‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನಕ್ಕೆ ತಡೆ ನೀಡಲಾಗುವುದಿಲ್ಲ : ಮೈಸೂರು ಸಿಟಿ ಸಿವಿಲ್ ಕೋರ್ಟ್

Mysuru : “ಟಿಪ್ಪು ನಿಜ ಕನಸುಗಳು” ನಾಟಕ ಪ್ರದರ್ಶನಕ್ಕೆ ಯಾವುದೇ ರೀತಿಯ ತಡೆ ನೀಡಲಾಗುವುದಿಲ್ಲ. ಆದರೆ ಇದೇ ನಾಟಕ (Tipu Nija Kanasugalu) ಪುಸ್ತಕ ರೂಪದಲ್ಲಿ ಮಾರಾಟ ಮಾಡುವುದಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಲಾಗುವುದು ಎಂದು ಮೈಸೂರು ಸಿಟಿ ಸಿವಿಲ್ ಕೋರ್ಟ್ ಹೇಳಿದೆ.

ಮೈಸೂರು ರಂಗಾಯಣದ (Tipu Nija Kanasugalu) ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಅವರು ರಚಿಸಿರುವ “ಟಿಪ್ಪು ನಿಜ ಕನಸುಗಳು” ಎಂಬ ಪುಸ್ತಕದ ನಾಟಕ.

ಪ್ರದರ್ಶನ ಮತ್ತು ಮಾರಾಟಕ್ಕೆ ತಡೆ ನೀಡಬೇಕೆಂದು ಕೋರಿ ಬೆಂಗಳೂರು ಜಿಲ್ಲಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ರಫೀ ಉಲ್ಲಾ ಅರ್ಜಿಯಲ್ಲಿ ಮನವಿ ಮಾಡಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಮೈಸೂರು ಸಿಟಿ ಸಿವಿಲ್ ಕೋರ್ಟ್(Mysuru City Civil Court), ನಾಟಕ ಪ್ರದರ್ಶನಕ್ಕೆ ಯಾವುದೇ ತಡೆ ನೀಡುವುದಿಲ್ಲ,

ಆದರೆ ಪುಸ್ತಕ ರೂಪದಲ್ಲಿ ಮಾರಾಟ ಮಾಡುವುದಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಲಾಗುವುದು ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ : https://vijayatimes.com/kantara-beats-kgf-2-record/

ಇನ್ನು “ಟಿಪ್ಪು ನಿಜ ಕನಸುಗಳು” ಪುಸ್ತಕವು ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇದೆ. ಲೇಖಕರು ಪುಸ್ತಕದಲ್ಲಿ ಪ್ರಸ್ತಾಪ ಮಾಡಿರುವ ಅನೇಕ ವಿಷಯಗಳಿಗೆ ಯಾವುದೇ ದಾಖಲೆಗಳನ್ನು ಒದಗಿಸಿಲ್ಲ.

ಹೀಗಾಗಿ ಈ ಕೃತಿಯೂ ಸಾರ್ವಜನಿಕ ಶಾಂತಿಯನ್ನು ಕದಡುವ ಸಾಧ್ಯತೆ ಇದೆ.

ಹೀಗಾಗಿ ನ್ಯಾಯಾಲಯವು ನಾಟಕ ಪ್ರದರ್ಶನ ಮತ್ತು ಪುಸ್ತಕ ಮಾರಾಟಕ್ಕೆ ತಡೆಯಾಜ್ಞೆ ನೀಡಬೇಕೆಂದು ರಫೀ ಉಲ್ಲಾ ಮನವಿ ಮಾಡಿದ್ದಾರೆ. ಈ ಮನವಿಯನ್ನು ಪುರಸ್ಕರಿಸಿದ 15ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಧೀಶ ಜೆ ಆರ್ ಮೆಂಡೋನ್ಸಾ ಅವರು,

ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಅವರು ರಚಿಸಿರುವ “ಟಿಪ್ಪು ನಿಜ ಕನಸುಗಳು” ಎಂಬ ಪುಸ್ತಕ ಮಾರಾಟಕ್ಕೆ ತಡೆ ನೀಡಿದ್ದಾರೆ.

https://youtu.be/SGvJqJVOGJQ ಕೂಡ್ಲುಗಿ ತಾಲೂಕಿನ ಗುಡೇಕೋಟೆ ಹೋಬಳಿಯಲ್ಲಿ ಮಿತಿಮೀರಿದ ಅಕ್ರಮ ಚಟುವಟಿಕೆಗಳು.

ಪುಸ್ತಕ ಪ್ರಕಟಿಸಿರುವ ಅಯೋಧ್ಯಾ ಪ್ರಕಾಶನ ಮತ್ತು ಪುಸ್ತಕ ಮುದ್ರಿಸಿರುವ ರಾಷ್ಟ್ರೋತ್ಥಾನ ಮುದ್ರಣಾಲಯಕ್ಕೆ ಪುಸ್ತಕ ಮಾರಾಟ ಮಾಡದಂತೆ ಆದೇಶ ನೀಡಿದೆ.

ಆದರೆ ಸದ್ಯ ಮೈಸೂರು ರಂಗಾಯಣ(Rangayana Mysuru) ಸೇರಿದಂತೆ ರಾಜ್ಯಾದ್ಯಂತ ನಡೆಯುತ್ತಿರುವ  ನಾಟಕ ಪ್ರದರ್ಶನಕ್ಕೆ ಯಾವುದೇ ತಡೆಯಾಜ್ಞೆ ವಿಧಿಸಿಲ್ಲ.

Exit mobile version