- ಬಂಡೀಪೋರಾದಲ್ಲಿ ಉಗ್ರರ ಸಹಚರರ ಬಂಧನ
- LOC ಬಳಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ (Terrorist associates arrested in Bandipora)
- ಪಾಕ್ ಅಪ್ರಚೋದಿತ ದಾಳಿಗೆ ದಿಟ್ಟ ಉತ್ತರ ನೀಡಿದ ಭಾರತೀಯ ಸೈನಿಕ ಪಡೆ
Srinagar: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಕೆಲವೆಡೆ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆದಿದ್ದು, ಇದಕ್ಕೆ ಭಾರತೀಯ ಸೇನೆ (Indian Army) ತಕ್ಕ ಪ್ರತಿಕ್ರಿಯೆ ನೀಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ.ಏಪ್ರಿಲ್ 25-26ರ ರಾತ್ರಿ, ಕಾಶ್ಮೀರದ ನಿಯಂತ್ರಣ ರೇಖೆ (LOC) ಯ ಉದ್ಧಕ್ಕೂ ಪಾಕಿಸ್ತಾನಿ ಸೇನಾ ಯೋಧರು ಅಪ್ರಚೋದಿತ (warriors are unprovoked) ಗುಂಡಿನ ದಾಳಿ ನಡೆಸಿದ್ದಾರೆಂದು ಶ್ರೀನಗರ ಮೂಲದ ರಕ್ಷಣಾಧಿಕಾರಿ ಮಾಹಿತಿ (Protection officer information) ನೀಡಿದ್ದಾರೆ.
ಎರಡು ರಾತ್ರಿ ನಿರಂತರವಾಗಿ ಪಾಕಿಸ್ತಾನಿ ಪಡೆಗಳು ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿರುವುದು ಎರಡನೇ ಬಾರಿಯಾಗಿದೆ. ಸೇನಾ ಪಡೆಗಳು ದಾಳಿಗೆ ದಿಟ್ಟ ಉತ್ತರ (Bold response to the attack) ನೀಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದೇ ವೇಳೆ ದಾಳಿಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದೂ ತಿಳಿಸಿದ್ದಾರೆ.
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ಅಮಾನವೀಯ ದಾಳಿ (Attack) ಬಳಿಕ, ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ (India and Pakistan) ಸೇನೆಗಳು ಮುಖಾಮುಖಿಯಾಗಿದ್ದು, ಪಾಕಿಸ್ತಾನದ ಈ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆ ಸೂಕ್ತ ಉತ್ತರ (Correct answer) ನೀಡಿದೆ.ಪಾಕಿಸ್ತಾನಿ ಪಡೆಗಳು ಗಡಿಯಲ್ಲಿ ಭಾರತೀಯ ಸೇನೆಯ ಸಿದ್ಧತೆ ಹಾಗೂ (Army preparation) ಜಾಗರೂಕತೆಯನ್ನು ಪರಿಶೀಲಿಸಬಹುದು ಎಂದು ಈ ಹಿಂದೆ ಸೇನಾ ಮೂಲಗಳು ಮಾಹಿತಿ ನೀಡಿತ್ತು. ಇದರಂತೆಯೇ ಗಡಿಯಲ್ಲಿ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎನ್ನಲಾಗಿದೆ.

ಈ ಮಧ್ಯೆ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ (Bandipora district of Kashmir)ನಡೆದ ಪ್ರತ್ಯೇಕ ಎನ್ಕೌಂಟರ್ ನಡೆದಿದ್ದು, ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ತಿಳಿದ ಭದ್ರತಾ ಪಡೆಗಳು ಶೋಧಕಾರ್ಯ ನಡೆಸಿದಾಗ, ಉಗ್ರರು ಸೈನಿಕರತ್ತ(Terrorists on soldiers) ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಯೋಧರೂ ಕೂಡ ಗುಂಡಿನ ದಾಳಿ ನಡೆಸಿದ್ದಾರೆ.ಇದರಂತೆ ಕುಲ್ಗಮ್ ಜಿಲ್ಲೆಯ ಖೈಮೋಹ್ ಪ್ರದೇಶದ ಥೋಕರ್ಪೋರಾದಲ್ಲಿ ಇಬ್ಬರು ಉಗ್ರರ ಸಹಚರರನ್ನು ಬಂಧನಕ್ಕೊಳಪಡಿಸಲಾಗಿದೆ (Arrested) ಎಂದು ತಿಳಿದುಬಂದಿದೆ.
