ದೇಗುಲ‌ಗಳ ತೆರವಿಗೆ ಅವಸರ ಬೇಡ – ಸಿಎಂ ಬೊಮ್ಮಾಯಿ

ಬೆಂಗಳೂರು ಸೆ 15 : ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರಕಾರ ಧಾರ್ಮಿಕ ಕೇಂದ್ರಗಳ ನೆಲಸಮ ಮಾಡುವ ಕೆಲಸಕ್ಕೆ ಮುಂದಾಗಿದೆ. ಆದರೆ, ಸಮಾಜದ ಎಲ್ಲಾ ವರ್ಗಗಳ ತೀವ್ರ ವಿರೋಧದಿಂದ ಇದಕ್ಕೆ ಸದ್ಯ ಬ್ರೇಕ್ ಬಿದ್ದಿದೆ.  ದೇಗುಲ‌ಗಳ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶವನ್ನಿಟ್ಟುಕೊಂಡು ಅವಸರವಸರವಾಗಿ ದೇವಾಲಯಗಳನ್ನು ನೆಲಸಮಗೊಳಿಸದಂತೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಮೈಸೂರಿನ‌ಲ್ಲಿ ದೇವಾಲಯಗಳ ತೆರವು ಕಾರ್ಯಾಚರಣೆ‌ಗೆ ಸಂಬಂಧಿಸಿದಂತೆ ಸದನದಲ್ಲಿ ಎಲ್ಲಾ ರೀತಿಯ ವಿವರಗಳನ್ನು ನೀಡಲಾಗುತ್ತದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾತಕ್ಕಾಗಿ ಕ್ರಮ ತೆಗೆದುಕೊಂಡಿದ್ದೀರಿ ಎಂದು ಪ್ರಶ್ನಿಸಿ ಜಿಲ್ಲಾಧಿಕಾರಿ‌ಗಳು.ಮತ್ತು ತಹಶೀಲ್ದಾರ‌ರಿಗೂ ನೊಟೀಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ

ಜೊತೆಗೆ ಇಡೀ ರಾಜ್ಯದಲ್ಲಿ ಅವಸರದ ತೀರ್ಮಾನ‌ಗಳನ್ನು ತೆಗೆದುಕೊಂಡು ದೇಗುಲಗಳನ್ನು ಒಡೆಯುವ ಕೆಲಸ ಮಾಡಬಾರದು. ಸುಪ್ರೀಂಕೋರ್ಟ್‌ನ ಆದೇಶವನ್ನು ಸಮಗ್ರವಾಗಿ ಅಧ್ಯಯನ ಮಾಡಿ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಎರಡು ದಿನಗಳಲ್ಲಿ ನಿರ್ಧಿಷ್ಟ ಸೂಚನೆ ನೀಡಲಾಗುತ್ತದೆ. ಸದನದಲ್ಲಿ ಈ ಬಗ್ಗೆ ಎಲ್ಲಾ ವಿವರಗಳನ್ನೂ ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ

Exit mobile version