• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ದಯವಿಟ್ಟು ಅನುಮತಿ ಕೊಡಿ ; ಮುಸ್ಲಿಂ ವ್ಯಾಪಾರಿಗಳ ಅಳಲು!

Mohan Shetty by Mohan Shetty
in ರಾಜ್ಯ
udupi
0
SHARES
0
VIEWS
Share on FacebookShare on Twitter

ನಾವು ಹಿಂದೂ ಧರ್ಮವನ್ನು ಗೌರವಿಸುತ್ತೇವೆ. ಹಿಂದೂ ಧಾರ್ಮಿಕ ಆಚರಣೆಗಳ ಬಗ್ಗೆ ನಮಗೆ ಅಪಾರ ಗೌರವವಿದೆ. ಕಳೆದ ಅನೇಕ ವರ್ಷಗಳಿಂದ ಹಿಂದೂಗಳ ನಂಬಿಕೆಗೆ ಭಂಗ ಉಂಟುಮಾಡದೇ, ಹಿಂದೂ ಧಾರ್ಮಿಕ ಉತ್ಸವಗಳಲ್ಲಿ ಮತ್ತು ಜಾತ್ರೆಗಳಲ್ಲಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದೇವೆ. ಈಗ ನಮಗೆ ವ್ಯಾಪಾರ ಮಾಡಲು ಅನುಮತಿ ನಿರಾಕರಿಸಲಾಗುತ್ತಿದೆ. ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅನುಮತಿ ನೀಡಿ ಎಂದು ಉಡುಪಿ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಆರಿಫ್ ವಿನಂತಿ ಮಾಡಿಕೊಂಡಿದ್ದಾರೆ.

high court

ಹಿಜಾಬ್ ವಿವಾದದ ಬಗ್ಗೆ ತೀರ್ಪು ಬಂದ ನಂತರ ಅದನ್ನು ವಿರೋಧಿಸಿ ಕೆಲ ಮುಸ್ಲಿಂ ಸಂಘಟನೆಗಳು ಒಂದು ದಿನದ ಬಂದ್‍ಗೆ ಕರೆ ನೀಡಿದ್ದವು. ಆದರೆ ನಾವು ಯಾವುದೇ ಬಂದ್‍ಗೆ ಬೆಂಬಲ ನೀಡಿಲ್ಲ. ಬಂದ್‍ಗೆ ಬೆಂಬಲಿಸುವಂತೆ ನಮಗೆ ಪತ್ರ ಬಂದಿತ್ತು. ಆದರೆ ನಾವು ಬೆಂಬಲ ನೀಡಲಿಲ್ಲ. ಕೆಲ ಮುಸ್ಲಿಂ ವ್ಯಾಪಾರಿಗಳು ಬಂದ್‍ಗೆ ಬೆಂಬಲ ನೀಡಿರುವುದರಿಂದ ಅಸಮಾಧಾನಗೊಂಡಿರುವ ಹಿಂದೂ ಸಮಾಜ ನಮಗೆ ಜಾತ್ರೆ ಮತ್ತು ಉತ್ಸವಗಳಲ್ಲಿ ವ್ಯಾಪಾರ ಮಾಡಲು ಅನುಮತಿ ನೀಡುತ್ತಿಲ್ಲ.

ನಾವು ಸುಮಾರು 1500 ಜನರು ಬೀದಿಬದಿ ವ್ಯಾಪಾರ ಮಾಡುತ್ತಿದ್ದೇವೆ. ನಮ್ಮನ್ನು ನಂಬಿ 650ಕ್ಕೂ ಹೆಚ್ಚು ಕುಟುಂಬಗಳಿವೆ. ನಮ್ಮೆಲ್ಲರ ಕುಟುಂಬಗಳ ಪರಿಸ್ಥಿತಿ ಈಗ ಅತಂತ್ರವಾಗಿದೆ ಎಂದು ತಮ್ಮ ಅಳಲು ತೊಡಿಕೊಂಡರು. ಹಿಜಾಬ್‍ಗೆ ಬೆಂಬಲ ಸೂಚಿಸಿ ಬಂದ್ ಮಾಡುವಂತೆ ನಮಗೆ ಸೂಚನೆ ನೀಡಿದ್ದರು ನಾವು ಎಂದಿನಂತೆ ವ್ಯಾಪಾರ ಮುಂದುವರೆಸಿದ್ದೇವು. ಕೆಲ ಸಂಘಟನೆಗಳು ಮಾಡಿದ ತಪ್ಪಿಗೆ ಈಗ ನಾವು ಶಿಕ್ಷೆ ಅನುಭವಿಸುತ್ತಿದ್ದೇವೆ. ಕೊರೊನಾ ಸಮಯದಲ್ಲೇ ನಾವು ಸಾಕಷ್ಟು ನಷ್ಟ ಅನುಭವಿಸಿದ್ದೇವೆ.

street vendours

ಈಗ ಜಾತ್ರೆ-ಉತ್ಸವಗಳಲ್ಲಿ ನಮಗೆ ನಿರ್ಬಂಧ ವಿಧಿಸಿದರೆ ನಮ್ಮ ಬದುಕು ನಾಶವಾಗುತ್ತದೆ. ಹೀಗಾಗಿ ದಯವಿಟ್ಟು ನಮಗೆ ಅನುಮತಿ ನೀಡಬೇಕು. ಈಗಾಗಲೇ ಉಡುಪಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಹಿಂದೂ ಧಾರ್ಮಿಕ ಜಾತ್ರೆಗಳಲ್ಲಿ ವ್ಯಾಪಾರ ಮಾಡಲು ನಮಗೆ ನಿರಾಕರಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ. ಇದನ್ನ ಇಲ್ಲಿಗೆ ನಿಲ್ಲಿಸಿ, ನಮಗೆ ವ್ಯಾಪಾರ ಮಾಡಲು ಅನುಮತಿ ನೀಡಿ ಎಂದು ಆರೀಫ್ ವಿನಂತಿ ಮಾಡಿಕೊಂಡರು.

Tags: bandhhijaabKarnatakaUdupi

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.