ಪೊಲೀಸ್‌ ಮನೆಗೆ ಕನ್ನ ಹಾಕಿದ ಖದೀಮರು

ಬೆಂಗಳೂರು ಅ 02 :  ನಗರದ ಪೊಲೀಸ್ ಕ್ವಾಟ್ರಸ್ ನಲ್ಲಿ ಕಳ್ಳರು ಕೈಚಳಕ ತೋರಿಸಿದ್ದು, ಪೊಲೀಸ್ ಪೇದೆಯ ಮನೆಯಲ್ಲಿ ಕಳ್ಳತನ ಮಾಡಿದ್ದಾರೆ.

ಶೇಷಾದ್ರಿಪುರಂನಲ್ಲಿರುವ ಆನಂದರಾವ್ ಸರ್ಕಲ್ ಪೊಲೀಸ್ ಕ್ವಾಟ್ರಸ್ ನಲ್ಲಿ ಕಳ್ಳತನ ನಡೆದಿದೆ. ಪೊಲೀಸ್ ಕ್ವಾಟ್ರಸ್ ನಲ್ಲಿ ಸಿಸಿಟಿವಿ ಇಲ್ಲದಿರುವುದನ್ನು ಬಂಡವಾಳ ಮಾಡಿಕೊಂಡ ಕಳ್ಳರು ಪೊಲೀಸರ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾರೆ.

ಪೊಲೀಸ್ ಕ್ವಾರ್ಟಸ್ ನಲ್ಲಿ ಸಿಸಿಟಿವಿ ಇಲ್ಲದೆ ಇರುವುದು ಕಳ್ಳರಿಗೆ ಬಂಡವಾಳ ಮಾಡಿಕೊಂಡ ಖದೀಮರು ಭಾರತ್ ಬಂದ್ ಕರ್ತವ್ಯ ಕ್ಕೆ ಹಾಜರಾಗಿದ್ದ ಹೆಡ್ ಕಾನ್ಸ್ ಟೇಬಲ್ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾರೆ. ಬಂದೋಬಸ್ತ್ ಕರ್ತವ್ಯಕ್ಕೆ ಬೆಳ್ಳಗ್ಗೆ 6 ಗಂಟೆಗೆ ಬೀಗ ಹಾಕಿ ಹೋಗಿದ್ದ ಹೆಡ್ ಕಾನ್ಸ್ ಟೇಬಲ್ ಮರುದಿನ ಬೆಳಗ್ಗೆ ಕ್ವಾರ್ಟಸ್ ಗೆ ಬಂದು ನೋಡಿದಾಗ ಕಳ್ಳತನ ಬೆಳಕಿಗೆ ಬಂದಿದೆ.

ಅವರು ಮನೆಗೆ ಬಂದು ನೋಡಿದಾಗ ಬೀಗ ಮುರಿದಿದ್ದು, ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕಳ್ಳರು ಮನೆಯಲ್ಲಿದ್ದ ಚಿನ್ನ, ಬೆಳ್ಳಿ, ಮೊಬೈಲ್ ಫೋನ್ ಸೇರಿ ಸುಮಾರು 85 ಸಾವಿರ ರೂ. ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ಹೆಡ್ ಕಾನ್ಸ್ ಟೇಬಲ್ ಶೇಷಾದ್ರಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Exit mobile version