Bengaluru: ಆತ್ಮಹತ್ಯೆ ನೋಟ್ನಲ್ಲಿ ವ್ಯಕ್ತಿಯ ಹೆಸರಿದ್ದಾಕ್ಷಣ ಆತ (unwated names in suicide notes) ಆರೋಪಿಯೆಂಬ ತೀರ್ಮಾನ ಸರಿಯಲ್ಲ. ಆ ವ್ಯಕ್ತಿ ನಿಜವಾಗಿಯೂ ಆತ್ಮಹತ್ಯೆಗೆ
ಪ್ರಚೋದನೆ ನೀಡಿದ್ದಾನೆಯೇ, ಇಲ್ಲವೇ ಎಂದು ಸರಿಯಾಗಿ ತನಿಖೆ ನಡೆಸಬೇಕು’ ಎಂದು ಹೈಕೋರ್ಟ್ನ ಕುಲಬುರಗಿ ಪೀಠ (Kulburagi Bench of High Court) ಇತ್ತೀಚೆಗೆ ವಿಜಯಪುರ ಜಿಲ್ಲೆಯ
ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು ನೀಡಿದೆ.
ಈ ರೀತಿಯ ಮಹತ್ವದ ತೀರ್ಪನ್ನು ಹೈಕೋರ್ಟ್ನ ಕುಲಬುರಗಿ ಪೀಠ ಇತ್ತೀಚೆಗೆ ವಿಜಯಪುರ ಜಿಲ್ಲೆಯ (Vijayapura District) ಪ್ರಕರಣವೊಂದರಲ್ಲಿ ನೀಡಿದ್ದು, ಸೂಸೈಡ್ ಪ್ರಕರಣಗಳಲ್ಲಿ ಅನಗತ್ಯ
ಹೆಸರು ಬರೆಯುವುದಕ್ಕೆ ಕಡಿವಾಣ ಹಾಕಲು ಹೈಕೋರ್ಟ್ ತೀರ್ಪು ಮಹತ್ವದ್ದಾಗಿದೆ. ಅಮಾಯಕರಿಗೆ ಶ್ರೀರಕ್ಷೆಯಾಗಲಿದೆ. ಶಿಕ್ಷಕ ಬಸವರಾಜ್ ಆತ್ಮಹತ್ಯೆ ಪ್ರಕರಣದಲ್ಲಿ (Teacher Basavaraj suicide case)
ಆರೋಪ ಎದುರಿಸುತ್ತಿದ್ದ ಕ್ಷೇತ್ರ ಶಿಕ್ಷಣ ಅಧಿಕಾರಿ (ಬಿಇಒ) ಹನುಮಂತರಾಯಪ್ಪ (Education Officer (BEO) Hanumantarayappa) ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ. ವೆಂಕಟೇಶ್ ಟಿ. ನಾಯಕ್
(Judge Venkatesh T. Nayak) ಅವರಿದ್ದ ಏಕ ಸದಸ್ಯ ಪೀಠ, ಈ ಆದೇಶ ಹೊರಡಿಸಿದೆ.
ಆತ್ಮಹತ್ಯೆ ಪ್ರಕರಣಗಳಲ್ಲಿಸಿಗುವ ಸೂಸೈಡ್ ನೋಟ್ಗಳಲ್ಲಿ ಕೆಲವೊಮ್ಮೆ ವ್ಯಕ್ತಿಯ ಹೆಸರು ಉಲ್ಲೇಖವಾಗಿರುತ್ತದೆ. ಅಂತಹ ಪ್ರಕರಣಗಳಲ್ಲಿ ಮೊದಲಿಗೆ ತನಿಖೆ ನಡೆಸಿ ನೋಟ್ನಲ್ಲಿನ ಅಂಶಗಳ ಸತ್ಯಾಸತ್ಯತೆ
ಪರಿಶೀಲಿಸುವ ಬದಲು ತಕ್ಷಣಕ್ಕೆ ಐಪಿಸಿ 306ರಡಿ (IPC360) ಆತ್ಮಹತ್ಯೆಗೆ ಪ್ರಚೋದನೆ ನೀಡಿ, ಅಪರಾಧ ಎಸಗಿದ್ದಾರೆನ್ನುವಂತೆ ಭಾವಿಸಿ ಅವರನ್ನು ಬಂಧಿಸುವುದು ಮಾಮೂಲಿಯಾಗಿದೆ ಎಂದು
ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ ತೀರ್ಮಾನಿಸಿದೆ.
ಸೂಸೈಡ್ ನೋಟ್ನಲ್ಲಿನ ಅಂಶಗಳು ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಶೀಲಿಸಿ, ನಿಜವಾಗಿಯೂ ಆತ್ಮಹತ್ಯೆಗೆ ಆ ವ್ಯಕ್ತಿ ಪ್ರಚೋದನೆ ನೀಡಿದ್ದಾನೋ ಇಲ್ಲವೋ ಎಂಬುದನ್ನು ಪರಿಶೀಲಿಸಬೇಕಾಗುತ್ತದೆ.
