• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪೋಷಕರಿಲ್ಲದ ವಿದ್ಯಾರ್ಥಿನಿ 9 ಚಿನ್ನದ ಪದಕ ಪಡೆದು ಸಾಧನೆ ; ಪ್ರತಿಯೊಬ್ಬರಿಗೂ ಮಾದರಿಯಾದ ಗ್ರಾಮಪ್ರತಿಭೆ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
tejaswini
0
SHARES
7
VIEWS
Share on FacebookShare on Twitter

ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿನಿ(Student) ಹಾಸ್ಟಲ್ ನಲ್ಲೇ ವಿದ್ಯಾಭ್ಯಾಸ(Education) ಮುಗಿಸಿಕೊಂಡು 9 ಚಿನ್ನದ ಪದಕ(Gold Medal) ಗೆದ್ದು ಎಲ್ಲರಿಗೂ ಮಾದರಿಯಾಗಿದ್ದಾರೆ. ಹೌದು, ವಿ. ತೇಜಸ್ವಿನಿ(V Tejaswini) ಎಂಬ ವಿದ್ಯಾರ್ಥಿನಿ ತಂದೆ, ತಾಯಿ ಇಬರನ್ನು ಕಳೆದುಕೊಂಡ ಬಳಿಕ ಹಾಸ್ಟೆಲ್‌ನಲ್ಲೇ ಉಳಿದು ವಿದ್ಯಾಭ್ಯಾಸ ಮುಗಿಸಿ 9 ಚಿನ್ನದ ಪದಕ ಜೊತೆಗೆ 10 ನಗದು ಬಹುಮಾನ ಪಡೆದುಕೊಂಡಿದ್ದಾರೆ. ಕಳೆದ ವಾರ ಮೈಸೂರು ವಿವಿ 102ನೇ ಘಟಿಕೋತ್ಸವದಲ್ಲಿ(Mysuru Convocation Day) ಪ್ರಶಸ್ತಿ ಪಡೆದು ಗಮನ ಸೆಳೆದಿದ್ದಾರೆ.

tejaswini

ಚಾಮರಾಜನಗರ(Chamrajnagar) ಜಿಲ್ಲೆಯ ಕೊಳ್ಳೇಗಾಲ(Kollegal) ತಾಲೂಕಿನ, ಕೊತ್ತೇಗಾಲ ಗ್ರಾಮದ ವಿದ್ಯಾರ್ಥಿನಿಯಾದ ವಿ.ತೇಜಸ್ವಿನಿ ಅವರು ಪದವಿಯಲ್ಲಿ 9 ಚಿನ್ನದ ಪದಕ ಪಡೆದು ಇಂದು ಅನೇಕರಿಗೆ ಮಾರ್ಗದರ್ಶನವಾಗಿದ್ದಾರೆ. ನಾಲ್ಕನೇ ತರಗತಿ ವ್ಯಾಸಂಗ ಮಾಡುವಾಗ ತಮ್ಮ ತಾಯಿಯನ್ನು ಕಳೆದುಕೊಂಡರು, ಪಿಯುಸಿ ವ್ಯಾಸಂಗ ಮಾಡುವ ಸಮಯದಲ್ಲಿ ತಮ್ಮ ತಂದೆಯನ್ನು ಕಳೆದುಕೊಂಡರು. ಬಾಲ್ಯದಿಂದಲೇ ಪ್ರತಿಭಾವಂತೆ ಆಗಿದ್ದ ತೇಜಸ್ವಿನಿ ಅವರಿಗೆ ಪ್ರೋತ್ಸಾಹ ನೀಡಲು ಯಾರು ಇಲ್ಲ ಎಂಬ ಪ್ರಶ್ನೆ ಕಾಡಿದ್ದಂತೂ ನಿಜ!

ಆದ್ರೆ, ಯಾರು ಇಲ್ಲ ಎಂಬ ಕೂಗನ್ನು ಅಳಿಸಿದ್ದು ಅವರ ಬೆಂಬಲಕ್ಕೆ ನಿಂತದ್ದು, ಆಕೆಯ ಕಾಲೇಜಿನ ಬೋಧಕ ಸಿಬ್ಬಂದಿಯವರು. ತೇಜಸ್ವಿನಿ ಅವರ ಉನ್ನತ ಶಿಕ್ಷಣಕ್ಕಾಗಿ ಮೈಸೂರು ಮಹಾರಾಣಿ ಕಲಾ ಕಾಲೇಜಿಗೆ ನೊಂದಣಿ ಮಾಡಿಸಿ ಸೇರಿಸುತ್ತಾರೆ. ನಂತರ ಆ ಕಾಲೇಜಿನಲ್ಲೂ ಉಪನ್ಯಾಸಕರ ಮೆಚ್ಚುಗೆ ಪಡೆದ ತೇಜಸ್ವಿನಿ ಅವರು, ಪದವಿ ಶಿಕ್ಷಣದಲ್ಲೂ ಅತ್ಯುತ್ತಮ ಅಂಕ ಪಡೆದು 9 ಚಿನ್ನದ ಪದಕ ಪಡೆದಿರುವುದು ಇಲ್ಲಿ ಮೆಚ್ಚಿ, ಶ್ಲಾಘಿಸುವಂತ ಅಂಶ.

