ತೆಲುಗು ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಕೆ ಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಸಂಗತಿಯನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಅವರು ಆಚಾರ್ಯ ಚಿತ್ರದ ಶೂಟಿಂಗ್ಗೆ ತೆರಳಿದಾಗ ಕೊರೊನಾ ಮಾರ್ಗಸೂಚಿಗಳಂತೆ ಕೊವಿಡ್ ಟೆಸ್ಟ್ಗೆ ಒಳಗಾದಾಗ ಪಾಸಿಟಿವ್ ಬಂದಿದೆ. ನನಗೆ ಕೊವಿಡ್ ಲಕ್ಷಣಗಳು ಯಾವುದೇ ಇರದಿದ್ದರೂ, ಮನೆಯಲ್ಲಿಯೇ ಕ್ವಾರೆಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಅದಲ್ಲದೇ ಶನಿವಾರ ತೆಲಂಗಾಣದ ಸಿಎಂ ಕೆ. ಚಂದ್ರಶೇಖರ್ ರಾವ್ ಅವರನ್ನು ಅಕ್ಕಿನೇನಿ ನಾಗಚೈತನ್ಯ ಅವರ ಜೊತೆ ಹೋಗಿ ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ.