• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಿಜಯ ದಶಮಿಯ ಹಿನ್ನಲೆಯೇನು? ಆಚರಣೆಯ ರಹಸ್ಯವೇನು? ಮಾಹಿತಿ ಇಲ್ಲಿದೆ…

Sharadhi by Sharadhi
in ಪ್ರಮುಖ ಸುದ್ದಿ
ವಿಜಯ ದಶಮಿಯ ಹಿನ್ನಲೆಯೇನು? ಆಚರಣೆಯ ರಹಸ್ಯವೇನು? ಮಾಹಿತಿ ಇಲ್ಲಿದೆ…
0
SHARES
0
VIEWS
Share on FacebookShare on Twitter

ಇಂದು ಆಶ್ವಯುಜ ಮಾಸದ ಶುಕ್ಲ ದಶಮಿ, ಇವತ್ತಿನ ವಿಶೇಷತೆ ಎಂದರೆ ವಿಜಯ ದಶಮಿ. ನವರಾತ್ರಿಯ ಕೊನೆಯ ದಿನವಾದ ಇಂದು ಬಿಜೋಯಾ ದಶಮಿ ಅಥವಾ ವಿಜಯ ದಶಮಿ ಎಂದು ಕರೆಯುತ್ತಾರೆ. ದುರ್ಗಾ ದೇವಿಯ ಹಬ್ಬವನ್ನು ಭಾರತದಾದ್ಯಂತ ವಿವಿಧ ಹೆಸರುಗಳಲ್ಲಿ ಆಚರಿಸುತ್ತಾರೆ. ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ದುರ್ಗಾ ಪೂಜೆಯನ್ನು ಭಾರತದ ಪೂರ್ವ ಭಾಗದಲ್ಲಿ ಪ್ರಮುಖ ಉತ್ಸವವನ್ನಾಗಿ ಆಚರಿಸುತ್ತಾರೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬದ ರೂಪದಲ್ಲಿ ಬಹಳ ಅದ್ದೂರಿಯಾಗಿ ಆಚರಿಸುತ್ತಾರೆ. ಮುಂಬೈ ಗಣೇಶ ಪೂಜೆಗೆ ಹೆಸರಾದಂತೆಯೇ ಕೋಲ್ಕತ್ತಾ ದುರ್ಗಾ ಪೂಜೆಗೆ ಪ್ರಸಿದ್ಧಿ ಪಡೆದಿದೆ. ಈ ಶ್ರೇಷ್ಠ ಹಬ್ಬ ಅಥವಾ ಉತ್ಸವದ ಆಚರಣೆಯ ಹಿಂದೆ ಅನೇಕ ಪುರಾಣ ಕಥೆಗಳ ನಂಟಿದೆ.
ಮಹಿಷಾಸುರನ ವಧಿಸಿ ವಿಜಯ ಸಾಧಿಸಿದ ಕಥೆ:
ಸ್ಕಂದ ಪುರಾಣದ ಪ್ರಕಾರ ಆದಿಶಕ್ತಿಯು ಮಹಿಷಾಸುರನ ಆರ್ಭಟಕ್ಕೆ ಅಂತ್ಯವಾಡಲು ನಿರ್ಧರಿಸಿ. ಅವನೊಂದಿಗೆ ಹೋರಾಟಕ್ಕೆ ಇಳಿದಳು. ಆಗ ಆ ಮಹಾಯುದ್ಧವು ಒಂಬತ್ತು ದಿನಗಳ ಕಾಲ ನಡೆಯಿತು. ಹತ್ತನೆಯ ದಿನ ಆತ ಆ ತಾಯಿಯ ಎದುರು ತನ್ನ ಪೌರುಷ ತಡೆಯದೆ ಹತನಾದನು. ಅದೇ ನೆನಪಿಗೆ ವಿಜಯ ದಶಮಿ ಎಂದು ಆಚರಿಸಲಾಗುತ್ತದೆ. ತನ್ನ ಮಕ್ಕಳನ್ನು ಕಾಪಾಡಲು ಮತ್ತು ಅವರ ಸಂಕಟವನ್ನು ನಿವಾರಿಸಲು ಆ ತಾಯಿ ಅವತಾರ ಎತ್ತಿ ಬಂದು ಹೋರಾಡಿದ ನೆನಪಿಗೆ ನಾವು ಈ ಹಬ್ಬವನ್ನು ಆಚರಿಸುತ್ತೇವೆ.
