- ಶಾಲೆ-ಕಾಲೇಜಲ್ಲಿ (School and college) ಜಾತಿ ತಾರತಮ್ಯ ನಿವಾರಣೆಗೆ ಶೀಘ್ರ ವೇಮುಲ ಕಾಯ್ದೆ ಜಾರಿ
- ಕರ್ನಾಟಕದಲ್ಲಿ ರೋಹಿತ್ ವೇಮುಲ ಕಾಯ್ದೆ (Rohith Vemula Act) ಜಾರಿ ಮಾಡುತ್ತೇವೆಂದ ಸಿದ್ದರಾಮಯ್ಯ (Vemula Act to be implemented soon)
- ಯಾವುದೇ ವಿದ್ಯಾರ್ಥಿ ಜಾತಿ, ವರ್ಗ ಹಾಗೂ ಧರ್ಮದ ಆಧಾರದ ಮೇಲೆ ತಾರತಮ್ಯಕ್ಕೆ ಒಳಗಾಗದಂತೆ ನೋಡಿಕೊಳ್ಳಲು ಆದಷ್ಟು ಬೇಗ ಈ ಕಾಯ್ದೆ ಜಾರಿ
Bengaluru: ದೇಶದಲ್ಲಿ ಹಿಂದುಳಿತ ವರ್ಗದವರಿಗೆ ಶಿಕ್ಷಣ ಸಂಸ್ಥೆಗಳಲ್ಲಿ (Educational institutions) , ಉದ್ಯೋಗದಲ್ಲಿ ಹೆಚ್ಚು ಅವಕಾಶ ಸಿಗುವಂತಾಗಬೇಕು ಎಂದು ರಾಹುಲ್ ಗಾಂಧಿ (Rahul Gandhi) ಹೇಳುತ್ತಲೇ ಬಂದಿದ್ದಾರೆ. ಇದೀಗ ಕರ್ನಾಟಕ ಸಿಎಂ ಸಿದ್ದರಾಮಯ್ಯಗೆ (CM Siddaramaiah) ಪತ್ರ ಬರೆದಿರುವ ರಾಹುಲ್, ರಾಹುಲ್ ವೇಮುಲಾ ಕಾಯ್ದೆ ಜಾರಿಗೊಳಿಸುವಂತೆ ಸೂಚನೆ ನೀಡಿದ್ದಾರೆ.
ಏಪ್ರಿಲ್ 16 ರಂದು ರಾಹುಲ್ ಪತ್ರ ಬರೆದಿದ್ದು ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಿಮಗೆ ಸಾಮಾಜಿಕ ನ್ಯಾಯದ ಕುರಿತಾಗಿರುವ ಬದ್ಧತೆಯನ್ನು ಇದು ಸೂಚಿಸುತ್ತದೆ ಎಂದು ಅಭಿನಂದಿಸಿದ್ದಾರೆ. ನಮ್ಮ ಸರ್ಕಾರ ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ಬದ್ಧವಾಗಿದೆ. ಸದ್ಯದಲ್ಲೇ ಈ ಕಾಯಿದೆಯನ್ನು ನಾವು ಜಾರಿಗೆ (Implemented) ತರಲಿದ್ದೇವೆ ಎಂದಿದ್ದಾರೆ.
ರೋಹಿತ್ ವೇಮುಲಾ ಜಾತಿಯ (Vemula caste) ಕಾರಣಕ್ಕೆ ಉನ್ನತ ಶಿಕ್ಷಣ ಅವಕಾಶ ವಂಚಿತರಾಗಿದ್ದರಿಂದ ಮನನೊಂದು ಆ*ಹ* ಮಾಡಿಕೊಂಡಿದ್ದರು ಎನ್ನಲಾಗಿತ್ತು. ಅಂತಹ ಘಟನೆಗಳು ಮತ್ತೆ ಯಾರಿಗೂ ಆಗಬಾರದು ಎಂಬ ಉದ್ದೇಶಕ್ಕೆ ಈ ಕಾಯಿದೆಯನ್ನು ಜಾರಿಗೊಳಿಸಬೇಕು ಎಂದು ರಾಹುಲ್ ಪತ್ರದಲ್ಲಿ ಹೇಳಿದ್ದಾರೆ.
