• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಒಟಿಟಿಯಲ್ಲಿ ಬರಲಿದೆ ‘ಹೀಗೇಕೆ ನೀ ದೂರ ಹೋಗುವೆ’

Preetham Kumar P by Preetham Kumar P
in ಮನರಂಜನೆ
ಒಟಿಟಿಯಲ್ಲಿ ಬರಲಿದೆ ‘ಹೀಗೇಕೆ ನೀ ದೂರ ಹೋಗುವೆ’
0
SHARES
0
VIEWS
Share on FacebookShare on Twitter

ನಟ, ನಿರ್ದೇಶಕ ಸಂದೀಪ್ ಮಲಾನಿ ನಟಿಸಿರುವ ನೂರನೇ ಚಿತ್ರ ‘ಹೀಗೇಕೆ ನೀ ದೂರ ಹೋಗುವೆ’ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಹಂತ ತಲುಪಿದೆ. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

ಚಿತ್ರದ ನಿರ್ದೇಶಕ ಸಂದೀಪ್ ಮಲಾನಿ ಮಾತನಾಡಿ, “ನಾನು ಈವರೆಗೂ ತುಳು, ತಮಿಳು, ಕೊಂಕಣಿ, ಕನ್ನಡ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದೇನೆ. ‘ಹೀಗೇಕೆ ನೀ ದೂರ ಹೋಗುವೆ’ ನನ್ನ ನಟನೆಯ ‌ನೂರನೇ ಚಿತ್ರ. ಈ ಚಿತ್ರದ ನಿರ್ದೇಶಕನೂ ನಾನೇ.. ಇದು ನನ್ನ ಇಷ್ಟವಾದ ಗೀತೆಯೊಂದರ ಸಾಲು. ಚಿತ್ರದ ಕಥೆ ಹಾಗೂ ಶೀರ್ಷಿಕೆಗೂ ಸಂಬಂಧವಿದೆ. ನಾನು ನಟಿಸಲೂ ಬೇಕಾದ ಕಾರಣ, ನನ್ನ ಮಗ ಸಿಲ್ವರ್ ಮಲಾನಿ ಹಾಗೂ ತಮ್ಮ ಸಂತೋಷ್ ಇಬ್ಬರು ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ ನನಗೆ ಸಹಾಯ ಮಾಡಿದ್ದಾರೆ. ರಾಜೇಶ್ ಚೌಧರಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಬೆಂಗಳೂರಿನಲ್ಲೇ ಚಿತ್ರೀಕರಣ ಮಾಡಿದ್ದೇವೆ. ನನ್ನೊಂದಿಗೆ ಎಸ್ತರ್ ನರೋನ್ಹಾ, ಗಾಯಕರಾಗಿ ಖ್ಯಾತ ರಾಗಿ ಈ ಸಿನಿಮಾ ಮೂಲಕ ನಟನೆ ಆರಂಭಿಸಿರುವ ನಿಹಾಲ್ ತಾವ್ರೋ ಹಾಗೂ ಅಶ್ವಿನ್ ಡಿ ಕೋಸ್ಟಾ, ರಾಜೀವ್ ಪಿಳ್ಳೈ, ಸೀಮಾ‌ ಬುತೆಲ್ಲೋ, ಉದಯ ಸೂರ್ಯ ಮತ್ತು ನಿರ್ಮಾಪಕರ ಪುತ್ರಿಯರಾದ ಅಶ್ಮಿತಾ ಚೌಧರಿ, ಅಮೀಶಾ ಚೌಧರಿ ಮುಂತಾದವರು ಅಭಿನಯಿಸಿದ್ದಾರೆ.
ಇದು ತಂದೆ – ಮಗನ ಅವಿನಾಭಾವ ಸಂಬಂಧದ ಸುತ್ತ ಹೆಣೆಯಲಾದ ಕಥೆಯಾಗಿದೆ. ಕನ್ನಡದಲ್ಲಷ್ಟೇ ಅಲ್ಲದೇ ಹಿಂದಿಯಲ್ಲಿ “ದಿ ವಿಸಿಟರ್ಸ್” ಎಂಬ ಹೆಸರಿನಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ಕೊಂಕಣಿ, ತಮಿಳು, ತೆಲುಗು ಹಾಗೂ ಮಲೆಯಾಳಂ ಚಿತ್ರಕ್ಕೆ ಡಬ್ ಆಗಲಿದೆ” ಎಂದು ಚಿತ್ರದ ಸಂಪೂರ್ಣ ಮಾಹಿತಿ ನೀಡಿದರು.

