• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕಿಡಿಗೇಡಿ ಸಿನಿಮಾಗೆ ತೆರಿಗೆ ವಿನಾಯ್ತಿ ಯಾಕೆ? : ರಣಧೀರ ಪಡೆ!

Mohan Shetty by Mohan Shetty
in ರಾಜ್ಯ
cm
0
SHARES
0
VIEWS
Share on FacebookShare on Twitter

ಸದ್ಯ ಭಾರತದಲ್ಲಿ ನೋಡುಗರ ಗಮನ ಸೆಳೆಯುತ್ತಿರುವ ‘ದಿ ಕಾಶ್ಮೀರ್ ಫೈಲ್ಸ್’(The Kashmir Files) ಚಿತ್ರಕ್ಕೆ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ. 1990ರ ದಶಕದಲ್ಲಿ ಕಾಶ್ಮೀರಿ ಪಂಡಿತರ(Kashmir Pandits) ಮೇಲೆ ಅವರ ಸ್ವಂತ ನೆಲೆದ ಮೇಲಾದ, ದೌರ್ಜನ್ಯದ ಕಥಾಹಂದರ ಹೊಂದಿರುವ ಈ ಚಿತ್ರ, ಭಾವನಾತ್ಮಕವಾಗಿ(Emotionally) ನೋಡುಗರನ್ನು ಸೆಳೆಯುತ್ತಿದೆ. ಇನ್ನು ಈ ಚಿತ್ರಕ್ಕೆ ಕರ್ನಾಟಕ(Karnataka) ರಾಜ್ಯ(State) ಸರ್ಕಾರ(Government) ತೆರಿಗೆ ವಿನಾಯ್ತಿ ಘೋಷಿಸಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರದ ಈ ಕ್ರಮಕ್ಕೆ ಕರ್ನಾಟಕ ರಣಧೀರ ಪಡೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘ದಿ ಕಾಶ್ಮೀರ್ ಫೈಲ್ಸ್’ ಅದೊಂದು ಕಿಡಿಗೇಡಿ ಸಿನಿಮಾ.

the kashmir files

ಕೆಲವರು ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಇಂತಹ ಸಿನಿಮಾ ಮಾಡುತ್ತಾರೆ. ಇದು ಸಾಮಾಜಿಕ ಸಿನಿಮಾವಲ್ಲ, ಶಾಂತಿ ಕದಡುವ ಸಿನಿಮಾ. ಸುಳ್ಳುಗಳನ್ನ ಅತಿರಂಜಿತವಾಗಿ, ಭಾವನಾತ್ಮಕವಾಗಿ, ಭೀಬತ್ಸವಾಗಿ ತೋರಿಸುವ ಮೂಲಕಜನರ ಮಧ್ಯೆ ಅಪನಂಬಿಕೆ ಹುಟ್ಟಿಸಲಾಗುತ್ತಿದೆ. ಇಂತಹ ಕಿಡಿಗೇಡಿ ಸಿನಿಮಾಗಾಗಿ ಕರ್ನಾಟಕ ಸರ್ಕಾರ ತೆರಿಗೆ ವಿನಾಯ್ತಿ ನೀಡಿರುವ ಕ್ರಮ, ಕನ್ನಡಿಗರ ಖಜಾನೆಗೆ ಮಾಡಿರುವ ದೋಖಾ ಎಂದು ಕರ್ನಾಟಕ ರಣಧೀರ ಪಡೆ ಸಿಎಂ ಬೊಮ್ಮಾಯಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

