ಮಾರ್ಕಪುರಂನಲ್ಲಿ ಭೀಕರ (Terrible bus accident in Andhra) ಬಸ್ ದುರಂತ
ಟಿಪ್ಪರ್ ಡಿಕ್ಕಿಗೆ ಬೆಂಕಿಗಾಹುತಿಯಾದ ಬಸ್; 10 ಜನ ಸಜೀವ ದಹನ, 18 ಜನರಿಗೆ ಗಾಯ
ಮುಂದುವರೆದ ರಕ್ಷಣಾ ಕಾರ್ಯಾಚರಣೆ
Andrapradesh: ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ (Terrible bus accident in Andhra) ಅಪಘಾತ ಸಂಭವಿಸಿ 10 ಜನರು ಸಜೀವ ದಹನಗೊಂಡು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಟಿಪ್ಪರ್ ಟ್ರಕ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಬಸ್ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆ ರಾಜ್ಯಾದ್ಯಂತ ಶೋಕ ಮೂಡಿಸಿದೆ.

ಈ ಅಪಘಾತ ಮಾರ್ಕಪುರಂ ಜಿಲ್ಲೆಯ ರಾಯವರಂ (Terrible bus accident in Andhra) ಬಳಿ ನಡೆದಿದೆ. ಜಲ್ಲಿ ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಟ್ರಕ್ (Tipper truck) ಮತ್ತು ಹೈದರಾಬಾದ್ನಿಂದ ಪಾಮೂರ್ ಕಡೆಗೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಡಿಕ್ಕಿ ಹೊಡೆದ ತಕ್ಷಣವೇ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಅತೀವ ವೇಗವಾಗಿ ಹಬ್ಬಿದ ಕಾರಣ ಒಳಗಿದ್ದ ಪ್ರಯಾಣಿಕರಿಗೆ ಹೊರಬರಲು ಸಮಯ ಸಿಕ್ಕಿಲ್ಲ.
ಘಟನೆಯ ಸಮಯದಲ್ಲಿ ಬಸ್ನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಇವರಲ್ಲಿ 10 ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ.
18 ಜನರು ಗಂಭೀರ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದ ಮಾಹಿತಿ ದೊರಕುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಬೆಂಕಿಯನ್ನು ನಿಯಂತ್ರಣಕ್ಕೆ ತರುವಷ್ಟರಲ್ಲಿ ಬಸ್ ಮತ್ತು ಟ್ರಕ್ ಎರಡೂ ಸಂಪೂರ್ಣವಾಗಿ ಸುಟ್ಟು ಹೋಗಿದ್ದವು. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವ ಕಾರ್ಯಾಚರಣೆ ಹಲವು ಗಂಟೆಗಳ ಕಾಲ ನಡೆಯಿತು.
ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಕಣಿಗಿರಿ ಮತ್ತು ಪಾಮೂರ್ ಪ್ರದೇಶದ ನಿವಾಸಿಗಳು ಎಂದು ತಿಳಿದುಬಂದಿದೆ. ಗಾಯಗೊಂಡ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭೀಕರ ರಸ್ತೆ ಅಪಘಾತ ಮತ್ತೊಮ್ಮೆ ರಸ್ತೆ ಸುರಕ್ಷತೆ ಮತ್ತು ಖಾಸಗಿ ಬಸ್ಗಳ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಶ್ನೆ ಎಬ್ಬಿಸಿದೆ.
ಇದನ್ನು ಓದಿ : https://vijayatimes.com/siddaramaiah-questions-modi-about-debt/