• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಗಗನಕ್ಕೇರಿದ ತರಕಾರಿ ಬೆಲೆ : ಜನಸಾಮಾನ್ಯರ ಜೇಬಿಗೆ ಮತ್ತೊಂದು ಹೊರೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರಿನಲ್ಲಿ ಗಗನಕ್ಕೇರಿದ ತರಕಾರಿ ಬೆಲೆ : ಜನಸಾಮಾನ್ಯರ ಜೇಬಿಗೆ ಮತ್ತೊಂದು ಹೊರೆ
0
SHARES
12
VIEWS
Share on FacebookShare on Twitter

ಜನಸಾಮಾನ್ಯರಿಗೆ ಬೆಲೆ (vegetable price hike karnataka) ಏರಿಕೆಯ ಬಿಸಿ: ತರಕಾರಿ ದರದಲ್ಲಿ ಭಾರೀ ಜಿಗಿತ

ಶತಕ ದಾಟಿದ ನುಗ್ಗೆಕಾಯಿ, ಬೆಳ್ಳುಳ್ಳಿ, ಬೀನ್ಸ್ ಸೇರಿದಂತೆ ಹಲವು ತರಕಾರಿಗಳ ದರ

ಮಳೆ ಕೊರತೆ, ಕಡಿಮೆ ಪೂರೈಕೆಯಿಂದ ಬೆಂಗಳೂರಿನಲ್ಲಿ ತರಕಾರಿ ದರಗಳಲ್ಲಿ ಭಾರೀ ಏರಿಕೆ

Bengaluru: ಈಗಾಗಲೇ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ (vegetable price hike karnataka) ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ.

ರಾಜಧಾನಿ ಬೆಂಗಳೂರಿನಲ್ಲಿ ತರಕಾರಿ ಹಾಗೂ ಸೊಪ್ಪಿನ ದರಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕುಟುಂಬಗಳ ಮಾಸಿಕ ವೆಚ್ಚದ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ.

ಮಾರುಕಟ್ಟೆಗೆ ತರಕಾರಿಗಳ ಪೂರೈಕೆ ಕಡಿಮೆಯಾಗಿರುವುದು ಹಾಗೂ ಹವಾಮಾನ ವೈಪರೀತ್ಯದ ಪರಿಣಾಮವಾಗಿ ಹಲವಾರು ತರಕಾರಿಗಳ ಬೆಲೆ ದಾಖಲೆ ಮಟ್ಟ ತಲುಪಿದೆ.

vegetable price hike karnataka

ಕೆಲವು ತರಕಾರಿಗಳ ಬೆಲೆ ಮೊದಲ ಬಾರಿಗೆ ನೂರು ರೂಪಾಯಿಯ (vegetable price hike karnataka) ಗಡಿ ದಾಟಿರುವುದು ಗ್ರಾಹಕರ ಆತಂಕಕ್ಕೆ ಕಾರಣವಾಗಿದೆ.

ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡು ಹಾಗೂ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಮಳೆ ಕೊರತೆ ಮತ್ತು ಅಸಮರ್ಪಕ

ಹವಾಮಾನದ ಪರಿಣಾಮ ಬೆಳೆ ಉತ್ಪಾದನೆ ಕುಸಿದಿದೆ. ಇದರ ನೇರ ಪರಿಣಾಮ ಬೆಂಗಳೂರಿನ ಪ್ರಮುಖ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಗಳ ಮೇಲೆ ಕಂಡುಬಂದಿದೆ.

ಮಾರುಕಟ್ಟೆಗೆ ಅಗತ್ಯ ಪ್ರಮಾಣದಲ್ಲಿ ತರಕಾರಿ ಪೂರೈಕೆಯಾಗದ ಕಾರಣ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗಿದೆ. ವ್ಯಾಪಾರಿಗಳ ಪ್ರಕಾರ, ಮುಂದಿನ ಕೆಲವು ದಿನಗಳವರೆಗೆ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯೂ ಇದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ನುಗ್ಗೆಕಾಯಿ ಮತ್ತು ಬೆಳ್ಳುಳ್ಳಿ ಪ್ರತಿ ಕೆಜಿಗೆ ₹200 ರಿಂದ ₹220 ರವರೆಗೆ ಮಾರಾಟವಾಗುತ್ತಿವೆ. ಬೀನ್ಸ್ ಬೆಲೆ ₹115 ರಿಂದ ₹140,

ಮೆಂತ್ಯ ಸೊಪ್ಪು ₹120 ರಿಂದ ₹130, ಬಿಳಿ ಬದನೆಕಾಯಿ ₹110 ರಿಂದ ₹120, ಹಸಿಮೆಣಸಿನಕಾಯಿ ಹಾಗೂ ಬಟಾಣಿ ₹100 ರಿಂದ ₹120 ರವರೆಗೆ ಏರಿಕೆಯಾಗಿದೆ.

