ಹಸು ಮೇಯಿಸಲು ಹೋದ ಮಹಿಳೆ ಬಲಿ ಪಡೆದ ಹುಲಿ: ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆ.

Mysore: ಬಂಡೀಪುರ (Bandipura) ಭಾಗದಲ್ಲಿ ಜನರ ನಿದ್ದೆಗೆಡಿಸಿದ್ದ ಹಾಗೂ ಮಹಿಳೆಯನ್ನು (Tiger Captured in Mysore) ಬಲಿ ಪಡೆದಿದ್ದ ಹುಲಿಯನ್ನು ಸೆರೆ ಹಿಡಿಯಲಾಗಿದ್ದು, ಮೈಸೂರು ಜಿಲ್ಲೆ

ನಂಜನಗೂಡು (Nanjangud) ತಾಲೂಕಿನ ಹೆಡಿಯಾಲ ಗ್ರಾಮದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿದಿದ್ದಾರೆ. ಅರವಳಿಕೆ ಚುಚ್ಚುಮದ್ದು ನೀಡಿ ಯಶಸ್ವಿಯಾಗಿ

ಹುಲಿಯನ್ನು (Tiger Captured in Mysore) ಹಿಡಿಯಲಾಗಿದೆ.

ನವೆಂಬರ್ (November) 24 ರಂದು ಹೆಡಿಯಾಲ ವಲಯ ಅರಣ್ಯ ವ್ಯಾಪ್ತಿಯಲ್ಲಿ ಬಳ್ಳೂರು ಹುಂಡಿಬಳಿ ದನ ಮೇಯಿಸಲು ಹೋಗಿದ್ದ ಮಹಿಳೆ ರತ್ನಮ್ಮ (55) ಎಂಬ ಮಹಿಳೆಯ ಮೇಲೆ ದಾಳಿ ನಡೆಸಿ ಕೊಂದು

ಹಾಕಿದ್ದ ಹುಲಿಯನ್ನು ಸೆರೆ ಹಿಡಿಯಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಹುಲಿ ಸೆರೆ ಹಿಡಿದಿದ್ದಾರೆ.

ಅರಣ್ಯ ವ್ಯಾಪ್ತಿಯಲ್ಲಿ ದನ ಮೇಯಿಸಲು ಹೋಗಿದ್ದ ರತ್ನಮ್ಮ (Rathnamma) ಎಂಬ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿ ಆಕೆಯನ್ನು ಕೊಂದು ಅಲ್ಲದೇ ದೇಹದ ಭಾಗವನ್ನೂ ತಿಂದು ಹಾಕಿತ್ತು. ಮರು

ದಿನ ಅದೇ ಗ್ರಾಮದ ಹಸುವೊಂದರ ಮೇಲೆ ದಾಳಿನಡೆಸಿ ಕೊಂದು ಹಾಕಿತ್ತು. ಗ್ರಾಮದ ಜನರಲ್ಲಿ ಆತಂಕ ಹೆಚ್ಚಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

ಇದೀಗ ಮೂರು ದಿನಗಳ ಸತತ ಕಾರ್ಯಾಚರಣೆಯಿಂದ ಹುಲಿಯನ್ನು (Tiger) ಸೆರೆ ಹಿಡಿಯಲಾಗಿದೆ ಅಲ್ಲದೆ ಎರಡು ದಿನದ ಹಿಂದೆ ಹಸುವೊಂದನ್ನು ಕೊಂದಿದ್ದ ಹುಲಿ ಸೋಮವಾರ ಮಧ್ಯರಾತ್ರಿ 1.45 ಕ್ಕೆ

ಹೊತ್ತಿಗೆ ಅದೆ ಜಾಗಕ್ಕೆ ಬಂದ ಹುಲಿಯನ್ನು ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದ್ದು 10 ವರ್ಷದ ಗಂಡು ಹುಲಿ ಇದಾಗಿದ್ದು ಸದ್ಯ ಮೈಸೂರು (Mysore) ಮೃಗಾಲಯದಲ್ಲಿ ಬಿಡಲಾಗಿದೆ.