chief minister


ಇನ್ನು ಕೊರೋನಾ ಕಾಲದಿಂದಲೂ ಕರ್ನಾಟಕ ಚಿತ್ರರಂಗ ಸಾಕಷ್ಟು ಸಂಕಷ್ಟ ಎದುರಿಸುತ್ತಿದೆ. ಸಾವಿರಾರೂ ಕಾರ್ಮಿಕರು, ತಂತ್ರಜ್ಞರು ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಆದರೆ ಕನ್ನಡ ಚಿತ್ರರಂಗದ ಸಂಕಟಕ್ಕೆ ಮಿಡಿಯದ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮನಸ್ಸು, ಯಾವುದೋ ಅನ್ಯಭಾಷೆಯ, ಕರ್ನಾಟಕಕ್ಕೆ ಸಂಬಂಧ ಪಡದ ‘ದಿ ಕಾಶ್ಮೀರಿ ಫೈಲ್ಸ್’ ಎಂಬ ಚಿತ್ರಕ್ಕೆ ಮಿಡಿದಿರುವುದು ನಿಜಕ್ಕೂ ದುರದೃಷ್ಠಕರ. ಸಿಎಂ ಬೊಮ್ಮಾಯಿ ಅವರ ಈ ನಡೆಯ ಹಿಂದೆ ರಾಜಕೀಯ ಲೆಕ್ಕಾಚಾರವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ.

ಬಿಜೆಪಿಯ ಪರೋಕ್ಷ ಹೈಕಮಾಂಡ್ ಆಗಿರುವ ಆರ್‍ಎಸ್‍ಎಸ್ ನಾಯಕರನ್ನು ಮೆಚ್ಚಿಸಲು ಸಿಎಂ ಬೊಮ್ಮಾಯಿಯವರು ಈ ಕ್ರಮ ತೆಗೆದುಕೊಂಡಿದ್ದು, ಈ ಮೂಲಕ ಕನ್ನಡಿಗರ ಖಜಾನೆಗೆ ತೂತು ಮಾಡಿದ್ದಾರೆ. ಸಿಎಂ ಬೊಮ್ಮಾಯಿಯವರು ತಕ್ಷಣವೇ ಇದನ್ನು ನಿಲ್ಲಿಸಬೇಕು. ಪ್ರಜಾಸತ್ತಾತ್ಮಕವಾಗಿ ನಡೆದುಕೊಂಡು, ರಾಜಧರ್ಮ ಪಾಲಿಸಬೇಕೆಂದು ಆಗ್ರಹಿಸಿದರು. ಸಮಾಜದಲ್ಲಿ ಸೌಹಾರ್ದ ವಾತಾವರಣ ಸೃಷ್ಠಿಸುವ, ಉತ್ತಮ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಿನಿಮಾಗಳಿಗೆ ತೆರಿಗೆ ನಿನಾಯ್ತಿ ನೀಡುವುದರಿಂದ ಸಮಾಜದಲ್ಲಿ ಸ್ವಾಸ್ಥ್ಯ ನೆಲೆಸುತ್ತದೆ.

the kashmir files

ಆದರೆ ‘ದಿ ಕಾಶ್ಮೀರಿ ಫೈಲ್ಸ್’ನಂತ ಸಿನಿಮಾಗಳಿಂದ ಸಮಾಜದಲ್ಲಿ ಅಶಾಂತಿ ನಿರ್ಮಾಣವಾಗುತ್ತದೆ. ಸಂವಿಧಾನದ ಆಶಯಗಳಿಗೆ ಪೂರಕವಾಗಿರುವ ಸಮಾಜವನ್ನು ರೂಪಿಸುವತ್ತ ಸಿಎಂ ಬೊಮ್ಮಾಯಿಯವರು ಗಮನ ಹರಿಸಬೇಕಿದೆ. ಅದನ್ನು ಬಿಟ್ಟು ಈ ರೀತಿಯ ಕಿಡಿಗೇಡಿ ಸಿನಿಮಾಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕೆಂದು ಕರ್ನಾಟಕ ರಣಧೀರ ಪಡೆ ಸಿಎಂ ಬೊಮ್ಮಾಯಿಯವರನ್ನು ಆಗ್ರಹಿಸಿದೆ.

Tags: basavarajbommaicinemaKarnatakathekashmirfiles

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.