ಕ್ಯಾರೆಟ್ ಹಾಗೂ ಕ್ಯಾಪ್ಸಿಕಂ ಖರೀದಿಸಬೇಕಾದರೂ ಗ್ರಾಹಕರು ಪ್ರತಿ ಕೆಜಿಗೆ ₹80 ರಿಂದ ₹100 ವರೆಗೆ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಲೆ ಏರಿಕೆಯ

ಕಾರಣ ಮಧ್ಯಮ ಹಾಗೂ ಬಡ ಕುಟುಂಬಗಳು ತಮ್ಮ ದಿನನಿತ್ಯದ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಬೇಕಾದ ಅನಿವಾರ್ಯತೆ ಎದುರಿಸುತ್ತಿವೆ.

ಆದರೆ ಈ ಬೆಲೆ ಏರಿಕೆಯ ನಡುವೆ ಟೊಮೆಟೊ ಮತ್ತು ಈರುಳ್ಳಿ ದರ ಮಾತ್ರ ತುಸು ಸಮಾಧಾನ ತಂದಿದೆ. ಸಗಟು ಮಾರುಕಟ್ಟೆಯಲ್ಲಿ ಟೊಮೆಟೊ ₹10 ರಿಂದ ₹15

ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ ₹15 ರಿಂದ ₹20 ರವರೆಗೆ ಲಭ್ಯವಿದೆ. ಈರುಳ್ಳಿಯ ಬೆಲೆಯೂ ₹20 ರಿಂದ ₹25ರೊಳಗೆ ಇದೆ.

ಮತ್ತೊಂದೆಡೆ ಕೋಳಿ ಮೊಟ್ಟೆಯ ಬೆಲೆಯೂ ಏರಿಕೆಯಾಗಿದ್ದು, ಒಂದು ಮೊಟ್ಟೆಯ ಬೆಲೆ ₹8ಕ್ಕೆ ತಲುಪಿರುವುದು ಗ್ರಾಹಕರ ವೆಚ್ಚವನ್ನು ಇನ್ನಷ್ಟು ಹೆಚ್ಚಿಸಿದೆ. ತರಕಾರಿಗಳ ಜೊತೆಗೆ ಇತರ ಆಹಾರ ಪದಾರ್ಥಗಳ ದರ ಏರಿಕೆಯಾಗುತ್ತಿರುವುದು ಕುಟುಂಬಗಳ ಮಾಸಿಕ ಬಜೆಟ್‌ಗೆ ಸವಾಲಾಗಿದೆ.

ತಜ್ಞರ ಅಭಿಪ್ರಾಯದಂತೆ, ಹವಾಮಾನ ವೈಪರೀತ್ಯ, ಕಡಿಮೆ ಉತ್ಪಾದನೆ ಹಾಗೂ ಪೂರೈಕೆಯಲ್ಲಿನ ವ್ಯತ್ಯಯವೇ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿವೆ.

ಬೆಲೆ ಹೆಚ್ಚಿರುವ ಕಾರಣ ಅನೇಕ ಗ್ರಾಹಕರು ಮೊದಲಿನಂತೆ ಒಂದು ಅಥವಾ ಎರಡು ಕೆಜಿ ತರಕಾರಿ ಖರೀದಿಸುವ ಬದಲು ಕಾಲು ಕೆಜಿ ಅಥವಾ ಅರ್ಧ ಕೆಜಿಗೆ ಸೀಮಿತವಾಗುತ್ತಿದ್ದಾರೆ.

ಇದರಿಂದ ಮಾರುಕಟ್ಟೆಯಲ್ಲಿ ವ್ಯಾಪಾರವೂ ನಿಧಾನಗೊಂಡಿದ್ದು, ವ್ಯಾಪಾರಿಗಳಿಗೂ ವ್ಯವಹಾರದಲ್ಲಿ ಕುಸಿತ ಕಂಡುಬಂದಿದೆ. ಹವಾಮಾನ ಪರಿಸ್ಥಿತಿ ಸುಧಾರಿಸಿ ಮಾರುಕಟ್ಟೆಗೆ

ಹೆಚ್ಚಿನ ಪ್ರಮಾಣದಲ್ಲಿ ತರಕಾರಿ ಪೂರೈಕೆಯಾದರೆ ಮಾತ್ರ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : https://vijayatimes.com/geo-tagging-mandatory-for-all-government-offices-in-the-state/

Tags: bengaluruHikePricevegetables

Related News

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ
ದೇಶ-ವಿದೇಶ

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ

July 21, 2026
ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಜಲವಿದ್ಯುತ್ ಸುರಂಗ ಕುಸಿತ: 7 ಕಾರ್ಮಿಕರ ದುರ್ಮರಣ, ಹಲವರು ಸಿಲುಕಿರುವ ಶಂಕೆ
ದೇಶ-ವಿದೇಶ

ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಜಲವಿದ್ಯುತ್ ಸುರಂಗ ಕುಸಿತ: 7 ಕಾರ್ಮಿಕರ ದುರ್ಮರಣ, ಹಲವರು ಸಿಲುಕಿರುವ ಶಂಕೆ

July 21, 2026
ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.