ಆದರೆ ಸತ್ಯಾಂಶ ಅರಿಯಲು ಪೂರ್ಣ ಪ್ರಮಾಣದ ತನಿಖೆ ಮತ್ತು ವಿಚಾರಣೆ, ಎರಡೂ ನಡೆಯಬೇಕಾಗುತ್ತದೆ,” ಎಂದು ಹೇಳಿದೆ.
ಒಂದು ವೇಳೆ ಐಪಿಸಿ ಸೆಕ್ಷನ್ 306 ಅನ್ವಯಿಸಬೇಕಾದರೆ, ಆತ್ಮಹತ್ಯೆಗೆ ಪ್ರಚೋದನೆಯೇ ಮುಖ್ಯ ಕಾರಣವೆಂದು ದೃಢಪಡಬೇಕು. ಅನ್ಯ ದಾರಿಯಲ್ಲದೆ ಮೃತರು ಆತ್ಮಹತ್ಯೆ ಹಾದಿ ಹಿಡಿದರೆಂದು ಸಾಬೀತು
ಪಡಿಸಬೇಕಾಗುತ್ತದೆ’ ಎಂದೂ ಪೀಠ ತನ್ನ ಆದೇಶದಲ್ಲಿ ವಿವರಿಸಿದೆ.
ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 306ರಡಿ ಪ್ರಕರಣ ದಾಖಲಿಸಲಾಗಿದೆ ಮತ್ತು ಬಸವರಾಜು ಆತ್ಮಹತ್ಯೆಗೆ ಅರ್ಜಿದಾರರು ಪ್ರಚೋದನೆ ನೀಡಿದ್ದಾರೆಂದು ಆರೋಪಿಸಲಾಗಿದೆ.
ತನಿಖೆ ಇನ್ನೂ ಬಾಕಿ ಇದ್ದು, ತನಿಖಾಧಿಕಾರಿ ಡೆತ್ ನೋಟ್ನ ಸತ್ಯಾಸತ್ಯತೆ ಪರಿಶೀಲಿಸಬೇಕು. ಆದ್ದರಿಂದ ಈ ಹಂತದಲ್ಲಿಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲಾಗದು. ಅರ್ಜಿದಾರರು, ಮೃತನಿಗೆ
ಶೋಕಾಸ್ ನೋಟಿಸ್ಗಳನ್ನು ಜಾರಿಗೊಳಿಸಿದ್ದ ಹಿನ್ನೆಲೆಯಲ್ಲಿ ಸೂಸೈಡ್ ನೋಟ್ನ ಅಂಶಗಳ ಬಗ್ಗೆ ತನಿಖೆ ಆಗಲೇಬೇಕು’ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಬಿಇಒ ಅರ್ಜಿಯನ್ನು ವಜಾಗೊಳಿಸಿದೆ.
ಏನಿದು ಪ್ರಕರಣ:
2022ರ ಮೇ ತಿಂಗಳಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಜಿ.ಎನ್.ಪಾಟೀಲ್ (G N Patil) ಅವರಿಗೆ ಕ್ಲಸ್ಟರ್ ಸಂಪನ್ಮೂಲ ಕೇಂದ್ರದ ಸಮನ್ವಯಕಾರರಾಗಿ ಬಡ್ತಿ ನೀಡಿದ ನಂತರ ಬಸವರಾಜ್ ಅವರನ್ನು
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರ ಮುಖ್ಯಶಿಕ್ಷರನ್ನಾಗಿ ನೇಮಕ ಮಾಡಲಾಗಿತ್ತು. 2023ರ ಫೆ.12ರಂದು ಅವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಇನ್ನು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದ ಮೃತರ ಪತ್ನಿ ಮಹಾದೇವಿ, ತಮ್ಮ ಪತಿ ಪಾಟೀಲ್ ಅವರು ಮುಖ್ಯೋಪಾಧ್ಯಾಯರಾಗಿದ್ದಾಗ ಯಾವುದೇ ದಾಖಲೆಗಳನ್ನು ಸರಿಯಾಗಿ ನಿರ್ವಹಣೆ
ಮಾಡಿರಲಿಲ್ಲ ಎಂದು ಬಿಇಒ ಹನುಮಂತರಾಯಪ್ಪ ನೋಟಿಸ್ ಮೇಲೆ ನೋಟಿಸ್ ನೀಡುತ್ತಿದ್ದರು. ಅದೇ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಪತಿ ಆತ್ಮಹತ್ಯೆಗೂ
ಮುನ್ನ ಬರೆದಿದ್ದ ನೋಟ್ನಲ್ಲಿ ಜಿ.ಎನ್. ಪಾಟೀಲ್ ಹಾಗೂ ಹನುಂತರಾಯಪ್ಪ ಅವರ ಹೆಸರನ್ನು ಉಲ್ಲೇಖಿಸಿದ್ದರು ಎಂದು ಆರೋಪಿಸಿದ್ದರು.
- ಭವ್ಯಶ್ರೀ ಆರ್ ಜೆ