ಪಾಕಿಸ್ತಾನ ಸೇನೆಯು ಗಡಿಯಲ್ಲಿ ಪದೇ ಪದೇ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸುವುದು ಹೊಸದೇನಲ್ಲ. ಆದರೆ ಈ ಬಾರಿ ಪಹಲ್ಗಾಮ್ ಉಗ್ರ ದಾಳಿಯ ಹಿನ್ನೆಲೆಯಲ್ಲಿ, ಪಾಕಿಸ್ತಾನ ಸೇನೆಯ ಈ ಅಪ್ರಚೋದಿತ ಗುಂಡಿನ ದಾಳಿ ಭಾರೀ ಮಹತ್ವ ಪಡೆದುಕೊಂಡಿದೆ (gained great importance). ಈಗಾಗಲೇ ಗಡಿಯಲ್ಲಿ ಉಭಯ ರಾಷ್ಟ್ರಗಳು ತಮ್ಮ ಸೇನಾ ಚಟುವಟಿಕೆಯನ್ನು ಹೆಚ್ಚಿಸಿದ್ದು, ಈ ಮಧ್ಯೆ ಪಾಕಿಸ್ತಾನ ಕಡೆಯಿಂದ ಗುಂಡಿನ ದಾಳಿ ನಡೆದಿರುವುದು ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲು ಕಾರಣವಾಗಿದೆ.ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ಸೇನೆ ನಡುವಿನ ಸಂಬಂಧ ಸಂಪೂರ್ಣವಾಗಿ ಹದಗೆಟ್ಟಿದೆ.
ಪಾಕಿಸ್ತಾನ ದವಿರುದ್ಧ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ, ದ್ವಿಪಕ್ಷೀಯ ಮಾತುಕತೆಯ ಎಲ್ಲಾ ಬಾಗಿಲುಗಳನ್ನು ಮುಚ್ಚಿದೆ.ಪ್ರಮುಖವಾಗಿ 1960ರ ಸಿಂಧು ನದಿ ನೀರು ಹಂಚಿಕೆ ಒಪ್ಪಂದವನ್ನು ಭಾರತ ಅಮಾನತು ಮಾಡಿದೆ. ಅಲ್ಲದೇ ಪಾಕಿಸ್ತಾನ ನಾಗರಿಕರ ಭಾರತ ಪ್ರವಾಸದ (India tour) ಮೇಲೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದ್ದು, ಎಲ್ಲಾ ರೀತಿಯ ವೀಸಾಗಳನ್ನು ರದ್ದುಗೊಳಿಸಲಾಗಿದೆ.
ಇದನ್ನೂ ಓದಿ: http://ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ:ಕೂದಲೆಳೆ ಅಂತರದಲ್ಲಿ ರಿಕ್ಕಿ ರೈ ಪಾರು!
ಹಾಗೆಯೇ ಪಾಕಿಸ್ತಾನದ ರಾಯಭಾರಿ ಕಚೇರಿಯಿಂದ ರಕ್ಷಣಾ (office of the chief) ಸಲಹೆಗಾರರನ್ನು ಹೊರಹಾಕಿದೆ.ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಶಿಮ್ಲಾ ಒಪ್ಪಂದದಿಂದ ಹಿಂದೆ ಸರಿಯುವ ಬೆದರಿಕೆ ಹಾಕಿದ್ದು, ಭಾರತದೊಂದಿಗಿನ ಗಡಿಯನ್ನು (Terrorist associates arrested in Bandipora) ಸಂಪೂರ್ಣವಾಗಿ ಮುಚ್ಚಿರುವುದಾಗಿ ತಿಳಿಸಿದೆ.