• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಉತ್ತರಕಾಶಿ ಸುರಂಗ ಕುಸಿತ ಪ್ರಕರಣ: ಸಾವು ಗೆದ್ದು ಬಂದ 41 ಕಾರ್ಮಿಕರು, ಮೋದಿ ಅಭಿನಂದನೆ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಉತ್ತರಕಾಶಿ ಸುರಂಗ ಕುಸಿತ ಪ್ರಕರಣ: ಸಾವು ಗೆದ್ದು ಬಂದ 41 ಕಾರ್ಮಿಕರು, ಮೋದಿ ಅಭಿನಂದನೆ
0
SHARES
45
VIEWS
Share on FacebookShare on Twitter

Dehli: ಉತ್ತರಾಖಂಡ್ ರಾಜ್ಯದ ಉತ್ತರಕಾಶಿ (Uttarkashi) ಬಳಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗವೊಂದು ಕುಸಿದ ಕಾರಣ ಹದಿನೇಳು ದಿನಗಳ ಕಾಲ ಅವಶೇಷಗಳ ನಡುವೆ ಸಿಲುಕಿ ಸಾವು ಬದುಕಿನೊಂದಿಗೆ ಹೋರಾಡಿ ಸತತ ಕಾರ್ಯಾಚರಣೆ ನಂತರ ನಿನ್ನೆ ತಡರಾತ್ರಿ ಹೊರಬಂದ 41 ಕಾರ್ಮಿಕರ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Narendra Modi) ಮಾತಾಡಿ ಅವರನ್ನು ಅಭಿನಂದಿಸುವುದಲ್ಲದೆ, ಅವರ ದೈರ್ಯ ಸಾಹಸಗಳನ್ನು ಕೊಂಡಾಡಿದರು.

Tunnel

ಸಾವನ್ನು ಗೆದ್ದು ಬಂದ ಕಾರ್ಮಿಕರ ಪರವಾಗಿ ಮಾತಾಡಿದ ಬಿಹಾರದ (Bihar) ಛಾಪ್ರಾ ಜಿಲ್ಲೆಯ ಸೋನು ಕುಮಾರ್ ಅವರು ಸಹ ತಮ್ಮನ್ನು ಕಾಪಾಡಿದ ಎಲ್ಲರಿಗೆ ಧನ್ಯವಾದ ಹೇಳಿ, ಭೂಮಿಯ ಗರ್ಭದಲ್ಲಿ ಹೇಗೆ 17 ದಿನಗಳನ್ನು ಹೇಗೆ ಕಳೆದರು ಅನ್ನೋದನ್ನು ಪ್ರಧಾನಿ ಮೋದಿಯವರಿಗೆ ವಿವರಿಸಿದರು.

ಎಲ್ಲಾ ಕಾರ್ಮಿಕರ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಿದೆ ಎಂದು ಹೇಳಲಾಗಿದ್ದು, ಪೈಪ್ ಮೂಲಕ ಸೋಮವಾರ ಅವರಿಗೆ ಬ್ಯಾಟ್ ಹಾಗೂ ಚೆಂಡನ್ನು ಕಳುಹಿಸಲಾಗಿತ್ತು. ಒಳಗೆ ಅವರು ಕ್ರಿಕೆಟ್ (Cricket) ಆಡಿದ್ದು, ಲವಲವಿಕೆಯಿಂದ ಇರುವುದಾಗಿ ದೊರವಾಣಿ ಮೂಲಕ ತಿಳಿಸಿದ್ದರು. ಆದರೂ ಅವರನ್ನು ಹೊರಗೆ ತರಲು ಸ್ಟ್ರೆಚರ್‌ಗಳನ್ನು ಸಿದ್ಧವಾಗಿ ಇರಿಸಲಾಗಿತ್ತು. ಸುರಂಗದಲ್ಲಿಯೇ ತುರ್ತು ಚಿಕಿತ್ಸೆಗಾಗಿ ಎಂಟು ಹಾಸಿಗೆಗಳನ್ನು ಇರಿಸಲಾಗಿತ್ತು. ಸಾವನ್ನು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿ, ಸ್ವಾಗತಿಸಲು ಹಾರ ತುರಾಯಿಗಳನ್ನು ತರಿಸಲಾಗಿತ್ತು.

ಅವಶೇಷಗಳ ನಡುವೆ ಸಾಗಿಸಿದ್ದ ಪೈಪ್ ಮೂಲಕ ಮೊದಲ ಕಾರ್ಮಿಕನನ್ನು ಹೊರಗೆ ಕರೆತರಲಾಗಿದೆ. ಉಳಿದವರು ಕೂಡ ಶೀಘ್ರವೇ ಹೊರ ಜಗತ್ತನ್ನು ಮತ್ತೆ ನೋಡಲಿದ್ದಾರೆ. ಸುರಂಗದ ಒಳಗಿನ ಕತ್ತಲಿನಲ್ಲಿ ಹಾಗೂ ಚಿಕ್ಕ ಜಾಗದಲ್ಲಿ, ಕುಟುಂಬದವರಿಂದ ದೂರವಿದ್ದು, ಆತಂಕದಲ್ಲಿಯೇ 17 ದಿನಗಳನ್ನು ಕಳೆದ ಕಾರ್ಮಿಕರ (Employees) ಮಾನಸಿಕ ಸಾಮರ್ಥ್ಯವನ್ನು ಉಳಿಸಿಕೊಂಡಿರುವುದು ತುಂಬಾ ಆಶ್ಚರ್ಯ ವಿಷಯವಾಗಿದೆ.

