• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಚುನಾವಣೋತ್ತರ ಬಿಜೆಪಿ ತಂತ್ರಗಳಿಗೆ ಪ್ರತಿತಂತ್ರ ಹೆಣೆಯಲು ಸಿದ್ದವಾಯ್ತು ರಾಹುಲ್ ಅಂಡ್ ಟೀಮ್!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
congress
0
SHARES
0
VIEWS
Share on FacebookShare on Twitter

ಪಂಚರಾಜ್ಯಗಳ(Five States) ಚುನಾವಣೆಯ(Election) ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರಪ್ರದೇಶ(UttarPradesh), ಉತ್ತರಾಖಂಡ(Uttarkhand), ಮಣಿಪುರ(Manipur), ಗೋವಾ(Goa) ಮತ್ತು ಪಂಜಾಬ್(Punjab) ರಾಜ್ಯಗಳ ವಿಧಾನಸಭೆಗೆ(VidhanaSabha) ನಡೆದ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದೇ ಗುರುವಾರದಂದು ಐದು ರಾಜ್ಯಗಳ ಮತ ಎಣಿಕೆ(Vote Counting) ನಡೆಯಲಿದೆ. ಇನ್ನು ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ಹೀಗಾಗಿ ಎಲ್ಲ ರಾಜಕೀಯ ಪಕ್ಷಗಳು ತಂತ್ರ-ಪ್ರತಿತಂತ್ರಗಳ ಲೆಕ್ಕಾಚಾರದಲ್ಲಿ ಮುಳುಗಿವೆ. ಇನ್ನು ಬಹುತೇಕ ಸಮೀಕ್ಷೆಗಳ(Poll) ಪ್ರಕಾರ ಗೋವಾ ಮತ್ತು ಮಣಿಪುರದಲ್ಲಿ(Manipur) ಅತಂತ್ರ ಫಲಿತಾಂಶ ಬರುವ ಸಾಧ್ಯತೆಗಳಿವೆ.

counting

ಹೀಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಈ ರಾಜ್ಯಗಳ ಬಗ್ಗೆ ವಿಶೇಷ ತಂತ್ರಗಳನ್ನು ರೂಪಿಸುತ್ತಿವೆ. 2017ರಲ್ಲಿ ಗೋವಾ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿದ್ದರು, ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ವಿಫಲವಾಗಿತ್ತು. ಅದಕ್ಕೆ ಮುಖ್ಯ ಕಾರಣ, ಫಲಿತಾಂಶದ ನಂತರ ಇತರ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ಅನುಸರಿಸಿದ ವಿಳಂಬ ನೀತಿ. ಕಾಂಗ್ರೆಸ್ ನಾಯಕರ ವಿಳಂಬ ನೀತಿಯನ್ನೇ ಅಸ್ತ್ರವಾಗಿ ಬಳಸಿಕೊಂಡ ಬಿಜೆಪಿ, ಅನೇಕ ಪಕ್ಷಗಳನ್ನು ಒಗ್ಗೂಡಿಸಿ ಸರ್ಕಾರ ರಚಿಸಿತ್ತು. ಹೀಗಾಗಿ 2017ರಲ್ಲಿ ಮಾಡಿದ ತಪ್ಪನ್ನು ಮತ್ತೆ ಮಾಡಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಫಲಿತಾಂಶಕ್ಕೂ ಮುನ್ನವೇ ತಂತ್ರ-ಪ್ರತಿತಂತ್ರಗಳ ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ.

