• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಯುನಿಯನ್ ಬಜೆಟ್ ಮುಖ್ಯಾಂಶಗಳು: ಈ ಬಜೆಟ್ ಯಾವ್ಯಾವುದಕ್ಕೆ ಪುಷ್ಠಿ ನೀಡಿದೆ?

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಯುನಿಯನ್ ಬಜೆಟ್ ಮುಖ್ಯಾಂಶಗಳು: ಈ ಬಜೆಟ್ ಯಾವ್ಯಾವುದಕ್ಕೆ ಪುಷ್ಠಿ ನೀಡಿದೆ?
0
SHARES
0
VIEWS
Share on FacebookShare on Twitter

ನವದೆಹಲಿ, ಫೆ. 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೂರನೇ ಬಜೆಟ್ ಕೋವಿಡ್ ಸಂಕಷ್ಟದಲ್ಲಿರುವ ಅಸಮಾನ್ಯ ಬಜೆಟ್ ಆಗಿದೆ. ಬಹಳ ನಿರೀಕ್ಷೆಗಳನ್ನು ಹೊಂದಿದ್ದ ಈ ಬಜೆಟ್​ನಲ್ಲಿ ಹಲವು ಕ್ಷೇತ್ರಗಳಲ್ಲಿ ಭರ್ಜರಿ ಪುಷ್ಠಿ ಸಿಕ್ಕಿದೆ. ರಸ್ತೆ ಸೌಕರ್ಯ, ಆರೋಗ್ಯ ಇತ್ಯಾದಿ ವಲಯಗಳಿಗೆ ಶಕ್ತಿ ತುಂಬಲಾಗಿದೆ.

75 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಮನೆ ಬಾಡಿಗೆ ಮತ್ತು ಪಿಂಚಣಿಯ ಆದಾಯ ಮಾತ್ರ ಹೊಂದಿರುವ ಹಿರಿಯ ನಾಗರಿಕರಿಗೆ ಐಟಿ ರಿಟರ್ನ್ ಸಲ್ಲಿಕೆಯಿಂದ ವಿನಾಯಿತಿ ನೀಡಲಾಗಿದೆ. ಇದು ವಯೋವೃದ್ಧರಿಗೆ ನಿರಾಳ ತರುವ ಬೆಳವಣಿಗೆಯಾಗಿದೆ. ಹಾಗೆಯೇ, ಸಣ್ಣ ತೆರಿಗೆ ಪಾವತಿದಾರರ ವ್ಯಾಜ್ಯ ಪರಿಹಾರಕ್ಕಾಗಿ ಫೇಸ್​ಲೆಸ್ ವ್ಯವಸ್ಥೆ ಸ್ಥಾಪನೆ ಮಾಡುವುದಾಗಿ ಸಚಿವರು ಘೋಷಿಸಿದ್ದಾರೆ.

ಐಟಿ ರಿಟರ್ನ್ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲಾಗಿದೆ. ಸ್ಯಾಲರಿ ಇನ್ಕಮ್, ತೆರಿಗೆ ಪಾವತಿ ಮತ್ತು ಟಿಡಿಎಸ್ ಅಂಶಗಳನ್ನ ಐಟಿಆರ್ ಫಾರ್ಮ್​ಗಳಲ್ಲಿ ಮೊದಲೇ ಭರ್ತಿ ಮಾಡಲಾಗುವುದು.

ಆರೋಗ್ಯ ಕ್ಷೇತ್ರ: ಆರೋಗ್ಯ ಕ್ಷೇತ್ರಕ್ಕೆ ಬರೋಬ್ಬರಿ 2,23,246 ಕೋಟಿ ರೂ ನೀಡಲಾಗಿದೆ. ಕಳೆದ ಬಜೆಟ್​ಗೆ ಹೋಲಿಸಿದರೆ ಶೇ. 137ರಷ್ಟು ಹೆಚ್ಚಳವಾಗಿದೆ. ಪಿಎಂ ಆತ್ಮನಿರ್ಭರ್ ಸ್ವಸ್ಥ್ ಭಾರತ್ ಯೋಜನೆಯ ಘೋಷಣೆ ಆಗಿದೆ. ಆರು ವರ್ಷದವರೆಗೆ ಈ ಯೋಜನೆಗೆ 64,180 ಕೋಟಿ ರೂ ವಿನಿಯೋಗವಾಗಲಿದೆ. 15 ತುರ್ತು ಆರೋಗ್ಯ ಕೇಂದ್ರಗಳಿಗೆ ಸಹಾಯಕವಾಗಲಿದೆ. ರಾಷ್ಟ್ರೀಯ ರೋಗ ನಿಯಂತ್ರಣ ಕೇಮದ್ರ ಮತ್ತಿತರ ವಿಚಾರಗಳಿಗೆ ಪುಷ್ಟಿ ಸಿಗಲಿದೆ. ರಾಷ್ಟ್ರೀಯ ಪೌಷ್ಟಿಕ ಯೋಜನೆಯ ವ್ಯವಸ್ಥೆ ಬಲಗೊಳ್ಳಲಿದೆ.

