Mysore: ಮೈಸೂರು ವಿಮಾನ ನಿಲ್ದಾಣಕ್ಕೆ (Mysore Airport) ಹೆಸರಿಡುವುದರ ಕುರಿತು ಚರ್ಚೆಗಳು (Tippu is from Our Town) ನಡೆಯುತ್ತಿರುವ ಬೆನ್ನಲ್ಲೇ ಈಗ ಈ ವಿಚಾರ ರಾಜಕೀಯ
ಕೆಸರೆರಚಾಟಕ್ಕೆ ಕಾರಣವಾಗಿದ್ದು, ಟಿಪ್ಪು ಸುಲ್ತಾನ್ (Tippu Sultan) ನಮ್ಮ ಊರಿನವರೇ ಅಲ್ವಾ, ಅವರೇನು ಹೊರ ದೇಶದವರಾ ಎಂದು ಈ ವಿಚಾರವಾಗಿ ಮೈಸೂರಲ್ಲಿ ಮಾತನಾಡಿದ ಸಚಿವ
ಹೆಚ್.ಸಿ.ಮಹದೇವಪ್ಪ (H C Mahadevappa) ಅವರು (Tippu is from Our Town) ಪ್ರಶ್ನಿಸಿದ್ದಾರೆ.
ಕಾಂಗ್ರೆಸ್-ಬಿಜೆಪಿ (Congress-BJP) ನಾಯಕರ ನಡುವೆ ಜಟಾಪಟಿ ನಡೆಯುತ್ತಿದ್ದು, ಟಿಪ್ಪುನನ್ನು ದೇಶದ್ರೋಹಿ ಅಂತಾ ಬಿಂಬಿಸೋದು ಸರಿಯಲ್ಲ. ಟಿಪ್ಪು ಸುಲ್ತಾನ್ ನಮ್ಮ ಊರಿನವರೇ ಅಲ್ವಾ,
ಅವರೇನು ಹೊರ ದೇಶದವರಾ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಾಲ್ವಡಿ ಕೃಷ್ಣರಾಜ
ಒಡೆಯರ್ (Nalvadi Krishnaraja Wodeyar) ಹೆಸರಿಗೂ ನಮ್ಮ ತಕರಾರು ಇಲ್ಲ. ಟಿಪ್ಪು ವಿಚಾರದಲ್ಲಿ ಕೆಲವರು ಅಭಿಪ್ರಾಯ ಹೇಳೋದು ಅಪರಾಧವಾ ಎಂದು ಪ್ರಶ್ನಿಸಿದ್ದಾರೆ.
ವಿಮಾನ ನಿಲ್ದಾಣ ವಿಚಾರವು ಕ್ಯಾಬಿನೆಟ್ (Cabinet) ತೀರ್ಮಾನವಾದ್ದು, ಅದನ್ನು ತಿರಸ್ಕರಿಸಲು ಸಾಧ್ಯವಾ ಎಂದಿದ್ದಾರೆ. ರಾಜ್ಯದಲ್ಲಿ ಕೋವಿಡ್ (Covid) ವಿಚಾರವಾಗಿ ಮಾತನಾಡಿದ ಅವರು
ಮೈಸೂರು ಜಿಲ್ಲಾಡಳಿತದ ಜೊತೆಗೆ ಸಭೆ ಮಾಡುತ್ತೇನೆ. ಗಡಿ ಜಿಲ್ಲೆಯಾದ ಕಾರಣ ಇವತ್ತೆ ಸಭೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಸಂಸತ್ನಲ್ಲಿ ಭದ್ರತಾ ಲೋಪದ ಕುರಿತು ಮಾತನಾಡಿದ್ದು, ಇದು ಗಂಭೀರವಾದ ರಾಷ್ಟ್ರೀಯ ಭದ್ರತಾ ವಿಚಾರವಾಗಿದೆ. ಆರೋಪಿಗಳಿಗೆ ಬೇರೆಯವರು ಲೆಟರ್ ಕೊಟ್ಟಿದ್ದರೆ ಮೈಸೂರು ಗತಿ ಏನಾಗುತ್ತಿತ್ತು?
ಬೇರೆ ಧರ್ಮದವರು ಲೇಟರ್ ಕೊಟ್ಟಿದ್ದರೆ ಗತಿ ಏನಾಗುತ್ತಿತ್ತು? ಲೆಟರ್ ಕೊಟ್ಟಿದ್ದ ಕಾರಣ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.
ಒಂದೊಂದು ಬಾರಿ ಗಡಿಪಾರು ಆದವರು, ಕೊಲೆ ಆರೋಪಿಗಳು ನಮ್ಮ ಜೊತೆಯೆ ಫೋಟೋ ತೆಗೆಸಿ ಕೊಂಡಿರುತ್ತಾರೆ, ಅದನ್ನು ನಾವು ಗಮನಿಸುವುದಕ್ಕೆ ಆಗುತ್ತಾ ಎಂದಿದ್ದಾರೆ. ಆದರೆ 2015ರಲ್ಲೇ ನಾಲ್ವಡಿ
ಹೆಸರಿಡಲು ಕಾಂಗ್ರೆಸ್ ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಸಚಿವ ಸಂಪುಟದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣಕ್ಕೆ ಸಮ್ಮತಿ ನೀಡಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಸಿದ್ದರಾಮಯ್ಯ (M Lakshmana, Siddaramaiah) ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆದರೆ ಕೇಂದ್ರ ಸರ್ಕಾರ 8 ವರ್ಷದಿಂದ ಏನು
ಮಾಡಿಲ್ಲ ಅಂತ ಲಕ್ಷ್ಮಣ ಆರೋಪಿಸಿದ್ದರು. ಇನ್ನೂ ಟಿಪ್ಪು ಹೆಸರಿಟ್ಟರೆ ತಪ್ಪೇನಿದೆ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ.
ಇದನ್ನು ಓದಿ : ಟಿಪ್ಪು ನಮ್ಮ ಊರಿನವರೇ ಅಲ್ವಾ, ಅವರೇನು ಹೊರ ದೇಶದವರಾ: ಸಚಿವ ಹೆಚ್ಸಿ ಮಹದೇವಪ್ಪ ಪ್ರಶ್ನೆ
– ಭವ್ಯಶ್ರೀ ಆರ್ ಜೆ