ಇನ್ನು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಬಿಜೆಪಿಯ ತಂತ್ರಗಳಿಗೆ ಪ್ರತಿತಂತ್ರ ರೂಪಿಸಲು ಐದು ತಂಡಗಳನ್ನು ಸಿದ್ದಪಡಿಸಿ ಐದು ರಾಜ್ಯಗಳಿಗೆ ಕಳುಹಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಗೋವಾ ಮತ್ತು ಮಣಿಪುರ ರಾಜ್ಯಗಳ ಮೇಲೆ ವಿಶೇಷ ಗಮನ ಕೇಂದ್ರಿಕರಿಸಿದ್ದಾರೆ. ಅತಂತ್ರ ಫಲಿತಾಂಶ ಬರುವ ಸೂಚನೆಗಳು ಇರುವುದರಿಂದ ಈಗಾಗಲೇ ಗೆಲ್ಲುವ ಸಾಧ್ಯತೆ ಇರುವ ಪಕ್ಷೇತರ ಅಭ್ಯರ್ಥಿಗಳ ಜೊತೆ ಮತ್ತು ಸಣ್ಣಸಣ್ಣ ಪಕ್ಷಗಳ ನಾಯಕರ ಜೊತೆ ಮಾತುಕತೆ ನಡೆಸುವಂತೆ, ಶಾಸಕರ ಜೊತೆ ನಿರಂತರ ಸಂಪರ್ಕದಲ್ಲಿರುವಂತೆ ವೀಕ್ಷಕರಿಗೆ ತಿಳಿಸಿದ್ದು, ಅತಂತ್ರ ಫಲಿತಾಂಶ ಬಂದರೆ ಕೂಡಲೇ ಶಾಸಕರನ್ನು ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನಕ್ಕೆ ಕರೆತರುವ ವ್ಯವಸ್ಥೆಯನ್ನು ಮೊದಲೇ ಮಾಡಿಟ್ಟುಕೊಳ್ಳುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

counting

ಇನ್ನು ಉತ್ತರಪ್ರದೇಶದಲ್ಲಿ ಯೋಗಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆಗಳು ದಟ್ಟವಾಗಿವೆ. ಬಹುತೇಕ ಎಲ್ಲ ಸಮೀಕ್ಷೆಗಳು ಉತ್ತರಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬರುತ್ತದೆ ಎಂದೇ ಹೇಳಿವೆ. ಇನ್ನು ಉತ್ತರಾಖಂಡದಲ್ಲಿಯೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎನ್ನಲಾಗಿದೆ. ಆದರೆ ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದ್ದು, ಎಎಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಗಳಿವೆ.

ಎಎಪಿ ಸ್ವತಂತ್ರವಾಗಿ ಪಂಜಾಬ್‍ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸೂಚನೆಯನ್ನು ಕೆಲ ಸಮೀಕ್ಷೆಗಳು ನೀಡಿವೆ. ಇನ್ನು ಮಣಿಪುರದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗುವ ಸಾಧ್ಯತೆಗಳಿವೆ. ಸಮೀಕ್ಷೆಗಳ ಪ್ರಕಾರ ಪಂಚರಾಜ್ಯಗಳ ಫಲಿತಾಂಶ ಬಿಜೆಪಿಗೆ ನೆಮ್ಮದಿಯ ಜೊತೆಗೆ ಹೊಸ ಉತ್ಸಾಹ ನೀಡಿದರೆ, ಕಾಂಗ್ರೆಸ್‍ನ್ನು ಮತ್ತಷ್ಟು ಕುಗ್ಗಿಸುವ ಸಾಧ್ಯತೆಗಳಿವೆ. ಈಗಾಗಲೇ ಉತ್ತರಭಾರತದ ರಾಜಸ್ಥಾನ ಹೊರತುಪಡಿಸಿ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ತನ್ನ ಮೂಲ ನೆಲೆಯನ್ನೇ ಕಳೆದುಕೊಂಡಿದೆ. ಪಂಚರಾಜ್ಯಗಳ ಫಲಿತಾಂಶದ ನಂತರ ಕಾಂಗ್ರೆಸ್‍ನ ಶಕ್ತಿ ಮತ್ತಷ್ಟು ಕುಗ್ಗಲಿದೆ.

  • Mahesh Hirematth
Tags: CongresscountingElections2022exitpolluttarpradesh

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.