ಮತ್ತೊಂದೆಡೆ ಹುಲಿ ಸೆರೆಗೆ ಸಾಕಾನೆ ಹಾಗೂ ಡ್ರೋನ್ (Drone) ಬಳಸಿ ನಿರಂತರ ಶೋಧ ನಡೆಸಲಾಗಿತ್ತು. ಸಾಕಾನೆಗಳಾದ ರೋಹಿತ್, ಪಾರ್ಥ, ಹಿರಣ್ಯಾ ಆನೆಗಳ ಮೂಲಕ ಕಾರ್ಯಾಚರಣೆ

ನಡೆಯುತ್ತಿತ್ತು. ಟ್ರ್ಯಾಪ್ ಕ್ಯಾಮೆರಾಗಳನ್ನು (Trap Camera) ಹಾಕಿ ಹುಲಿಗಾಗಿ ಹುಡುಕಾಟ ನಡೆಸಲಾಗಿತ್ತು. ಅಲ್ಲದೆ ಈ ವೇಳೆ ಎರಡು ಹುಲಿಗಳ ಓಡಾಟ ಪತ್ತೆಯಾಗಿತ್ತು. ಅಷ್ಟೇ ಅಲ್ಲ ಸಾಕುಪ್ರಾಣಿಗಳ

ಮೇಲೆ ದಾಳಿ ನಡೆದಿದ್ದೂ ಪತ್ತೆಯಾಗಿತ್ತು.

ಅಧಿಕಾರಿಗಳು ಸೇರಿ 207 ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆದಿದೆ.ಕೊನೆಗೆ 100 ಗಿರಿಜನರು ಹುಲಿ ಪತ್ತೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಇನ್ನು ಹುಲಿ ಒಮ್ಮೆ ಬೇಟೆಯಾಡಿದ ಸ್ಥಳಕ್ಕೆ ಮತ್ತೊಮ್ಮೆ

ಬೇಟೆಗಾಗಿ ಬಂದೇ ಬರುತ್ತದೆ, ಎಂಬ ಕಾರಣದಿಂದ ಹುಲಿ ದಾಳಿ ಮಾಡಿದ ಸ್ಥಳದಲ್ಲಿ ಕ್ಯಾಮರಗಳನ್ನು ಅಳವಡಿಸಲಾಗಿತ್ತು. ಸೋಮವಾರ ರಾತ್ರಿ 9ರ ಸಮಯದಲ್ಲಿಯೇ ಹುಲಿ ಹಸುವಿನ ವಾಸನೆಯಿಂದ

ತಿನ್ನಲು ಬಂದಿರುವುದು ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಇದರಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಸಮೀಪದಲ್ಲಿಯೇ ಬೋನು ಇರಿಸಿ ಅದರೊಳಗೆ ವೈದ್ಯಾಧಿಕಾರಿ ಡಾ.ವಾಸೀಂ ಜಾಫರ್‌ (Dr. Wasim Zafar) ಅವರು ಇರುವಂತೆ ನೋಡಿಕೊಂಡಿತ್ತು.

ಅಲ್ಲದೇ ಸಿಬ್ಬಂದಿಯೂ ಅಲ್ಲಿಯೇ ಇದ್ದರು. ಮಧ್ಯರಾತ್ರಿ ಮತ್ತೆ ಹುಲಿ ಬಂದಾಗ ಅದಕ್ಕೆ ಅರವಳಿಕೆಯನ್ನು ಡಾ.ವಾಸೀಂ ಜಾಫರ್‌ ಅವರು ನೀಡುವಲ್ಲಿ ಯಶಸ್ವಿಯಾದರು. ನಂತರ ಕೆಲವೇ ಕ್ಷಣದಲ್ಲಿ ಉರುಳಿ ಬಿದ್ದ

ಹುಲಿಯನ್ನು ಬಲೆ ಹಾಕಿ ಸೆರೆ ಹಿಡಿದು ಬೆಳಗಿನ ಜಾವವೇ ಮೈಸೂರು ಮೃಗಾಲಯಕ್ಕೆ ಸಾಗಿಸಲಾಯಿತು.

ಇದನ್ನು ಓದಿ: ಹಸು ಮೇಯಿಸಲು ಹೋದ ಮಹಿಳೆ ಬಲಿ ಪಡೆದ ಹುಲಿ: ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆ.

Exit mobile version