ರಸ್ತೆ ಸೌಕರ್ಯ: ಹೊಸ ಹೆದ್ದಾರಿಗಳ ಘೋಷಣೆ ಆಗಿದೆ. ತಮಿಳುನಾಡಿನಲ್ಲಿ 3,500 ಕಿಮೀ ಕಾರಿಡಾರ್, ಕೇರಳದಲ್ಲಿ 1,100 ಕಿಮೀ ಕಾರಿಡಾರ್ ಯೋಜನೆಗೆ ಅನುಮೋದನೆ ಸಿಕ್ಕಿದೆ. ಇದಕ್ಕೆ 65 ಸಾವಿರ ಕೋಟಿ ರೂ ಬಿಡುಗಡೆಯಾಗಲಿದೆ. ಪಶ್ಚಿಮ ಬಂಗಾಳದಲ್ಲಿ 675 ಕಿಮೀ ಕಾರಿಡಾರ್​ಗೆ 95 ಸಾವಿರ ಕೋಟಿ ರೂ, ಅಸ್ಸಾಮ್​ನಲ್ಲಿ 1,300 ಕೋಟಿ ರೂ ಹಣವನ್ನು ಮುಂದಿನ ಮೂರು ವರ್ಷಗಳಲ್ಲಿ ಒದಗಿಸಲಾಗುತ್ತದೆ. ಒಟ್ಟಾರೆ, ರಸ್ತೆ ಸೌಕರ್ಯ ಯೋಜನೆಗಳಿಗೆ ಈ ಬಜೆಟ್​ನಲ್ಲಿ ಭರ್ಜರಿ ಪುಷ್ಟಿ ಸಿಕ್ಕಿದೆ.

ಬ್ಯಾಂಕ್: ಸ್ಟಾರ್ಟಪ್​ಗಳ ಪೈಕಿ ಶೇ. 1 ಕಂಪನಿಗಳಿಗೆ ಪೇಯ್ಡ್ ಅಪ್ ಕ್ಯಾಪಿಟಲ್ ಮೇಲಿನ ನಿರ್ಬಂಧ ಇರುವುದಿಲ್ಲ.  ಐಡಿಬಿಐ ಸೇರಿದಂತೆ ಮೂರು ಬ್ಯಾಂಕುಗಳ ಬಂಡವಾಳ ಹಿಂತೆಗೆತ (Disinvestment) ಆಗಲಿದೆ. ಈಗಾಗಲೇ ಘೋಷಣೆ ಆಗಿರುವ ಏರ್ ಇಂಡಿಯಾ, ಬಿಪಿಸಿಎಲ್ ಮೊದಲಾದ ಸಂಸ್ಥೆಗಳ ಬಂಡವಾಳ ಹಿಂತೆಗೆತ ಪ್ರಕ್ರಿಯೆ 2022ರಷ್ಟರಲ್ಲಿ ಪೂರ್ಣಗೊಳ್ಳಲಿದೆ.

ರೈಲ್ವೇಸ್: ರೈಲ್ವೆ ಕ್ಷೇತ್ರಕ್ಕೆ 1,10,055 ಕೋಟಿ ರೂ ವಿನಿಯೋಗ ಆಗಿದೆ. ಪಶ್ಚಿಮ ಬಂಗಾಳದಲ್ಲಿ ರೈಲ್ವೆ ಯೋಜನೆಗಳಿಗೆ 25,000 ಕೋಟಿ, ಚೆನ್ನೈ ಮೆಟ್ರೋಗೆ 63,000 ಕೋಟಿ ರೂ ನೀಡಲಾಗಿದೆ. ಬೆಂಗಳೂರಿನಲ್ಲಿ ನಮ್ಮ ಮೆಟ್ರೋಗೆ ಹಣ ಬಿಡುಗಡೆ ಮಾಡಲಾಗಿದೆ.

