ಬಡ್ಡಿದರ ಪರಿಷ್ಕೃತಗೊಳಿಸಿ ಹೊರಡಿಸಿದ್ದ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಹೊಸದಿಲ್ಲಿ, ಎ. 01: ಸಣ್ಣ ಉಳಿತಾಯ ಯೋಜನೆಗಳ ಮೇಲಿನ ವಾರ್ಷಿಕ ಬಡ್ಡಿ ದರ ಕಡಿಮೆ ಮಾಡಿ ಹೊರಡಿಸಲಾಗಿದ್ದ ಆದೇಶ ಹಿಂಪಡೆಯಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʻಈ ಆದೇಶವನ್ನು ಸರ್ಕಾರ ಹಿಂಪಡೆದಿದೆ. ಭಾರತ ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳು 2020–21ರ ನಾಲ್ಕನೇ ತ್ರೈಮಾಸಿಕದಲ್ಲಿ, ಅಂದರೆ 2021ರ ಮಾರ್ಚ್‌ ವರೆಗೆ ಇದ್ದ ದರಗಳು ಮುಂದುವರಿಯಲಿವೆʼ ಎಂದು ಹೇಳಿದ್ದಾರೆ.

ಸುಕನ್ಯಾ ಸಮೃದ್ಧಿ ಯೋಜನೆ, ರಾಷ್ಟ್ರೀಯ ಉಳಿತಾಯ ಪತ್ರ (ಎನ್‌ಎಸ್‌ಸಿ), ಪಿಪಿಎಫ್‌, ನಿಗದಿತ ಠೇವಣಿ, ಉಳಿತಾಯ ಖಾತೆ ಸೇರಿದಂತೆ ಎಲ್ಲಾ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಇಳಿಕೆ ಮಾಡಲಾಗಿತ್ತು. ಪರಿಷ್ಕೃತ ಬಡ್ಡಿ ದರಗಳು ಏಪ್ರಿಲ್‌ 1ರಿಂದ ಅನ್ವಯ ಆಗಲಿದ್ದು, ಏಪ್ರಿಲ್‌–ಜೂನ್‌ ತ್ರೈಮಾಸಿಕದಲ್ಲಿ (2021ರ ಜೂನ್‌ 30ರವರೆಗೆ) ಜಾರಿಯಲ್ಲಿ ಇರಲಿವೆ ಎಂದು ಪ್ರಕಟಿಸಲಾಗಿತ್ತು.

Exit mobile version