Cricket

ರಕ್ಷಿಸಲಾದ ಕಾರ್ಮಿಕರನ್ನು ಮೊದಲು ಆರೋಗ್ಯ ಕೇಂದ್ರಕ್ಕೆ ದಲ್ಲಿ ಆರೋಗ್ಯದ ಪರೀಕ್ಷೆಗೆ ಒಳಒಪಡಿಸಿ ಅವರೆಲ್ಲರಿಗೂ ಎಲ್ಲಾ ರೀತಿಯ ತುರ್ತು ಆರೋಗ್ಯ ಸೇವೆ ಒಳಪಡಿಸಿ ಅಗತ್ಯ ಔಷಧ ಹಾಗೂ ಉಪಕರಣಗಳನ್ನು ಕೂಡ ನೀಡಿ ಅಲ್ಲಿ ಯಾವುದೇ ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದರೆ ಅವರನ್ನು ಉತ್ತರಾಖಂಡ (Uttarakhand) ಜಿಲ್ಲಾ ಆಸ್ಪತ್ರೆಗೆ ರವಾನಿಸುವುದು ಅಥವಾ ಇನ್ನೂ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ರಿಷಿಕೇಶದಲ್ಲಿನ ಏಮ್ಸ್ ಆಸ್ಪತ್ರೆಗೆ (AIIMS Hospital) ಕರೆದೊಯ್ಯವುದಾಗಿ ತಯಾರಿಮಾಡಿಕೊಂಡಿದ್ದರು.

ಅದಕ್ಕೆ ಪ್ರತಿಕ್ರಿಯಿಸಿದ ಮೋದಿಯವರು, ನೀವು ತೋರಿದ ಶೌರ್ಯ ಅಪ್ರತಿಮವಾದದ್ದು, ಸಂಕಟ ಸಮಯದಲ್ಲಿ ಎದೆಗುಂದದೆ ಪರಿಸ್ಥಿತಿಯನ್ನ ಹೇಗೆ ನಿಭಾಯಿಸಬೇಕೆನ್ನುವುದಕ್ಕೆ ಒಂದ ದೊಡ್ಡ ನಿದರ್ಶನವನ್ನು ದೇಶಕ್ಕೆ ನೀಡಿದ್ದೀರಿ. ದೇಶದ ಪ್ರತಿಯೊಬ್ಬ ವ್ಯಕ್ತಿ ನಿಮ್ಮ ಸುರಕ್ಷತೆಗಾಗಿ ಪ್ರಾರ್ಥಿಸುತ್ತಿದ್ದ. ನಿಮ್ಮ ಪರಿವಾರಗಳ ಪ್ರಾರ್ಥನೆ, ಪರಮಾತ್ಮನ ಕೃಪೆ ಮತ್ತು ದಯೆ ಹಾಗೂ 140 ಕೋಟಿ ಭಾರತೀಯರ ಶುಭಹಾರೈಕೆಗಳಿಂದ ನೀವು ಕ್ಷೇಮವಾಗಿ ಹೊರಬಂದಿದ್ದೀರಿ ಎಂದು ಹೇಳಿದರು. ಕಾರ್ಮಿಕರೊಂದಿಗೆ ಮಾತು ಮುಗಿದ ಬಳಿಕ ಎಲ್ಲರೂ ಭಾರತ್ ಮಾತಾ ಕೀ ಜೈ (Bharat Mata Ki Jai) ಎಂದು ಒಕ್ಕೊರಲಿನಿಂದ ಕೂಗಿದರು.

ಮೇಘಾ ಮನೋಹರ ಕಂಪು

Tags: collapsedemployeesTunnel Of Loveuttarkhand

Related News

ತಳ್ಳುವ ಗಾಡಿ ವ್ಯಾಪಾರಿಗಳಿಗೂ ತೆರಿಗೆ ನೋಟಿಸ್​: ನಗದು ವ್ಯವಹಾರವೇ ಬೆಸ್ಟ್ ಎಂದ ವರ್ತಕರು
ಮಾಹಿತಿ

ತಳ್ಳುವ ಗಾಡಿ ವ್ಯಾಪಾರಿಗಳಿಗೂ ತೆರಿಗೆ ನೋಟಿಸ್​: ನಗದು ವ್ಯವಹಾರವೇ ಬೆಸ್ಟ್ ಎಂದ ವರ್ತಕರು

July 19, 2025
ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ,ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ
ಮಾಹಿತಿ

ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ,ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ

July 19, 2025
ಕನ್ನಡಿಗನ ಬಗ್ಗೆ ನಾಲಿಗೆ ಹರಿಬಿಟ್ಟ ಹಿಂದಿವಾಲ, ಕನ್ನಡ ಡೆಲಿವರಿ ಬಾಯ್‌ಗೆ ನಿಂದನೆ, ಪಶ್ಚಿಮ ಬಂಗಾಳಿ ಮೂಲದ ವ್ಯಕ್ತಿ ಅರೆಸ್ಟ್‌
ರಾಜ್ಯ

ಕನ್ನಡಿಗನ ಬಗ್ಗೆ ನಾಲಿಗೆ ಹರಿಬಿಟ್ಟ ಹಿಂದಿವಾಲ, ಕನ್ನಡ ಡೆಲಿವರಿ ಬಾಯ್‌ಗೆ ನಿಂದನೆ, ಪಶ್ಚಿಮ ಬಂಗಾಳಿ ಮೂಲದ ವ್ಯಕ್ತಿ ಅರೆಸ್ಟ್‌

July 19, 2025
ಜನ ಸ್ನೇಹಿ ಆಡಳಿತ ಜಾರಿಗೆ ತರಲು ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ
ಮಾಹಿತಿ

ಜನ ಸ್ನೇಹಿ ಆಡಳಿತ ಜಾರಿಗೆ ತರಲು ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ

July 19, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.