ಕೋವಿಡ್-19 ಲಸಿಕೆ: ಕೋವಿಡ್ ಲಸಿಕೆಗಳಿಗೆ 35 ಸಾವಿರ ಕೋಟಿ ರೂ ಮೀಸಲಿರಿಸಲಾಗಿದೆ. ಈಗ ಅನುಮೋದನೆ ಪಡೆದಿರುವ ಕೋವಿಶೀಲ್ಡ್ ಮ್ತು ವೋವ್ಯಾಕ್ಸಿನ್ ಜೊತೆಗೆ ಶೀಘ್ರದಲ್ಲೇ ಇನ್ನೆರಡು ಲಸಿಕೆಗಳು ಹೊರಬರಲಿವೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಕೃಷಿ: ಎಪಿಎಂಸಿಯ ಸೌಕರ್ಯಗಳನ್ನ ಬಲಪಡಿಸಲು ಕೃಷಿ ಸೌಕರ್ಯ ನಿಧಿಗಳನ್ನ ಘೋಷಣೆ ಮಾಡಲಾಗಿದೆ. ರೈತರಿಗೆ ನೀಡುವ ಎಂಎಸ್​ಪಿಯಲ್ಲಿ ಗಣನೀಯ ಹೆಚ್ಚಳವಾಗಿದೆ. ಗೋದಿ ಖರೀದಿಗೆ ರೈತರಿಗೆ 2019-20ರಲ್ಲಿ 62 ಸಾವಿರ ಕೋಟಿ ನೀಡಲಾಗಿತ್ತು. 2020-21ರಲ್ಲಿ ಇದರ ಮೊತ್ತ 75 ಸಾವಿರ ಕೋಟಿ ರೂ ಆಗಿದೆ. 2013-14ರಲ್ಲಿ ಭತ್ತ ಖರೀದಿಗೆ 53,928 ಕೋಟಿ ರೂ ವೆಚ್ಚ ಮಾಡಲಾಗಿತ್ತು. 2020-21ರಲ್ಲಿ ಇದು 1,72,752 ಕೋಟಿ ರೂಗೆ ಹೆಚ್ಚಳವಾಯಿತು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಎಫ್​​ಡಿಐ: ವಿದೇಶೀ ನೇರ ಬಂಡವಾಳ ಶೇ. 74ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.

ಸ್ವಚ್ಛ ಭಾರತ್ ಮತ್ತು ಸ್ವಸ್ಥ್ ಭಾರತ್: ನಗರ ಸ್ವಚ್ಛ ಭಾರತ್ ಮಿಷನ್ ಯೋಜನೆಗೆ ಐದು ವರ್ಷಗಳಿಗೆ 1,41,678 ಕೋಟಿ ರೂ ವಿನಿಯೋಗ ಮಾಡಲು ನಿರ್ಧರಿಸಲಾಗಿದೆ.

ಉಜ್ವಲ್ ಯೋಜನೆ: ಕೇಂದ್ರದ ಉಜ್ವಲ್ ಎಲ್​ಪಿಜಿ ಯೋಜನೆಯ ವ್ಯಾಪ್ತಿಗೆ ಇನ್ನೂ 1 ಕೋಟಿ ಮಂದಿಯನ್ನ ತರಲಾಗಿದೆ. ಒಟ್ಟು 8 ಕೋಟಿ ಮಂದಿಗೆ ಈ ಸ್ಕೀಮ್ ಇದೆ. ಮುಂದಿನ ಮೂರು ವರ್ಷದಲ್ಲಿ ಇನ್ನೂ 100 ಜಿಲ್ಲೆಗಳನ್ನ ಸೇರಿಸಲಾಗುವುದು.

ಸ್ವಚ್ಛ ಗಾಳಿ: ಹತ್ತು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ 42 ನಗರ ಕೇಂದ್ರಗಳಲ್ಲಿ ಸ್ವಚ್ಛ ಗಾಳಿಗಾಗಿ 2,217 ಕೋಟಿ ರೂ ಘೋಷಣೆ ಮಾಡಲಾಗಿದೆ. ಹಳೆಯ ವಾಹನಗಳನ್ನ ನಿರ್ಮೂಲನೆ ಮಾಡಲಾಗುತ್ತದೆ.

ಜಲ ಜೀವನ್ ಮಿಷನ್: ಎಲ್ಲಾ ನಗರ ಸಂಸ್ಥೆಗಳಲ್ಲಿ ಜನಜೀವನ್ ಮಿಷನ್ ಘೋಷಣೆ ಮಾಡಲಾಗಿದೆ. ಮುಂದಿನ ಐದು ವರ್ಷದಲ್ಲಿ ಜನಜಿವನ್ ಯೋಜನೆಗೆ 2.87 ಲಕ್ಷ ಕೋಟಿ ವಿನಿಯೋಗವಾಗಲಿದೆ.

ಸೆನ್ಸಸ್: ಮುಂಬರುವ ಸೆನ್ಸಸ್​ಗೆ 3,768 ಕೋಟಿ ರೂ ಒದಗಿಸಲಾಗಿದೆ.

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.