ಸನಾತನ ಧರ್ಮ ವಿರುದ್ಧ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ: ನನ್ನ ನಿಲುವು ಬದಲಾಗದು

Tamil Nadu: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (UdayanidhiStalin about Sanatana Dharma) ಸನಾತನ ಧರ್ಮದ ವಿರುದ್ಧವಾಗಿ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು,

ನಾನು ಈ ಮೊದಲು ನೀಡಿದ್ದ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನಾನು ನನ್ನ ಸಿದ್ಧಾಂತದ ಬಗ್ಗೆ ಮಾತ್ರ ಮಾತನಾಡಿದ್ದೇನೆ, ನನ್ನ ನಿಲುವು ಬದಲಾಗದು, ಸಮಸ್ಯೆಯನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ ಎಂದರು.

ಕಾರ್ಯಕ್ರಮವೊಂದರಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಕೊರೊನಾ(Corona), ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದರು. ಹೇಗೆ ಈ ರೋಗಗಳ ವಿರುದ್ಧ ಹೋರಾಡಿದರೆ

ಪ್ರಯೋಜನವಿಲ್ಲವೋ, ಅದನ್ನು ಬುಡ ಸಮೇತ ನಿರ್ಮೂಲನೆ ಮಾಡುವ ಅಗತ್ಯವಿದೆಯೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿದರೆ ಪ್ರಯೋಜನವಿಲ್ಲ.

ಅದನ್ನು ನಿರ್ಮೂಲನೆ ಮಾಡುವ ಅಗತ್ಯವಿದೆ ಎಂದು ಉದಯನಿಧಿ ಹೇಳಿಕೆ ನೀಡಿದ್ದರು. ಸನಾತನ ಧರ್ಮ (Sanatana Dharma) ವಿರೋಧಿ ಹೇಳಿಕೆಗಳ ಕುರಿತು ತಮ್ಮ ವಿರುದ್ಧ ದೂರು ದಾಖಲಿಸಿರುವ

ಅರ್ಜಿದಾರರು ಅದಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು (UdayanidhiStalin about Sanatana Dharma) ನೀಡಬೇಕು ಎಂದರು.

ಅರ್ಜಿ ಸಲ್ಲಿಸಿದ ನಂತರ ಅಗತ್ಯ ಸಾಕ್ಷ್ಯಾಧಾರಗಳನ್ನು ಸಲ್ಲಿಸುವುದು ಅರ್ಜಿದಾರರ ಕರ್ತವ್ಯವಾಗಿದೆ ಮತ್ತು ಹಾಗೆ ಮಾಡಲು ವಿಫಲವಾದರೆ ಅರ್ಜಿಯನ್ನು ವಜಾಗೊಳಿಸಬೇಕಾಗುತ್ತದೆ ಎಂದು ಹೇಳಿದರು.

ನ್ಯಾಯಾಲಯವು ಪ್ರತಿವಾದಿಯ ಸಾಂವಿಧಾನಿಕ ಹಕ್ಕಿನ ವಿರುದ್ಧ ಏನನ್ನೂ ಮಾಡಲು ಒತ್ತಾಯಿಸಲು ಸಾಧ್ಯವಿಲ್ಲ ಎಂದರು.

ಇದನ್ನು ಓದಿ: “ಇದು ಇವರ ಸನಾತನ ಧರ್ಮ “ – ಪ್ರಧಾನಿ ಮೋದಿ ವಿರುದ್ದ ನಟ ಕಿಶೋರ್ ವಾಗ್ದಾಳಿ

Exit mobile version