ಟಿಎಂಸಿ ನಾಯಕ ಜವಾಹರ್ ಸಿರ್ಕಾರ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ

ನವದೆಹಲಿ, ಆ. 04: ಪ್ರಸಾರ ಭಾರತಿಯ ಮಾಜಿ ಸಿಇಒ ಮತ್ತು ಟಿಎಂಸಿ ನಾಯಕ ಜವಾಹರ್ ಸಿರ್ಕಾರ್ ಅವರು ಬುಧವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ಈ ವಾರದ ಆರಂಭದಲ್ಲಿ ಅವರು ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯಸಭಾ ಸದಸ್ಯರಾಗಿದ್ದ ದಿನೇಶ್ ತ್ರಿವೇದಿ ಅವರು ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು. ಇದರಿಂದ ಖಾಲಿ ಉಳಿದಿದ್ದ ಸ್ಥಾನಕ್ಕೆ ಸಿರ್ಕಾರ್‌ ಆಯ್ಕೆಯಾಗಿದ್ದಾರೆ.

Exit mobile version