• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೇಂದ್ರ ಸರಕಾರ ಒಂದು ಪಕ್ಷದ್ದಲ್ಲ, ಒಂದು ವ್ಯಕ್ತಿ ಮತ್ತು ಕಂಪನಿಗಳದ್ದು: ರೈತ ನಾಯಕ ರಾಕೇಶ್ ಟಿಕಾಯತ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಕೇಂದ್ರ ಸರಕಾರ ಒಂದು ಪಕ್ಷದ್ದಲ್ಲ, ಒಂದು ವ್ಯಕ್ತಿ ಮತ್ತು ಕಂಪನಿಗಳದ್ದು: ರೈತ ನಾಯಕ ರಾಕೇಶ್ ಟಿಕಾಯತ್
0
SHARES
0
VIEWS
Share on FacebookShare on Twitter

ಲಕ್ನೋ, ಆ. 08: ಹಿಂದಿ ವಾಹಿನಿ ಆಜ್ ತಕ್ ವತಿಯಿಂದ ನಡೆದ ಸರ್ವಪಕ್ಷ ಸಮಾವೇಶ ‘ಪಂಚಾಯತ್ ಆಜ್ ತಕ್’ ನಲ್ಲಿ ಉತ್ತರಪ್ರದೇಶದ ಎಲ್ಲಾ ಪಕ್ಷಗಳ ಪ್ರಮುಖ ನಾಯಕರು ಭಾಗಿಯಾದರು. ಈ ಕಾರ್ಯಕ್ರಮದಲ್ಲಿ ಹಲವು ದಿಗ್ಗಜ ನಾಯಕರೊಂದಿಗೆ ರಾಜಕೀಯ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗಿಯಾದ ರೈತ ನಾಯಕ ರಾಕೇಶ್ ಟಿಕಾಯತ್, ಕೇಂದ್ರ ಸರಕಾರವನ್ನು ಕೇವಲ ಒಂದು ವ್ಯಕ್ತಿ ಮತ್ತು ಕೆಲವು ಕಂಪನಿಗಳು ನಡೆಸುತ್ತಿವೆ. ಇದು ಒಂದು ಪಕ್ಷದ ಸರಕಾರವಾಗಿದ್ದರೆ ಅದರಲ್ಲಿ ಹಲವು ನಾಯಕರಿರುತ್ತಿದ್ದರು, ಅವರ ಮಧ್ಯೆ ಪರಸ್ಪರ ಚರ್ಚೆ ನಡೆದು ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದರು, ಆದರೆ ಇಲ್ಲಿ ಎಲ್ಲದ್ದಕ್ಕೂ ಒಬ್ಬರ ಮಾತನ್ನೇ ಕಾಯಬೇಕಾಗಿದೆ. ಹೊಸ ಕೃಷಿ ಕಾನೂನುಗಳನ್ನು ವಾಪಾಸ್ ಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ಟಿಕಾಯತ್ ಪುನರುಚ್ಚರಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಯುಪಿ ಸಿಎಂ ಯೋಗಿ, ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡುವವರನ್ನು ಯುಪಿ ಸ್ವಾಗತಿಸುತ್ತದೆ. ನಾವು ಚರ್ಚೆಗೂ ತಯಾರಿದ್ದೇವೆ. ಆದರೆ ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸುವವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಯೋಗಿ ಹೇಳಿದರು. 

ಇನ್ನು ಮಾಜಿ ಸಿಎಂ ಅಖಿಲೇಶ್, ನಾವು ಬಿಜೆಪಿಯವರಿಗಿಂತ ದೊಡ್ಡ ಹಿಂದೂಗಳು, ಅವರಿಂದ ನಾವು ಹಿಂದುತ್ವವನ್ನು ಕಲಿಯಬೇಕಿಲ್ಲ. ಸಮಾಜವಾದಿ ಪಕ್ಷ 300ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅಖಿಲೇಶ್ ವಿಶ್ವಾಸ ವ್ಯಕ್ತಪಡಿಸಿದರು.

ಈ ಬಾರಿ 300ಕ್ಕೂ ಅಧಿಕ ಸೀಟ್ ಬಿಜೆಪಿ ಗೆಲ್ಲಲಿದೆ, ಮೋದಿ-ಶಾ ಜೋಡಿ ಜೊತೆ ಇಡೀ ಯುಪಿ ಇದೆ ಎಂದು ಡಿಸಿಎಂ ಕೇಶವ ಮೌರ್ಯ ಹೇಳಿದರೆ, ಮಾಯಾವತಿಯವರ ಪಕ್ಷ ಬಿ ಎಸ್ ಪಿ ಈ ಬಾರಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಬಿಜೆಪಿ ಧರ್ಮದ ಹೆಸರಲ್ಲಿ ಕೆಟ್ಟ ರಾಜಕಾರಣ ಮಾಡುತ್ತಿದೆ. ಇವರ ಆಡಳಿತದಲ್ಲಿ ಬ್ರಾಹ್ಮಣರ ಹತ್ಯೆಯೂ ನಡೆಯುತ್ತಿದೆ ಎಂದು ಬಿ ಎಸ್ ಪಿಯ ರಾಷ್ಟ್ರೀಯ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾರವರು ಆರೋಪಿಸಿದ್ದಾರೆ.

ಜಲಸಂಪನ್ಮೂಲ ಮಂತ್ರಿ ಮಹೇಂದ್ರ ಸಿಂಗ್, ಬಿಜೆಪಿ ಸರಕಾರವು ಉತ್ತರಪ್ರದೇಶದಿಂದ ರೊಹಿಂಗ್ಯರನ್ನು ಖಂಡಿತವಾಗಿಯೂ ಖಾಲಿ ಮಾಡಿಸುತ್ತದೆ, ಬೇರೆ ಸರಕಾರಗಳು ಬೇಕಾದರೆ ಅವರಿಗೆ ಆಶ್ರಯ ಕೊಟ್ಟುಕೊಳ್ಳಲಿ ಎಂದು ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಹಾಲಿ ಸಿಎಂ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ, , ರೈತ ನಾಯಕ ರಾಕೇಶ್ ಟಿಕಾಯತ್, ಮಾಜಿ ಸಿಎಂ ಅಖಿಲೇಶ್ ಯಾದವ್, ಏಐಎಂಐಎಂ ನಾಯಕ ಅಸದುದ್ದೀನ್ ಓವೈಸಿ, ಆಪ್ ನ ಸಂಸದ ಸಂಜಯ್ ಸಿಂಗ್, ನಿಷಾದ್ ಪಾರ್ಟಿಯ ಸಂಜಯ್ ನಿಷಾದ್, ಬಿ ಎಸ್ ಪಿಯ ರಾಷ್ಟ್ರೀಯ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ, ಬಿಜೆಪಿ ಸಂಸದ, ಭೋಜ್ಪುರಿ ನಟ ಮನೋಜ್ ತಿವಾರಿ,  ಭೀಮ್ ಆರ್ಮಿ ಪಾರ್ಟಿಯ ಅಧ್ಯಕ್ಷ ಚಂದ್ರಶೇಖರ್ ಆಜಾದ್ ರಾವಣ್ ಸೇರಿ ಹಲವಾರು ಪ್ರಾದೇಶಿಕ ನಾಯಕರೂ ಭಾಗಿಯಾದರು.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.