• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿವಾದ ; ಕನ್ನಡವೂ ಒಂದೇ, ಕರ್ನಾಟಕವೂ ಒಂದೇ, ಇದೇ ನಮ್ಮ ಧ್ಯೇಯ

Mohan Shetty by Mohan Shetty
in ರಾಜಕೀಯ, ರಾಜ್ಯ
Umesh Katti
0
SHARES
1
VIEWS
Share on FacebookShare on Twitter

ಕನ್ನಡ(Kannada) ನಾಡು-ನುಡಿಗೆ ಸಾವಿರಾರೂ ವರ್ಷಗಳ ಇತಿಹಾಸವಿದೆ. ಕನ್ನಡದ ಮೊದಲ ಗ್ರಂಥ ಶ್ರೀವಿಜಯನ ‘ಕವಿರಾಜಮಾರ್ಗ’ದಲ್ಲಿ “ಕಾವೇರಿಯಿಂದಮಾ ಗೋದಾವರಿವರಮಿರ್ದ ನಾಡದಾ ಕನ್ನಡದೊಳ್, ಭಾವಿಸಿದ ಜನಪದಂ ವಸುಧಾ ವಲಯ ವಿಲೀನ ವಿಶದ ವಿಷಯ ವಿಶೇಷಂ, ಅದರೊಳಗಂ ಕಿಸುವೊಳಲಾ ವಿದಿತ ಮಹಾ ಕೋಪಣ ನಗರದಾ ಪುಲಿಗೆರೆಯಾ, ಸಧಭಿಮಸ್ತುತಮಪ್ಪೊಂಕುಂದದ ನಡುವಣ ನಾಡೆ ನಾಡೆ ಕನ್ನಡದ ತಿರುಳ್” ಎಂದು ಉಲ್ಲೇಖಿಸಿರುವುದು ಗಮನಾರ್ಹ.

Karnataka

ಕಾವೇರಿಯಿಂದ ಗೋದಾವರಿಯ ಸೀಮೆಯವರೆಗೂ ಹಬ್ಬಿಕೊಂಡಿದ್ದ ಕನ್ನಡ ಸೀಮೆಯನ್ನು ನಾವು ಈಗಾಗಲೇ ಕಳೆದುಕೊಂಡಿದ್ದೇವೆ. ಈಗ ಮತ್ತೆ ಕನ್ನಡನಾಡನ್ನು ಒಡೆಯುವ ಮಾತುಗಳು ಕೇಳಿ ಬರುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕೆಂದು ಸಚಿವ ಉಮೇಶ್ ಕತ್ತಿ(Umesh Katti) ಆಗ್ರಹಿಸಿರುವುದು ಕನ್ನಡದ ಅಸ್ಮಿತೆಗೆ ಮಾಡಿರುವ ಅಪಮಾನವಾಗಿದೆ. ‘ಕನ್ನಡ ಕುಲಪುರೋಹಿತ’ ಆಲೂರು ವೆಂಕಟರಾಯರಂತ ಮಹನೀಯರು ಅಖಂಡ ಕರ್ನಾಟಕದ ಕನಸು ಕಂಡಿದ್ದರು. ಅದಕ್ಕಾಗಿ ಸಾಕಷ್ಟು ಹೋರಾಟ ಮಾಡಿದ್ದರು.

https://fb.watch/dQ5D-k4jhs/

ಅಖಂಡ ಕರ್ನಾಟಕದ ಕನಸು ಮೊದಲು ಮೊಳಕೆ ಒಡೆದದ್ದು, ಉತ್ತರ ಕರ್ನಾಟಕದಲ್ಲಿ. ಆದರೆ ಇಂದು ಅದೇ ಉತ್ತರ ಕರ್ನಾಟಕದಿಂದ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬರುತ್ತಿದೆ. ಸಾವಿರಾರೂ ವರ್ಷಗಳಿಂದ ಕನ್ನಡ ನಾಡನ್ನು ಅಖಂಡತೆಯ ಪರಿಕಲ್ಪನೆಯಲ್ಲಿ ಕಟ್ಟಲಾಗಿದೆ. ಸಾಂಸ್ಕೃತಿಕ ವೈವಿಧ್ಯತೆಗಳ ನಡುವೆಯೂ ಕನ್ನಡ ಭಾಷೆ ನಮ್ಮೆಲ್ಲರನ್ನು ಒಂದುಗೂಡಿಸಿದೆ. “ರಾಜಕೀಯ ಕಾರಣಗಳಿಗಾಗಿ ಸಾವಿರಾರು ಹಿರಿಯ ಕನ್ನಡಿಗರ ಹೋರಾಟದ ಫಲವಾಗಿ ಸ್ಥಾಪನೆಗೊಂಡ ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು- ನುಡಿಗೆ ಬಗೆವ ದ್ರೋಹವಾಗುತ್ತದೆ” ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ(Siddaramaiah) ಮಾತು ಸ್ವಾಗತಾರ್ಹ.

Umesh Katti

‘ನಾವೆಲ್ಲರೂ ಕನ್ನಡಿಗರು’ ಎಂಬ ಏಕೈಕ ಧ್ಯೇಯದೊಂದಿಗೆ ನಮ್ಮ ಕರ್ನಾಟಕವನ್ನು ಕಟ್ಟಬೇಕಿದೆ. ಅಖಂಡ ಕನ್ನಡ ನಾಡನ್ನು ಕಟ್ಟಲು ಅವಿರತವಾಗಿ ಶ್ರಮಿಸಿದ ಅನೇಕ ಮಹನೀಯರ ಪರಿಶ್ರಮವನ್ನು ಗೌರವಿಸಬೇಕಿದೆ. ಉಮೇಶ್ ಕತ್ತಿಯವರು ನೀಡಿದ ಹೇಳಿಕೆಯನ್ನು ಪಕ್ಷಾತೀತವಾಗಿ ಖಂಡಿಸಬೇಕು. ಈ ರೀತಿಯ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ಕನ್ನಡ ಮನಸುಗಳನ್ನು ಒಡೆಯುವ ಈ ರೀತಿಯ ಅಪ್ರಬುದ್ದ ಹೇಳಿಕೆಗಳನ್ನು ಕನ್ನಡಿಗರೇ ಖಂಡಿಸಬೇಕು.

Tags: KarnatakapoliticalpoliticsUmesh Katti

Related News

dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.