• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ – ಡಾ. ಅಶ್ವತ್ಥ್ ನಾರಾಯಣ್

Preetham Kumar P by Preetham Kumar P
in ಪ್ರಮುಖ ಸುದ್ದಿ
ನಕಲಿ ಡಾಕ್ಟರೇಟ್ ಅಥವಾ ಅನಧಿಕೃತ ಪದವಿ ನೀಡಿದರೆ ಕಠಿಣ ಶಿಕ್ಷೆ – ಡಾ. ಅಶ್ವತ್ಥ್ ನಾರಾಯಣ್
0
SHARES
0
VIEWS
Share on FacebookShare on Twitter

ಬೆಂಗಳೂರು ಸೆ 29 : ಕೊರೊನಾ ಹಿನ್ನಲೆಯಲ್ಲಿ ಪ್ರಸಕ್ತ ಸಾಲಿನ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್  ನಾರಾಯಣ್ ತಿಳಿಸಿದ್ದಾರೆ  

ಈ ಬಗ್ಗೆ ಅನುದಾನರಹಿತ ಎಂಜಿನಿಯರಿಂಗ್ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಮತ್ತು ಭಾಷಾ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳ ಜತೆ ಬುಧವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಆಡಳಿತ ಮಂಡಳಿಯವರು ಶೇಕಡ 30ರಷ್ಟು ಶುಲ್ಕ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ, ಸರ್ಕಾರ ಅದನ್ನು ಒಪ್ಪಿಕೊಂಡಿಲ್ಲ. ಪ್ರವೇಶ ಶುಲ್ಕದಲ್ಲಿ ಯಾವುದೇ ಬದಲಾವಣೆಯೂ ಇರುವುದಿಲ್ಲ ಎಂದರು.

ಜೊತೆಗೆ ಕಾಲೇಜು ಆಡಳಿತ ಮಂಡಳಿಗಳು ಇತರ ಶುಲ್ಕದ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚು ಹಣ ಪಡೆಯುವಂತಿಲ್ಲ. ಇತರ ಶುಲ್ಕ 120,000 ಮೀರುವಂತಿಲ್ಲ ಎಂದು ಸಚಿವರು ತಿಳಿಸಿದರು. ಇತರ ಶುಲ್ಕದ ವಿವರವನ್ನು ಎಲ್ಲ ಕಾಲೇಜುಗಳು ಕಡ್ಡಾಯವಾಗಿ ಕರ್ನಾಟ ಪರೀಕ್ಷಾ ಪ್ರಾಧಿಕಾರಕ್ಕೆ ಸಲ್ಲಿಸಬೇಕು. ಪ್ರಾಧಿಕಾರದ ಮೂಲಕವೇ ಇತರ ಶುಲ್ಕ ಪಾವತಿಸಬೇಕು. ಬಳಿಕ ಆಯಾ ಕಾಲೇಜುಗಳಿಗೆ ವರ್ಗಾವಣೆ ಮಾಡಲಾಗುತ್ತದೆ ಎಂದರು.

ಹಾಸ್ಟೆಲ್ ಮತ್ತು ವಾಹನ ಸೌಲಭ್ಯದ ಶುಲ್ಕವನ್ನು ಮಾತ್ರ ಕಾಲೇಜುಗಳು ನೇರವಾಗಿ ಸಂಗ್ರಹಿಸಬಹುದು. ಅತ್ಯಾಧುನಿಕ ಪ್ರಯೋಗಾಲಯ ಮತ್ತು ವಿಶೇಷ ಕೋರ್ಸ್ ಸೌಲಭ್ಯ ಇದ್ದಲ್ಲಿ ಈ ಕುರಿತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೂಲಕ ಮೌಲ್ಯಮಾಪನ ನಡೆಸಿ ಶುಲ್ಕ ನಿಗದಿ ಮಾಡಬೇಕು. ಅದನ್ನೂ ಪ್ರಾಧಿಕಾರದ ಮೂಲಕವೇ ಪಡೆಯಬೇಕು ಎಂದರು. ಜೊತೆಗೆ ಸ್ಕಿಲ್ ಟ್ರೈನಿಂಗ್ ಸಂಬಂಧ ಪಡೆಯುವ ಶುಲ್ಕವೂ ಸಹ 20 ಸಾವಿರ ರು. ಮೀರಬಾರದು ಎಂದು ಕಾಲೇಜು ಆಡಳಿತ ಮಂಡಳಿಗಳಿಗೆ ಸಚಿವರು ಖಡಕ್ ಸೂಚನೆ ನೀಡಿದ್ದಾರೆ. ನೀಟ್ ಪರೀಕ್ಷೆಯ ಮೂಲಕ ವೈದ್ಯಕೀಯ ಶಿಕ್ಷಣ ಸೀಟುಗಳ ಹಂಚಿಕೆ ಮುಗಿದ ಬಳಿಕವೇ ಎಂಜಿನಿಯರಿಂಗ್ ಸೀಟುಗಳ ಹಂಚಿಕೆಗೆ ಕೌನ್ಸೆಲಿಂಗ್ ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

ಮೊದಲ ಬಾರಿಗೆ ಕನ್ನಡದಲ್ಲಿ ಎಂಜಿನಿಯರಿಂಗ್ ಶಿಕ್ಷಣ : ಪ್ರಸಕ್ತ ಸಾಲಿನಿಂದ  ಇಂಜಿನಿಯರಿಂಗ್ ತರಗತಿಗಳನ್ನು ಕನ್ನಡ ಮಾಧ್ಯಮದಲ್ಲಿ ಮಾಡಲು ರಾಜ್ಯದ ನಾಲ್ಕು ಕಾಲೇಜುಗಳು ಮುಂದೆ ಬಂದಿದೆ. ಇಲ್ಲಿ ಕನ್ನಡದಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದುಕೊಳ್ಳಬಹುದಾಗಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ ನಾರಾಯಣ್ ತಿಳಿಸಿದರು. 

ಬಾಲ್ಕಿಯ ಖಂಡ್ರೆ ಕಾಲೇಜು, ಎಸ್ ಜೆ ಸಿ  ಚಿಕ್ಕಬಳ್ಳಾಪುರ, ಮಹಾರಾಜ – ಮೈಸೂರು,  ವಿಜಯಪುರದ ಬಿ ಎಲ್ ಡಿ ಕಾಲೇಜುಗಳಲ್ಲಿ ಮೂವತ್ತು ಪ್ರತಿಶತ ಕನ್ನಡ ಮಾಧ್ಯಮಕ್ಕೆ ಸೀಟ್ ನೀಡುವುದಾಗಿ ಭರವಸೆ ನೀಡಿವೆ ಎಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.