- ಬೆಂಗಳೂರಿಗಿಂತ ಮುಂಬೈ ರಸ್ತೆಗಳೇ ಬೆಸ್ಟ್ ಎಂದ ಬಿಜೆಪಿ ಸಂಸದ (Tejasvi Surya slams DCM)
- ಕೆಟ್ಟ ರಸ್ತೆಗಳು, ರಸ್ತೆ ಗುಂಡಿ ಹಾಗೂ ಧೂಳಿನಲ್ಲಿ ಓಡುವ ಪರಿಸ್ಥಿತಿ ವಾಹನ ಸವಾರರಿಗಿದೆ ಎಂದು ಕಿಡಿ
- ನಗರದ ಹೃದಯವಾಗಿರುವ ಸಿಬಿಡಿ ರಸ್ತೆಗಳ ಪರಿಸ್ಥಿತಿ ಶೋಚನೀಯವಾಗಿದೆ
Bengaluru: ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಸಂಸದ ತೇಜಸ್ವಿ ಸೂರ್ಯ ಅವರು ಉಪ ಮುಖ್ಯಮಂತ್ರಿ (Deputy Chief Minister) ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ (DK Shivakumar) ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಅವರು ಬೆಂಗಳೂರಿನ ಕೆಲವು ಗಂಭೀರ ವಿಷಯಗಳನ್ನು ಚರ್ಚೆ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲೂ (Social Media X) ಅವರು ಪೋಸ್ಟ್ ಮಾಡಿಕೊಂಡಿದ್ದು. ಈ ಪೋಸ್ಟ್ ಇದೀಗ ವೈರಲ್ ಆಗುತ್ತಿದೆ.
ಬೆಂಗಳೂರಿನಲ್ಲಿ ಟಿಸಿಎಸ್ ವರ್ಲ್ಡ್ (TCS World) 10ಕೆ-2025 ಮ್ಯಾರಥಾನ್ ಆಯೋಜಿಸಲಾಗಿತ್ತು. ಈ ಮ್ಯಾರಥಾನ್ಗೆ ಹೇಗೆಲ್ಲಾ ಸಮಸ್ಯೆ ಆಯಿತು ಎನ್ನುವ ಬಗ್ಗೆ ತೇಜಸ್ವಿ ಸೂರ್ಯ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಈ ಮ್ಯಾರಥಾನ್ನಲ್ಲಿ ಅಥ್ಲೀಟ್ಗಳು ಬೆಂಗಳೂರಿನ ಕೆಟ್ಟ ರಸ್ತೆಗಳು (Bad roads in Bangalore) , ರಸ್ತೆ ಗುಂಡಿ ಹಾಗೂ ಧೂಳಿನಲ್ಲಿ ಓಡುವ ಪರಿಸ್ಥಿತಿ ಎದುರಾಯ್ತು. ಈ ವಿಷಯ ತುಂಬಾ ಬೇಸರ ಮೂಡಿಸಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿಬಿಎಂಪಿ (BBMP) ಆಯುಕ್ತ ತುಷಾರ್ ಗಿರಿನಾಥ್ ಅವರು ಟಿಸಿಎಸ್ ವರ್ಲ್ಡ್ (TCS World) 10ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಹಾಜರಿದ್ದ ವಿಷಯ ಸಂತೋಷವನ್ನುಂಟು ಮಾಡಿದೆ.
ಆದರೆ, ನಾನು ಬೆಂಗಳೂರು ಸಂಸದನಾಗಿ ಮಾತ್ರವಲ್ಲ. ಈ ವಿಷಯವನ್ನು ಒಬ್ಬ ಓಟಗಾರನಾಗಿ, ನಾಗರಿಕನಾಗಿ & ಅತ್ಯಂತ ನೋವಿನಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ ಅಂತ ಹೇಳಿದ್ದಾರೆ. ಈ ಓಟದಲ್ಲಿ ಜಗತ್ತಿನ ಶ್ರೇಷ್ಠ ಅಥ್ಲೀಟ್ ಗಳು, ಹಿರಿಯ ನಾಗರಿಕರು (Senior citizens) , ಸಾಮಾನ್ಯ ನಾಗರಿಕರು ಸೇರಿದಂತೆ ಸುಮಾರು 40 ಸಾವಿರಕ್ಕೂ (40 thousand) ಹೆಚ್ಚು ಮಂದಿ ಭಾಗವಹಿಸಿದ್ದರು. ಆದರೆ, ಅವರೆಲ್ಲರೂ ಸುಂದರ ಓಟದ ಅನುಭವವನ್ನು ಅನುಭವಿಸುವ ಬದಲು ಗುಂಡಿಗಳ ಓಟ, ಧೂಳಿನ ಓಟ (Dust race) , ಅಪಾಯದಿಂದ ಕೂಡಿದ ಓಟ ಎಂಬ ಅನುಭವ ಪಡೆದದ್ದು ಬಹಳ ಬೇಸರದ ಸಂಗತಿ ಎಂದಿದ್ದಾರೆ.