mysuru university

ಈ ಕುರಿತು ತೇಜಸ್ವಿನಿ ಅವರೇ ಮಾತನಾಡಿದ್ದು, ಕಳೆದ ನಾಲ್ಕು ವರ್ಷಗಳಿಂದ ನಾನು ಹಾಸ್ಟೆಲ್‌ನಲ್ಲೇ ಉಳಿದು ವ್ಯಾಸಂಗ ಮಾಡುತ್ತಿದ್ದೀನಿ, ಕಾಲೇಜಿನ ಉಪನ್ಯಾಸಕರು, ಸ್ನೇಹಿತರು, ಹಾಸ್ಟೆಲ್‌ನ ವಾರ್ಡನ್ ಇವರೇ ನನಗೆ ಪೋಷಕರಾಗಿದ್ದು, ಇವರ ನೆರವಿನಿಂದಲೇ ಮಾನಸಗಂಗೋತ್ರಿಯಲ್ಲಿನ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಥಮ ವರ್ಷದ ಎಂ.ಎ(MA) ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಒಂದು ಪುಟ್ಟ ಕುಗ್ರಾಮದಿಂದ ಬಂದು ಪದಕ ಪಡೆಯುವ ಮೂಲಕ ಸಾಧಿಸಿರುವ ಗುರಿ ನಿಜಕ್ಕೂ ಗೌರವಿಸುವಂತದ್ದು.

ಈ ವಿಷಯ ಅವರಿಗೆ ಎಲ್ಲಿಲ್ಲದ ಸಂಭ್ರಮ ಮತ್ತು ಗೌರವ ತಂದಿದೆ. ಆದರೆ, ಈ ಒಳ್ಳೆಯ ಕ್ಷಣವನ್ನು ಕಣ್ತುಂಬಿಕೊಳ್ಳಲು ನಮ್ಮ ಅಪ್ಪ-ಅಮ್ಮ ಇಲ್ಲ ಎನ್ನುವುದೇ ಮನಸ್ಸಿಗೆ ತುಂಬ ಕಷ್ಟಕರವಾದ ಸಂಗತಿ ಎಂದು ತೇಜಸ್ವಿನಿ ಹೇಳಿದ್ದಾರೆ. ನಮ್ಮಪ್ಪನಿಗೆ ನಾನು ಉನ್ನತ ಮಟ್ಟದ ಅಧಿಕಾರಿಯಾಗಬೇಕು ಎಂಬ ಕನಸಿತ್ತು. ಅದನ್ನು ಸಾಕಾರಗೊಳಿಸುತ್ತೇನೆ. ನಾನು ಐಎಎಸ್‌(IAS) ಪರೀಕ್ಷೆ ಬರೆದು ಅಧಿಕಾರಿಯಾಗುತ್ತೇನೆ ಎಂದು ತನ್ನ ಕನಸನ್ನು ತೇಜಸ್ವಿನಿ ಅವರು ಬಹಿರಂಪಡಿಸಿದರು. ತಂದೆ ವೆಂಕಟೇಶ ಹಾಗೂ ತಾಯಿ ನಾಗಮ್ಮ ಪುತ್ರಿಯಾದ ತೇಜಸ್ವಿನಿಗೆ ಸಹೋದರಿ ಮತ್ತು ಸಹೋದರ ಇಬ್ಬರಿದ್ದು, ಇವರಿಬ್ಬರು ಊರಿನಲ್ಲೇ ಇದ್ದು ವ್ಯಾಸಂಗ ಮಾಡುತ್ತಿದ್ದಾರೆ ಎಂಬುದು ತೇಜಸ್ವಿನಿ ಅವರಿಂದ ತಿಳಿದುಬಂದಿದೆ.

gold medalist

ಒಟ್ಟಾರೆ ಈ ಗ್ರಾಮ ಪ್ರತಿಭೆಯ ಸಾಧನೆಗೆ ನಿಮ್ಮದೊಂದು ಮೆಚ್ಚುಗೆ, ಶ್ಲಾಘನೆ ದೊರೆಯಲಿ. ಪ್ರತಿಯೊಂದು ಮನೆಯಲ್ಲೂ ಹೆಣ್ಣುಮಕ್ಕಳ ಸಾಧನೆ ಗರಿಷ್ಠ ಮಟ್ಟವನ್ನು ತಲುಪಲಿ. ಹೆಣ್ಣು ಮಕ್ಕಳ ಸಾಧನೆ ನಾಡಿನ ಜನತೆಗೆ ಸ್ಪೂರ್ತಿಯಾಗಲಿ…ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ಈ ಮೂಲಕ ಮತ್ತಷ್ಟು ಹೆಚ್ಚಲಿ ಎಂದು ಆಶಿಸೋಣ.

  • ಮೋಹನ್ ಶೆಟ್ಟಿ
Tags: goldmedalistKarnatakaMysuruTejaswiniuniversity

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.