ಕೊಲ್ಕತ್ತಾ, ಜು. 06: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಸೋಮವಾರ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್ಗೆ (TMC) ಸೇರಿದ್ದಾರೆ. ಟಿಎಂಸಿಗೆ ಸೇರಿದ ನಂತರ ಮಾತನಾಡಿದ ಅಭಿಜಿತ್ ಮುಖರ್ಜಿ, ನಾನು ಮಮತಾ ಬ್ಯಾನರ್ಜಿಯ ನಾಯಕತ್ವದ ಗುಣಗಳ ಬಗ್ಗೆ ಸಂಪೂರ್ಣ ನಂಬಿಕೆ ಹೊಂದಿದ್ದೇನೆ ಎಂದು ಹೇಳಿದರು.
ನನ್ನನ್ನು ಪ್ರಾಥಮಿಕ ಸದಸ್ಯತ್ವ ಹೊರತುಪಡಿಸಿ ಕಾಂಗ್ರೆಸ್ ಪಕ್ಷ ಯಾವುದೇ ಗುಂಪು ಅಥವಾ ಸ್ಥಾನದಲ್ಲಿ ಸೇರಿಸಿಲ್ಲ. ಆದ್ದರಿಂದ, ನಾನು ಟಿಎಂಸಿಗೆ ಕಾರ್ಯಕರ್ತನಾಗಿ ಸೇರಿಕೊಂಡಿದ್ದೇನೆ ಮತ್ತು ಪಕ್ಷದ ಸೂಚನೆಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ಸಮಗ್ರತೆ ಮತ್ತು ಜಾತ್ಯತೀತತೆಯನ್ನು ಕಾಪಾಡಿಕೊಳ್ಳಲು ನಾನು ಕೆಲಸ ಮಾಡುತ್ತೇನೆ ಎಂದು ಅಭಿಜಿತ್ ಮುಖರ್ಜಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮಾಜಿ ಕಾಂಗ್ರೆಸ್ ಸಂಸದರೂ ಆಗಿರುವ ಮುಖರ್ಜಿ ಅವರು ಇತ್ತೀಚೆಗೆ ಕೋಲ್ಕತ್ತಾದಲ್ಲಿ ನಕಲಿ ವ್ಯಾಕ್ಸಿನೇಷನ್ ಪ್ರಕರಣದ ಬಗ್ಗೆ ಟ್ವಿಟರ್ನಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ ವ್ಯಕ್ತಪಡಿಸಿದ್ದರು.