேதனையடைகிறோம். பிறகு கடந்து போய்விடுகிறோம். ஒரு பெண சுயசிந்தனை,சுயவிருப்பற்ற ஆணின் விருப்பத்தை கட்டாயமாக ஏற்கவேண்டியவள் ,வெறும் உடல் என்கிற ஆபத்தான சிந்தனையிலிருந்தே இம்மாதிரியான கொடூரங்கள் உருவாகின்றன.

— Jothimani (@jothims) May 31, 2022

ಚಾಕು ಇರಿದು ಸಾಯಿಸುವ ದಿನದಂದು ತಾನು ಆಕೆಯನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳಿದ್ದಾನೆ. ಈ ವಿಷಯಕ್ಕೆ ಯುವತಿ ನಿರಾಕರಿಸಿದ ಪರಿಣಾಮ, ಆಕೆ ಕೂಗಿ ಜನ ಸೇರಿಸುತ್ತಾಳೆ ಎಂಬ ಭಯದಿಂದ 14 ಬಾರಿ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಚಾಕುವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಬಾಲಕಿ ಕೆಳಗೆ ಬಿದ್ದಿರುವುದನ್ನು ಕಂಡ ಸ್ಥಳೀಯರು ಆಕೆಯ ದೇಹದಿಂದ ರಕ್ತ ಹರಿಯುತ್ತಿರುವುದನ್ನು ಗಮನಿಸಿ ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಕೆ ಚಿಂತಾಜನಕ ಸ್ಥಿತಿಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವರದಿಯಾಗಿದೆ.

ಆರೋಪಿಯನ್ನು ತಿರುಚ್ಚಿಯ ಪೋತಮೆಟ್ಟುಪಟ್ಟಿ ನಿವಾಸಿ ಕೇಶವನ್ ಎಂದು ಗುರುತಿಸಿರುವ ಪೊಲೀಸರು, ಆತನಿಗಾಗಿ ಶೋಧ ನಡೆಸಿದ್ದಾರೆ. ಈ ಘಟನೆ ಕುರಿತು ಟ್ವೀಟ್ ಮಾಡಿರುವ ಕರೂರಿನ ಕಾಂಗ್ರೆಸ್ ಸಂಸದೆ ಜೋತಿಮಣಿ, ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ 14 ಬಾರಿ ಇರಿದಿರುವ ಸುದ್ದಿ ಕೇಳಿ ಆಘಾತವಾಯಿತು. ಕೇಶವನ್‌ನನ್ನು ಬಂಧಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದರು. ಇಂತಹ ದುಷ್ಕೃತ್ಯಗಳು ಸಂಭವಿಸಿದಾಗಲೆಲ್ಲಾ ನಾವು ಅಸಮಾಧಾನಗೊಳ್ಳುತ್ತೇವೆ.

ಇದನ್ನೂ ಓದಿ : https://vijayatimes.com/shivangi-goyal-177th-rank-in-upsc/

ಕಠಿಣ ಶಿಕ್ಷೆಯ ಜೊತೆಗೆ ಶಿಕ್ಷಣದ ಮೂಲಕ ಸಮಾಜದಲ್ಲಿ ಇಂತಹ ಅತಿರೇಕದ ಮನಸ್ಥಿತಿಯನ್ನು ಬದಲಾಯಿಸಬೇಕು ಎಂದು ಜೋತಿಮಣಿ ಟ್ವೀಟ್ ಮಾಡಿದ್ದಾರೆ. ತನ್ನ ಪ್ರೇಮ ಪ್ರಸ್ತಾಪವನ್ನು ಒಪ್ಪದ ಯುವತಿಗೆ ಕೇಶವನ್ 14 ಬಾರಿ ಚಾಕುವಿನಿಂದ ಇರಿದಿದ್ದಾನೆ. ಆತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಮೂರು ವಿಶೇಷ ತಂಡಗಳು ಶೋಧ ನಡೆಸುತ್ತಿವೆ. ಆದ್ರೆ, ಮಂಗಳವಾರ ತಡರಾತ್ರಿ ರೈಲ್ವೆ ಹಳಿ ಮೇಲೆ ಆರೋಪಿ ಶವವಾಗಿ ಬಿದ್ದಿರುವುದು ಪತ್ತೆಯಾಗಿದೆ. ಕೇಶವನ್ ಎಂದು ಗುರುತಿಸಲಾದ ಆರೋಪಿಯನ್ನು ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿದಾಗ, ಮನಪ್ಪರೈ ಬಳಿಯ ರೈಲ್ವೆ ಹಳಿಗಳ ಮೇಲೆ ಶವವಿರುವ ಬಗ್ಗೆ ಅವರಿಗೆ ಮಾಹಿತಿ ದೊರೆತಿದೆ.

ಪೊಲೀಸರು ಶವದ ಬಳಿ ಸೆಲ್‌ಫೋನ್ ಅನ್ನು ಪಡೆದುಕೊಂಡು, ಕೇಶವನ್ ಅವರ ತಂದೆಗೆ ಕರೆ ಮಾಡಿದ್ದಾರೆ. ಅವರ ತಂದೆ ಬಂದು ಶವವನ್ನು ಗುರುತಿಸಿದ್ದಾರೆ ಎನ್ನಲಾಗಿದೆ.

Tags: DeathloveStabbedTamilnaduThiruchi

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.