ಬೆಂಗಳೂರು, ಆ. 10: ಮೊದಲಿನಿಂದಲೂ ಕಾವೇರಿ ನದಿ ವಿವಾದವಿದ್ದು ತಮಿಳುನಾಡು ನೀರಿನ ವಿಷಯದಲ್ಲಿ ಸದಾ ಖ್ಯಾತೆ ತೆಗೆಯುತ್ತಿದ್ದು , ಇದೀಗ ಮೇಕೆದಾಟು ಯೋಜನೆಯಲ್ಲೂ ಕೂಡ ವಿವಾದ ಎಬ್ಬಿಸುತ್ತಿದೆ. ಆದರೆ ಯಾವುದೇ ಕಾರಣಕ್ಕೂ ನಾವು ಮೇಕೆದಾಟು ಯೋಜನೆಯಿಂದ ಹಿಂದೆ ಸರಿಯುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ನೀರು ನಮ್ಮ ಹಕ್ಕು ನಾವು ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಯಿಂದ ಹಿಂದೆ ಸರಿಯುವುದಿಲ್ಲ. ಈ ವಿಷಯವನ್ನು ಮುಂದಿಟ್ಟುಕೊಂಡು ಅಲ್ಲಿನ ಸಾಕಷ್ಟು ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದು ಹೋಗಿವೆ. ಆದರೆ ಈ ಯೋಜನೆ ಬಗ್ಗೆ ಏನೇ ಹೇಳಿದರೂ ಕೂಡ ನಾವು ಮೇಕೆ ದಾಟು ಯೋಜನೆ ಕೈಬಿಡುವುದಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸಚಿವ ಸಂಪುಟದ ಬಗ್ಗೆ ಪ್ರತಿಕ್ರಿಯಿಸಿದ ಅವರು ಸಂಪುಟ ವಿಸ್ತರಣೆಯ ಬಗ್ಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಸಣ್ಣಪುಟ್ಟ ಅಸಮಧಾನ ಇರಬಹುದು ಅದನ್ನು ಮುಂದಿನ ದಿನಗಳಲ್ಲಿ ಬಗೆಹರಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.