ಲಕ್ಷಾಂತರ ದಲಿತ, ಆದಿವಾಸಿ ಮತ್ತು ಒಬಿಸಿ (Adivasi and OBC) ಸಮುದಾಯದ ಮಕ್ಕಳು ನಮ್ಮ ಶೈಕ್ಷಣಿಕ ವ್ಯವಸ್ಥೆಯಲ್ಲಿ ಇಂದಿಗೂ ತಾರತಮ್ಯಕ್ಕೆ ಒಳಗಾಗುತ್ತಿದ್ದಾರೆ ಎಂಬುದು ನಾಚಿಕೆಗೇಡಿನ ವಿಚಾರ. ತಾರಮತ್ಯದಿಂದಾಗಿ ರೋಹಿತ್ ವೇಮುಲ, ಪಾಯಲ್ ತಾಡ್ವಿ (Rohit Vemula, Payal Tadvi) ಮತ್ತು ದರ್ಶನ್ ಸೋಲಂಕಿ (Darshan Solanki) ಅವರಂಥ ಪ್ರತಿಭಾವಂತರ ಹತ್ಯೆಯನ್ನು ಒಪ್ಪಲು ಸಾಧ್ಯವಿಲ್ಲ.

ಇಂಥದ್ದಕ್ಕೆಲ್ಲ ಇದೀಗ ಅಂತ್ಯ ಹಾಡುವ ಕಾಲ ಬಂದಿದೆ. ಇದಕ್ಕಾಗಿ ರೋಹಿಲ್ ವೇಮುಲಾ ಕಾಯ್ದೆ (Rohil Vemula Act) ಜಾರಿಗೆ ತರಬೇಕೆಂದು ನಾನು ಕರ್ನಾಟಕ ಸರ್ಕಾರಕ್ಕೆ (Karnataka Govt) ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ (Siddaramaiah) ಅವರಿಗೆ ಬರೆದಿರುವ ಈ ಪತ್ರವನ್ನು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ (Rahul Gandhi) , ಡಾ.ಬಿ.ಆರ್.ಅಂಬೇಡ್ಕರ್ (Dr. B.R. Ambedkar) ತಮ್ಮ ಜೀವಿತಾವಧಿಯಲ್ಲಿ ಅನುಭವಿಸಿದ ತಾರತಮ್ಯದ ಕುರಿತು ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಾರೆ.
ಜತೆಗೆ, ನಮ್ಮ ಶೈಕ್ಷಣಿಕ ವ್ಯವಸ್ಥೆಯಲ್ಲಿರುವ (Educational system) ಜಾತಿ ತಾರತಮ್ಯ ಈಗಾಗಲೇ ಪ್ರತಿಭಾವಂತರನ್ನು ಬಲಿಪಡೆದಿದೆ. ಇಂಥ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.ರಾಹುಲ್ಗಾಂಧಿ ಪೋಸ್ಟ್ಗೆ ಎಕ್ಸ್ ಖಾತೆ ಮೂಲಕವೇ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,
ನಿಮ್ಮ ಭಾವನಾತ್ಮಕ ಪತ್ರ ಹಾಗೂ ಸಾಮಾಜಿಕ ನ್ಯಾಯದ ಬಗೆಗಿನ ಅಚಲ ಬದ್ಧತೆಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಸರ್ಕಾರ ಕರ್ನಾಟಕದಲ್ಲಿ (Government Of Karnataka) ರೋಹಿತ್ ವೇಮುಲ ಕಾನೂನು ಜಾರಿಗೆ ತರುವ ದೃಢ ನಿಲುವು ಹೊಂದಿದೆ.
ಯಾವುದೇ ವಿದ್ಯಾರ್ಥಿ ಜಾತಿ (Student Caste) , ವರ್ಗ ಹಾಗೂ ಧರ್ಮದ ಆಧಾರದ ಮೇಲೆ ತಾರತಮ್ಯಕ್ಕೆ ಒಳಗಾಗದಂತೆ (Vemula Act to be implemented soon) ನೋಡಿಕೊಳ್ಳಲು ಆದಷ್ಟು ಬೇಗ ಈ ಕಾಯ್ದೆ ಜಾರಿ (Enforcement of Act) ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.