ಚೆನ್ನೈ, ಏ. 06; ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಿಗೆ ಇಂದು ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಈ ವೇಳೆ ತಮಿಳುನಾಡಿನ ಖ್ಯಾತ ನಟ ದಳಪತಿ ವಿಜಯ್ ಚೆನ್ನೈನ ನೀಲಾಂಗರೈನಲ್ಲಿರುವ ತನ್ನ ಮನೆಯಿಂದ ಮತದಾನ ಕೇಂದ್ರಕ್ಕೆ ಸೈಕಲ್ನಲ್ಲಿ ತೆರಳುವ ಮೂಲಕ ಗಮನ ಸೆಳೆದಿದ್ದಾರೆ.
ನಟ ವಿಜಯ್ ಸೈಕಲ್ನಲ್ಲಿ ಮತದಾನ ಕೇಂದ್ರಕ್ಕೆ ತೆರಳಿದ ತನ್ನ ಉದ್ದೇಶವನ್ನು ಈವರೆಗೆ ಬಹಿರಂಗಪಡಿಸಿಲ್ಲ. ಆದರೆ, ಕೇಂದ್ರ ಸರ್ಕಾರ ಸತತವಾಗಿ ತೈಲ ಬೆಲೆ ಏರಿಸುತ್ತಿದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುವ ನಿಟ್ಟಿನಿಂದಲೇ ನಟ ವಿಜಯ್ ಇಂದು ಸೈಕಲ್ನಲ್ಲಿ ತೆರಳಿ ಮತ ಚಲಾಯಿಸಿದ್ದಾರೆ ಎಂದು ಅವರ ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ಈ ಕಾರಣವನ್ನು ಸ್ವತಃ ಅವರೇ ಸ್ಪಷ್ಟಪಡಿಸಬೇಕಾಗಿದೆ.