ಬೆಂಗಳೂರು, ಫೆ. 03: ಮೈಸೂರು ಜಿಲ್ಲೆಯಲ್ಲಿ ಮಂಗಳಮುಖಿ ಗ್ರಾ.ಪಂ.ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮ ಗ್ರಾಪಂ ಅಧ್ಯಕ್ಷರಾಗಿ ಮಂಗಳಮುಖಿ ದೇವಿಕಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಗ್ರಾ.ಪಂ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ವಿಶೇಷವಾಗಿದೆ.
ಮೈಸೂರಿನ ಕೆ.ಆರ್.ನಗರ ತಾಲ್ಲೂಕು ಸಾಲಿಗ್ರಾಮ ಗ್ರಾ.ಪಂ ಕ್ಷೇತ್ರದಿಂದ ಎಸ್.ಸಿ ಮಹಿಳಾ ಮಿಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ದೇವಿಕಾ, ತಮ್ಮ ಎದುರಾಳಿ ಯಶೋಧ ವಿರುದ್ದ 5 ಮತಗಳ ಜಯ ಸಾಧಿಸಿದ್ದರು. ಗ್ರಾ.ಪಂ. 7ನೇ ವಾರ್ಡ್ನಲ್ಲಿ ನಡೆದಿದ್ದ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಮೊದಲ ಮಂಗಳಮುಖಿ ಎಂಬ ಖ್ಯಾತಿಗೆ ದೇವಿಕಾ ಪಾತ್ರರಾಗಿದ್ದರು.