ರಾವಣನ ಮೇಲೆ ಶ್ರೀರಾಮನ ವಿಜಯ:
ವಿಜಯದಶಮಿಯನ್ನು ರಾವಣನ ಮೇಲೆ ಶ್ರೀರಾಮಚಂದ್ರನು ಸಾಧಿಸಿದ ವಿಜಯದ ನೆನಪಿಗಾಗಿ ಸಹ ಆಚರಿಸಲಾಗುತ್ತದೆ. ಸೀತಾ ಮಾತೆಯನ್ನು ಲಂಕೆಯಿಂದ ಬಿಡಿಸಿಕೊಂಡು ಹೋಗಲು ಬಂದ ಶ್ರೀರಾಮನು ರಾವಣನನ್ನು ಸಂಹರಿಸುತ್ತಾನೆ. ಇದರ ನೆನಪಿನಾರ್ಥವಾಗಿ ರಾವಣನ ಪ್ರತಿಕೃತಿಗಳನ್ನು ದಹನ ಮಾಡುತ್ತಾರೆ. ಇದು ಕೆಟ್ಟದ್ದರ ವಿರುದ್ಧ ಒಳ್ಳೆಯದು ಗೆಲುವು ಸಾಧಿಸಿದ ಧ್ಯೋತಕ ಎಂದು ನಂಬಲಾಗುತ್ತದೆ. ರಾವಣನಿಗೆ ಹತ್ತು ತಲೆಗಳು ಇದ್ದವು. ಇವೆಲ್ಲವೂ ರಾವಣನಿಗೆ ಅಸಾಧ್ಯವಾದ ಅಹಂ ಅನ್ನು ನೀಡಿದ್ದವು. ಈ ಹತ್ತು ತಲೆಗಳನ್ನು ಸಂಹರಿಸಿದ ದಿನವೇ “ದಶ ಹರ” ಎಂದು ಕರೆಯಲ್ಪಟ್ಟಿತು. ಮುಂದೆ ಇದೇ ಜನರ ಬಾಯಲ್ಲಿ ದಸರಾ ಎಂದು ಬದಲಾಯಿತು. ಅಹಂ ಅನ್ನು ಓಡಿಸುವ ದಿನ ಇದು ಎಂದು ಸಹ ಕರೆಯಲ್ಪಡುತ್ತದೆ.
ಪಾಂಡು ಪುತ್ರರ ವನವಾಸ ಅಂತ್ಯಗೊಂಡಿದ್ದು:
ಮಹಾಭಾರತದಲ್ಲಿ ಪಾಂಡವರ ಅಜ್ಞಾತವಾಸವು ಅಂತ್ಯಗೊಂಡ ದಿನವೇ “ವಿಜಯದಶಮಿ”. ಕೌರವರ ಜೊತೆಗೆ ನಡೆದ ಪಗಡೆಯಾಟದಲ್ಲಿ ಸೋತು, ನಿಯಮದ ಪ್ರಕಾರ ಹನ್ನೆರಡು ವರ್ಷಗಳ ವನವಾಸ ಮತ್ತು ಒಂದು ವರ್ಷದ ಅಜ್ಞಾತ ವಾಸವನ್ನು ಮಾಡಿದ ಪಾಂಡವರು, ತಮ್ಮ ಅಜ್ಞಾತವಾಸವನ್ನು ಮುಗಿಸಿ, ತಮ್ಮ ರಾಜ್ಯವನ್ನು ತಮಗೆ ನೀಡಿರಿ ಎಂದು ಕೇಳಲು ಬಂದರು. ಆ ಕ್ರಿಯೆಗೆ ಮುನ್ನುಡಿ ಹಾಡಿದ ವಿರಾಟನ ಗೋಗ್ರಹಣಕ್ಕೆ ಪ್ರತಿಯಾಗಿ ಯುದ್ಧವೊಂದು ನಡೆಯಿತು. ಆ ಯುದ್ಧ ನಡೆದಿದ್ದು ವಿಜಯದಶಮಿಯಂದು.