ನಿರ್ಮಾಪಕ ರಾಜೇಶ್ ಚೌಧರಿಯವರು ಮೂಲತಃ ಉದ್ಯಮಿ. “ಜೀಟಿವಿಯಲ್ಲಿ ಎರಡು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದೆ. ಸಂದೀಪ್ ಮಲಾನಿ ಅವರು ಕಥೆ ಹೇಳಿದರು. ನಾನು, ನನ್ನ ಮಗಳು ಇಬ್ಬರೂ ಕಥೆ ಕೇಳಿದೆವು. ಇಷ್ಟವಾಯಿತು. ನನಗೂ ಮಕ್ಕಳ ಜೊತೆ ಕುಳಿತು ನೋಡುವ ಸಿನಿಮಾ ನಿರ್ಮಾಣ ಮಾಡಬೇಕೆಂಬ ಆಸೆಯಿತ್ತು. ನನ್ನ ಮಕ್ಕಳಾದ ಅಸ್ಮಿತಾ ಹಾಗೂ ಅಮೀಶಾ ಅವರ ಹೆಸರಿನಲ್ಲಿ ಈ ಸಿನಿಮಾ ನಿರ್ಮಾಣ‌ ಮಾಡಿದ್ದೇನೆ. ಅವರಿಬ್ಬರೂ ಇದರಲ್ಲಿ ನಟಿಸಿದ್ದಾರೆ. ಈ ಚಿತ್ರದ ನಂತರ ವಿಭಿನ್ನ ಕಥೆಯುಳ್ಳ ಚಿತ್ರಗಳನ್ನು ನಿರ್ಮಿಸುವ ಆಲೋಚನೆಯಿದೆ ಎಂದು” ಚೌಧರಿಯವರು ಹೇಳಿದರು.

“ನಾನು ಹಾಗೂ ಸಂದೀಪ್ ಮಲಾನಿ ಶಕೀಲ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೇವೆ. ನಂತರ ಒಂದು ದಿನ ಫೋನ್ ಮಾಡಿ ಈ ಚಿತ್ರದ ಬಗ್ಗೆ ಹೇಳಿದರು. ತುಂಬಾ ಒಳ್ಳೆಯ ಪಾತ್ರ ನೀಡಿದ್ದಾರೆ. ಚಿತ್ರ ಕೂಡ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ” ಎಂದರು ನಟಿ ಎಸ್ತರ್ ನೊರೋನ್ಹ. ನನಗೆ ಸಂದೀಪ್ ಮಲಾನಿ ಅವರು ಕಾಲ್ ಮಾಡಿ ಚಿತ್ರದ ಕಥೆ ಹೇಳಿದರು. ತುಂಬಾ ಚೆನ್ನಾಗಿದೆ ಅಂದೆ.‌ ಮನಸ್ಸಿನಲ್ಲಿ ಇದೇನಪ್ಪಾ ಸಿಂಗರ್ ಗೆ ಸನ್ನಿವೇಶ ಹೇಳಿದರೆ ಸಾಕು. ಇವರು ಪೂರ್ತಿ ಕಥೆ ಹೇಳುತ್ತಿದ್ದಾರೆ ಅಂದುಕೊಂಡೆ. ನಂತರ ಅವರು ಹೇಳಿದ್ದು, ನೀವು ಈ ಚಿತ್ರದಲ್ಲಿ ಹಾಡುತ್ತಿಲ್ಲ. ನಟಿಸುತ್ತಿದ್ದೀರಾ ಅಂತ! ಕೇಳಿ ಆಶ್ಚರ್ಯವಾಯಿತು. ಒಪ್ಪಿಕೊಂಡೆ. ಪಾತ್ರ ತುಂಬಾ ಹಿಡಿಸಿತು ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿಹಾಲ್ ತಾವ್ರು.

ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಸಿಲ್ವರ್ ಮಲಾನಿ, ಸಂತೋಷ್ ಚಾವ್ಲಾ, ಛಾಯಾಗ್ರಾಹಕ ಸೆಲ್ವಂ, ನಟರಾದ ಉದಯ್ ಕಿರಣ್, ಅಶ್ವಿನ್ ಡಿ ಕೋಸ್ಟಾ, ಸೀಮಾ ಬುತೆಲ್ಲೋ, ಹರೇರಾಮ್ ಠಾಕೂರ್, ಅಶ್ಮಿತಾ, ಅಮಿಶಾ, ರಾಜೀವ್ ಪಿಳ್ಳೈ ಚಿತ್ರದ ಬಗ್ಗೆ ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

Related News

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023
ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ
ಮನರಂಜನೆ

ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.