• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಉದ್ಯಮಿಸ್ನೇಹಿ ಕ್ಷೇತ್ರಗಳಲ್ಲಿ ಮುಂದಿರುವ ಕರ್ನಾಟಕ ಹೂಡಿಕೆಗೆ ಅತ್ಯಂತ ಸೂಕ್ತ ತಾಣ: ಡಿಸಿಎಂ ಅಶ್ವಥ್ ನಾರಾಯಣ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಉದ್ಯಮಿಸ್ನೇಹಿ ಕ್ಷೇತ್ರಗಳಲ್ಲಿ ಮುಂದಿರುವ ಕರ್ನಾಟಕ ಹೂಡಿಕೆಗೆ ಅತ್ಯಂತ ಸೂಕ್ತ ತಾಣ: ಡಿಸಿಎಂ ಅಶ್ವಥ್ ನಾರಾಯಣ್
0
SHARES
0
VIEWS
Share on FacebookShare on Twitter

ತಿರುವನಂತಪುರಂ, ಮಾ. 30: ಕೋವಿಡ್‌ ನಂತರದ ದಿನಗಳಲ್ಲಿ ಕೈಗಾರಿಕೆ, ಹೂಡಿಕೆ, ಆವಿಷ್ಕಾರ ಮುಂತಾದ ಕ್ಷೇತ್ರಗಳಲ್ಲಿ ಪುಟಿದೆದ್ದಿರುವ ಭಾರತವು, ಸಹಜಸ್ಥಿತಿಗೆ ಮರಳಿದೆ. ಇದಕ್ಕೆ ಪೂರಕವಾದ ರೀತಿಯಲ್ಲಿ ಕರ್ನಾಟಕವು ಎಲ್ಲಾ ಉದ್ಯಮಿಸ್ನೇಹಿ ಕ್ಷೇತ್ರಗಳಲ್ಲಿ ಮುಂದಿದ್ದು, ಹೂಡಿಕೆಗೆ ಅತ್ಯಂತ ಸೂಕ್ತ ತಾಣವಾಗಿದೆ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಕೇರಳದಲ್ಲಿನ ಚುನಾವಣಾ ಪ್ರಚಾರದ ನಡುವೆಯೇ ಭಾರತ-ಅಮೆರಿಕ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆ ಹಮ್ಮಿಕೊಂಡಿದ್ದ ವರ್ಚುವಲ್ ಸಭೆಯಲ್ಲಿ ತಿರುವನಂತಪುರದಿಂದಲೇ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಮೊತ್ತಮೊದಲಿಗೆ ಕರ್ನಾಟಕವು ಸಂಶೋಧನೆ ಮತ್ತು ಅಭಿವೃದ್ಧಿಗೆ ಶಕ್ತಿ ತುಂಬುವ ಎಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ (ER&D Policy) ಪ್ರಕಟಿಸಿದ್ದು, ಇದರಿಂದ ಅಮೆರಿಕವೂ ಸೇರಿದಂತೆ ಬಹುರಾಷ್ಟ್ರೀಯ ಕಂಪನಿಗಳ ಹೂಡಿಕೆಗೆ ಹೆಚ್ಚು ಅನುಕೂಲವಾಗಲಿದೆ. ಅತ್ಯುತ್ತಮ ಮಾನವ ಸಂಪನ್ಮೂಲ ಸೃಷ್ಟಿಗೂ ಇದು ಸಹಾಯಕವಾಗುತ್ತದೆ.

ಭಾರತ-ಅಮೆರಿಕ ಪಾಲುದಾರಿಕೆಯಲ್ಲಿ ಕರ್ನಾಟಕದ ಪಾತ್ರ ಮಹತ್ವದ್ದಾಗಿದೆ. ತಂತ್ರಜ್ಞಾನ ಮತ್ತು ಡಿಜಿಟಲ್ ವ್ಯವಸ್ಥೆಯ ಬೆಳವಣಿಗೆಗೆ ರಾಜ್ಯವು ಅನನ್ಯ ಕೊಡುಗೆ ನೀಡಿದೆ. 220 ಬಿಲಿಯನ್‌ನಷ್ಟು ಒಟ್ಟು ದೇಶದ ಉತ್ಪನ್ನ (ಜಿಎಸ್‌ಡಿಪಿ) ಹೊಂದಿರುವ ಕರ್ನಾಟಕದ ಕೊಡುಗೆ ಅಪಾರ ಎಂದ ಅವರು, ಮಾಹಿತಿ-ಜೈವಿಕ ತಂತ್ರಜ್ಞಾನ, ಆರೋಗ್ಯ, ಆವಿಷ್ಕಾರ, ಎಲೆಕ್ಟ್ರಾನಿಕ್ಸ್, ಯಂತ್ರೋಪಕರಣ, ಏರೋಸ್ಪೇಸ್ ಮುಂತಾದ ಕ್ಷೇತ್ರಗಳಲ್ಲಿಯೂ ರಾಜ್ಯವು ಮುಂಚೂಣಿಯಲ್ಲಿದೆ ಎಂದು ಹೇಳಿದರು.

ವರ್ಚುಯಲ್‌ ಸಭೆಯಲ್ಲಿ ಭಾರತದಲ್ಲಿ ಸ್ಯಾನ್‌ಪ್ರಾನ್ಸಿಸ್ಕೋ ರಾಜ್ಯದ ಕಾನ್ಸುಲ್‌ ಜನರಲ್‌ ಡಾ.ಟಿ.ವಿ.ನಾಗೇಂದ್ರ ಪ್ರಸಾದ್‌, ಉಪಕಾನ್ಸುಲ್‌ ಜನರಲ್‌ ರಾಜೇಶ್‌ ನಾಯಕ್‌, ಅಮೆರಿಕ-ಭಾರತ ಕಾರ್ಯತಂತ್ರ ವೇದಿಕೆಯ ಅಧ್ಯಕ್ಷ ಜಾನ್‌ ಛೇಂಬರ್ಸ್‌, ವೆಸ್ಟ್‌ ಕೋಸ್ಟ್‌ ವಿಭಾಗದ ಮುಖ್ಯಸ್ಥರಾದ ದೀಪ್ತಿ ದೇಸಾಯಿ, ACS ಡಾ. ರಮಣರೆಡ್ಡಿ ಪಾಲ್ಗೊಂಡಿದ್ದರು.

ಭಾರತ-ಅಮೆರಿಕ ಪಾಲುದಾರಿಕೆಯಲ್ಲಿ ಕರ್ನಾಟಕದ ಪಾತ್ರ ಮಹತ್ವದ್ದಾಗಿದೆ. ತಂತ್ರಜ್ಞಾನ ಮತ್ತು ಡಿಜಿಟಲ್ ವ್ಯವಸ್ಥೆಯ ಬೆಳವಣಿಗೆಗೆ ರಾಜ್ಯವು ಅನನ್ಯ ಕೊಡುಗೆ ನೀಡಿದೆ. 220 ಬಿಲಿಯನ್‌ನಷ್ಟು ಒಟ್ಟು ದೇಶದ ಉತ್ಪನ್ನ (ಜಿಎಸ್‌ಡಿಪಿ) ಹೊಂದಿರುವ ಕರ್ನಾಟಕದ ಕೊಡುಗೆ ಅಪಾರ.

4/6

— Dr. Ashwathnarayan C. N. (@drashwathcn) March 30, 2021

Related News

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.