ನಗರದ ಹೃದಯವಾಗಿರುವ ಸಿಬಿಡಿ ರಸ್ತೆಗಳ (CBD roads) ಪರಿಸ್ಥಿತಿ ಶೋಚನೀಯವಾಗಿದೆ. ಒಂದು ಸಣ್ಣ ಸುಗಮ ರಸ್ತೆ ಕೂಡ ಇಲ್ಲದ್ದು . ಎಲ್ಲೆಲ್ಲೂ ಗುಂಡಿಗಳು (Potholes) . ಓಟಗಾರರು ಮುಗ್ಗರಿಸಿದ್ದು ಗಾಯಗೊಂಡಿದ್ದು, ಹಿರಿಯರು ಹೆಜ್ಜೆ ಹಾಕಲು ಹೆದರುವ ಸ್ಥಿತಿ ಎದುರಾಗಿದ್ದು ಸುಳ್ಳಲ್ಲ. ವೀಲ್ಚೇರ್ನಲ್ಲಿ ಓಡಿದವರು ಸ್ವಂತ ಶಕ್ತಿಯಿಂದ ಸಾಗಲು ಆಗಲಿಲ್ಲ. ಅವರಿಗೆ ಅನ್ಯರ ಸಹಾಯ ಪಡೆದುಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಿತ್ತು. ಇದರ ಜೊತೆಗೆ ಅನೇಕ ಸ್ಥಳಗಳಲ್ಲಿ ಕಸದ ರಾಶಿಗಳು (Piles of garbage in places) , ಅನೈರ್ಮೈಲದ ಬದಿಗಳು, ಮುರಿದ ಪಾದಚಾರಿ ಮಾರ್ಗಗಳು ಇವು ಬ್ರ್ಯಾಂಡ್ ಬೆಂಗಳೂರಿನ ಚಿತ್ರಣಗಳಾಗಿದ್ದವು ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಇನ್ನು ಬೆಂಗಳೂರಿಗಿಂತ ಮುಂಬೈನಲ್ಲಿ ಉತ್ತಮ ರಸ್ತೆಗಳಿವೆ ಎಂದು ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ. ಇದು ವರ್ಲ್ಡ್ ಅಥ್ಲೆಟಿಕ್ಸ್ ಪ್ರಮಾಣಿತ ಗೋಲ್ಡ್ ಲೇಬಲ್ (Athletics standard gold label) ಈವೆಂಟ್ ಆಗಿದ್ದು. ಜಗತ್ತಿನ ನೂರಾರು ಅತಿಥಿಗಳು ನಮ್ಮತ್ತ ಗಮನಿಸುತ್ತಿದ್ದು, ಈ ಬಗ್ಗೆ ಸೂಕ್ತ ಗಮನ ಹರಿಸಿ (Pay proper attention) ಬ್ರ್ಯಾಂಡ್ ಬೆಂಗಳೂರಿನ ಮೌಲ್ಯವನ್ನು ಹೆಚ್ಚಿಸುವಂತೆ ನಾನು ತಮ್ಮಲ್ಲಿ ವಿನಂತಿಸುತ್ತೇನೆ.
ಇದನ್ನೂ ಓದಿ: https://vijayatimes.com/rcb-hat-trick-defeat-at-home/
ಕೇವಲ 2 ತಿಂಗಳುಗಳ ಹಿಂದೆ ನಾನು ಮುಂಬೈಯಲ್ಲಿ (Mumbai) ನಡೆದ ಮ್ಯಾರಥಾನ್ ನಲ್ಲಿಯೂ ಭಾಗವಹಿಸಿದೆ. (Tejasvi Surya slams DCM) ಅಲ್ಲಿನ ಅನುಭವ ಇಷ್ಟೊಂದು ಕಳಪೆ ಆಗಿರಲಿಲ್ಲ ಎಂಬುದು ನನ್ನ ಅಭಿಪ್ರಾಯ ಅಂತಲೂ ಅವರು ಹೇಳಿದ್ದಾರೆ.