• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಜೆಟ್‌ ಮಂಡಿಸುವ ನೈತಿಕತೆ ರಾಜ್ಯ ಸರ್ಕಾರಕ್ಕಿಲ್ಲ: ಸಿದ್ಧರಾಮಯ್ಯ ವಾಗ್ದಾಳಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಬಜೆಟ್‌ ಮಂಡಿಸುವ ನೈತಿಕತೆ ರಾಜ್ಯ ಸರ್ಕಾರಕ್ಕಿಲ್ಲ: ಸಿದ್ಧರಾಮಯ್ಯ ವಾಗ್ದಾಳಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಮಾ, 08: ಈ ಭಾರಿಯ ಬಜೆಟ್ ಮಂಡಿಸಲು ಹಾಗೂ ಅಧಿಕಾರದಲ್ಲಿ ಇರಲು ರಾಜ್ಯ ಸರ್ಕಾರಕ್ಕೆ ನೈತಿಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್ ಮಂಡಿಸುವ ಮುನ್ನ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಯಡಿಯೂರಪ್ಪ ಹಾಗೂ ಕೋರ್ಟ್‌ಗೆ ಹೋಗಿರುವ ಆರು ಸಚಿವರ ವಿರುದ್ಧ ಹರಿಹಾಯ್ದರು.

ಕಪ್ಪು ಪಟ್ಟಿ ಧರಿಸಿ ಸದನ ಪ್ರವೇಶ ಮಾಡುತ್ತೇವೆ. ಈ ಬಜೆಟ್ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ. ಬಜೆಟ್ ಮಂಡನೆ ವೇಳೆ ನಾವು ಸದನವನ್ನು ಬಹಿಷ್ಕರಿಸಿ, ಸಭಾತ್ಯಾಗ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ವಿಧಾನಸಭೆ ಇತಿಹಾಸದಲ್ಲಿ ಮೊದಲ ಬಾರಿ ಈ ರೀತಿಯ ಸಭಾತ್ಯಾಗ ನಡೆಯಲಿದೆ.

2011ರಲ್ಲಿ ನಡೆದಿದ್ದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಅಲಂ ಪಾಷಾ ಎಂಬುವವರಿಗೆ ಹಂಚಿಕೆಯಾಗಿದ್ದ ಭೂಮಿಯಲ್ಲಿ, 26 ಎಕರೆ ಬಡಾವಣೆ ಯೋಜನೆಯಲ್ಲಿ ಡಿನೋಟಿಫೈಗೆ ಸಂಬಂಧಿಸಿದಂತೆ ಅವ್ಯವಹಾರ ಆರೋಪ ಬಂದಿತ್ತು. ಇದರ ವಿರುದ್ಧ ತನಿಖೆ ನಡೆಸುವಂತೆ ಯಡಿಯೂರಪ್ಪ ಮತ್ತು ಮುರುಗೇಶ್ ನಿರಾಣಿ ವಿರುದ್ಧ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅಲ್ಲಿ ಅವರಿಗಿನ್ನೂ ರಿಲೀಫ್ ಸಿಕ್ಕಿಲ್ಲ. ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನಿನ ಮೇಲೆ ಹೊರಗಿದ್ದಾರೆ. ಹೀಗಿರುವಾಗ ಅವರಿಗೆ ಬಜೆಟ್ ಮಂಡಿಸಲು ನೈತಿಕತೆ ಇಲ್ಲ ಎಂದು ಆರೋಪಿಸಿದರು.

ಜತೆಗೆ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ಪ್ರಸ್ತಾಪಿಸಿದ ಸಿದ್ದರಾಮಯ್ಯ, ನ್ಯಾಯಾಲಯದ ಮೆಟ್ಟಿಲೇರಿದ ಆರು ಶಾಸಕರ ವಿರುದ್ಧ ಕಿಡಿಕಾರಿದರು. ಇವರೆಲ್ಲ ಪ್ರಮಾಣವಚನ ಸ್ವೀಕರಿಸಿ ಸಚಿವರಾದವರು. ಈಗ ಭಯ ಇದೆ ಎಂದು ಕೋರ್ಟ್‌ಗೆ ಹೋಗಿದ್ದಾರೆ. ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರಿಯಲು ಅರ್ಹತೆ ಇಲ್ಲ ಎಂದು ಹೇಳಿದರು.

‘ನಾನು ತಪ್ಪು ಮಾಡಿಲ್ಲ, ಹೀಗಾಗಿ ಕೋರ್ಟ್‌ಗೆ ಹೋಗಿಲ್ಲ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ. ಹಾಗಾದರೆ ಉಳಿದವರು ಏನು ಮಾಡಿದ್ದಾರೆ’ ಎಂದು ಸಿದ್ದರಾಮಯ್ಯ ವ್ಯಂಗ್ಯವಾಗಿ ಪ್ರಶ್ನಿಸಿದರು. ಬಜೆಟ್ ಕಲಾಪ ಸಭಾತ್ಯಾಗದ ನಿರ್ಧಾರವನ್ನು ಕೈಬಿಡುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮನವೊಲಿಕೆಗಾಗಿ ಸರ್ಕಾರ ಮುಂದಾಯಿತು. ಕಾನೂನು ಸಚಿವ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ. ಸೋಮಣ್ಣ ಅವರು ಸಿದ್ದರಾಮಯ್ಯ ಕೊಠಡಿಗೆ ತೆರಳಿ ಸಂಧಾನ ಪ್ರಯತ್ನ ನಡೆಸಿದರು.

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.