ವರುಣ್ ಸಿಂಗ್ ಅವರಿಗೆ ಅತ್ಯುತ್ತಮ ಚಿಕಿತ್ಸೆ – ಬಸವರಾಜ್‌ ಬೊಮ್ಮಾಯಿ

basavaraja bommai

ಹಾವೇರಿ ಡಿ 10 : ಸೇನಾ ಹೆಲಿಕಾಪ್ಟರ್‌ ಅಪಘಾತದಲ್ಲಿ ಗಾಯಗೊಂಡಿರುವ ಕ್ಯಾಪ್ಟನ್ ವರುಣ್‌ ಸಿಂಗ್‌ ಅವರಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ  ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದೇನೆ. ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಂದ ಅವರಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ವಿಧಾನ ಪರಿಷತ್​ ಚುನಾವಣೆಗೆ ಮತದಾನ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ವರುಣ್ ಸಿಂಗ್ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದರು.

ಸೇನಾಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್​ ಅವರು ವೀರ ಮರಣವನ್ನು ಹೊಂದಿದ್ದಾರೆ. ವಿಕೃತ ಮನಸ್ಸಿನ ಕೆಲವು ವ್ಯಕ್ತಿಗಳು ಅವರ ಸಾವಿನ ಬಗ್ಗೆ ಅವಹೇಳನಕಾರಿ, ಸಂಭ್ರಮಾಚರಣೆಯ ಸಂದೇಶಗಳನ್ನು ಟ್ವೀಟ್ ಮಾಡಿದ್ದಾರೆ. ಈ ಅಂಶಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ಇದೇ ವೇಳೆ ಸಿಎಂ ಸ್ಪಷ್ಟಪಡಿಸಿದರು.

Exit mobile version