• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಟಿವಿ, ಬೈಕು, ಫ್ರಿಜ್ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ಸಿಗುವುದಿಲ್ಲ: ಸಚಿವ ಉಮೇಶ್ ಕತ್ತಿ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಟಿವಿ, ಬೈಕು, ಫ್ರಿಜ್ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ಸಿಗುವುದಿಲ್ಲ: ಸಚಿವ ಉಮೇಶ್ ಕತ್ತಿ
0
SHARES
0
VIEWS
Share on FacebookShare on Twitter

ಬೆಳಗಾವಿ, ಫೆ. 15: ಹೆಚ್ಚು ಜಮೀನು ಹೊಂದಿದವರು, ಮನೆಯಲ್ಲಿ ಟಿವಿ, ಬೈಕು, ಫ್ರಿಜ್ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ಸಿಗುವುದಿಲ್ಲ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ನೀಡಿದ ಹೇಳಿಕೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದೊಂದು ಹುಚ್ಚು ದರ್ಬಾರ್ ಆಗಿದೆ. ಎಂಥ ಬಡವರ ಮನೆಯಲ್ಲೂ ಟಿವಿ, ಬೈಕ್​ಗಳು ಇರುತ್ತವೆ. ಕಾರಣಕ್ಕೆ ಕಾರ್ಡ್ ರದ್ದು ಮಾಡುತ್ತೇನೆನ್ನುವುದು ಎಷ್ಟು ಸರಿ ಎನ್ನುವುದು ಜನರ ಆಕ್ರೋಶವಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿರುವವರಲ್ಲಿ ಐದು ಎಕರೆಗಿಂತ ಹೆಚ್ಚು ಜಮೀನು ಇರಬಾರದು. ಮನೆಯಲ್ಲಿ ಟಿವಿ, ಬೈಕ್, ಫ್ರಿಜ್ ಆಗಲೀ ಇರಬಾರದು. ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಹಾಗೂ 1.2 ಲಕ್ಷ ರೂಗಿಂತ ಹೆಚ್ಚು ವಾರ್ಷಿಕ ಆದಾಯ ಇದ್ದವರು ಬಿಪಿಎಲ್ ಕಾರ್ಡ್ ಹೊಂದುವಂತಿಲ್ಲ. ಆ ರೀತಿ ಇರುವವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಕೂಡಲೇ ಮರಳಿಸಬೇಕು. ಈ ರೀತಿಯ ಅಕ್ರಮ ಬಿಪಿಎಲ್ ಕಾರ್ಡ್​ಗಳನ್ನ ವಾಪಸ್ ಮಾಡಲು ಮಾರ್ಚ್ 31ರವರೆಗೆ ಗಡುವು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಸರ್ವೇ ಮಾಡಿ ಅಕ್ರಮ ಬಿಪಿಎಲ್ ಕಾರ್ಡ್​ಗಳನ್ನು ಪತ್ತೆ ಹಚ್ಚಿ ರದ್ದು ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿ, ಸರ್ಕಾರ ಇಂಥ ದುಸ್ಸಾಹಸಕ್ಕೆ ಕೈಹಾಕಿದ್ರೆ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಇಂದು ತಮ್ಮ ಬಳಿ ಪ್ರತಿಕ್ರಿಯೆ ಕೇಳಿದ ಮಾಧ್ಯಮಗಳ ಮೇಲೆಯೇ ಸಚಿವ ಉಮೇಶ್ ಕತ್ತಿ ಎರಗಿ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ಅವರ ವಿಎಸ್​ಎಲ್ ಸಕ್ಕರೆ ಕಾರ್ಖಾನೆ ಬಳಿ ಬಂದ ಮಾಧ್ಯಮಗಳು ಈ ವೇಳೆ ಬಿಪಿಎಲ್ ಕಾರ್ಡ್ ವಿಚಾರವನ್ನು ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದರು. ಮೈಕ್ ತೆಗೀತೀರೋ ಇಲ್ಲವೋ ಎಂದು ಮಾಧ್ಯಮದವರ ಮೈಕ್ ತಳ್ಳಿ, ತಾನು ಯಾವುದೇ ರಿಯಾಕ್ಷನ್ ಕೊಡಲ್ಲ ಎಂದು ಹೇಳಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೊರಟು ಹೋದರು.

ಉಮೇಶ್ ಕತ್ತಿ ಹೇಳಿಕೆಗೆ ವಿರೋಧ ಪಕ್ಷದ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ವ-ಪಕ್ಷದ ಕೆಲ ಮುಖಂಡರೂ ಕೂಡ ಟೀಕೆ ಮಾಡಿದ್ದಾರೆ. ನಾಗರಿಕರಿಗೆ ಆಹಾರ ಪೂರೈಸುವುದು ಸರ್ಕಾರದ ಕರ್ತವ್ಯ. ಅಕ್ರಮ ಕಾರ್ಡುಗಳನ್ನ ಪತ್ತೆ ಹಚ್ಚಿ ರದ್ದು ಮಾಡುವುದು ಬಿಟ್ಟು ಇಂಥ ಸಲ್ಲದ ನಿಯಮಗಳನ್ನ ರೂಪಿಸುವುದು ಸರಿಯಲ್ಲ. ತಾವು ಆಹಾರ ಸಚಿವರನ್ನ ಭೇಟಿಯಾಗಿ ಆಕ್ಷೇಪ ಸಲ್ಲಿಸುತ್ತೇವೆ ಎಂದು ಮಾಜಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು ಟಿ ಖಾದರ್ ಹೇಳಿದ್ಧಾರೆ.

ಬಿಜೆಪಿ ನಾಯಕ ಸೋಮಶೇಖರ್ ಕೂಡ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಡವರು ಸಾಲ ಮಾಡಿಯಾದರೂ ಟಿವಿ, ಬೈಕ್ ಅನ್ನ ಖರೀದಿಸುತ್ತಾರೆ. ಹಾಗಂತ ಅವರ ಬಿಪಿಎಲ್ ಕಾರ್ಡು ರದ್ದು ಮಾಡುವುದು ಎಷ್ಟು ಸರಿ? ಬಡತನದ ಆಧಾರದ ಮೇಲೆ ಬಿಪಿಎಲ್ ಕಾರ್ಡ್ ಕೊಡಬೇಕು ಅಷ್ಟೇ ಎಂದು ಅವರು ಹೇಳಿದ್ದಾರೆ.

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.