ವಿಜಯದಶಮಿಯ ಆಚರಣೆಗಳು:
ಉತ್ತರ ಭಾರತದಲ್ಲಿ ಆಶ್ವಯುಜ ಮಾಸದ ಮೊದಲ ದಿನದಂದು ಬಾರ್ಲಿ ಬೀಜಗಳನ್ನು ಮಣ್ಣಿನ ಮಡಿಕೆಯಲ್ಲಿ ಹಾಕಿಡುತ್ತಾರೆ. ವಿಜಯದಶಮಿಯ ದಿನ ಮೊಳಕೆಗಳು ಬಂದಿರುವ ಈ ಬಾರ್ಲಿಗಳನ್ನು ತೆಗೆದುಕೊಂಡು ಹೋಗಿ ನೆಡುತ್ತಾರೆ. ಅವರ ಪ್ರಕಾರ ಇವು ಅದೃಷ್ಟವನ್ನು ತರುವ ಸಸಿಗಳಾಗಿರುತ್ತವೆಯಂತೆ. ಇವನ್ನು “ನೊರಾತ್ರಗಳು” ಎಂದು ಕರೆಯುತ್ತಾರೆ. ಅಂದರೆ, ಒಂಬತ್ತು ರಾತ್ರಿಯಷ್ಟು ವಯಸ್ಸಾದವು ಎಂದು ಹೆಸರು.
ಕೆಟ್ಟದ್ದರ ವಿರುದ್ಧ ಒಳ್ಳೆಯದು ಸಾಧಿಸಿದ ಗೆಲುವನ್ನು ಆಚರಿಸಲು ವಿಜಯದಶಮಿಯನ್ನು ಆಚರಿಸಲಾಗುತ್ತದೆ. ಯಾವುದೇ ಧರ್ಮ, ಮತಗಳ ಭೇದವಿಲ್ಲದೆ ಹಲವರು ಈ ಹಬ್ಬವನ್ನು ಆಚರಿಸುತ್ತಾರೆ. ಎಲ್ಲರಿಗೂ ಸಿಹಿಗಳನ್ನು ಹಂಚಿ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಶಾಂತಿ ಮತ್ತು ಸೌಹಾರ್ದತೆಯ ಜೊತೆಗೆ ಸಂಪತ್ತನ್ನು ಕರುಣಿಸು ಎಂದು ದೇವಿಯನ್ನು ಪ್ರಾರ್ಥಿಸುತ್ತಾರೆ. ಜೊತೆಗೆ ಸುಗ್ಗಿಯ ಕಾಲವನ್ನು ಬರಮಾಡಿಕೊಳ್ಳಲು ಈ ಹಬ್ಬದಲ್ಲಿ ಪ್ರಾರ್ಥನೆಯನ್ನು ಮಾಡುತ್ತಾರೆ.

ಈ ವರ್ಷ ಕೊರೋನವನ್ನೂ ಮರ್ದಿಸಿ ಜನರನ್ನು ಕಾಪಾಡಬೇಕು ಎನ್ನುವುದು ಎಲ್ಲರ ಬೇಡಿಕೆ, ಆಶಯವಾಗಿದೆ.

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.