‘ಸಾವಿತ್ರಿ’ಗೆ ನಾಯಕ ವಿಜಯ ರಾಘವೇಂದ್ರ

ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಟಿ ತಾರಾ ಅವರು ಪ್ರಧಾನ ಪಾತ್ರದಲ್ಲಿ ಅಭಿನಯಿಸುತ್ತಿರುವ ‘ಸಾವಿತ್ರಿ’ ಚಿತ್ರದ ನಾಯಕರಾಗಿ ವಿಜಯ ರಾಘವೇಂದ್ರ ಆಯ್ಕೆಯಾಗಿದ್ದಾರೆ. ಇದೇ ನವೆಂಬರ್‌ 19ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರಿನ ಸುತ್ತಮುತ್ತ 45 ದಿನಗಳ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ತಿಳಿಸಿದೆ.

ಪಿ.ಎನ್.ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ (ಹೀಲಲ್ಲಿಗೆ) ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಎಸ್ ದಿನೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ‌ ಮಾಡುತ್ತಿದ್ದಾರೆ. ‘ಉಯ್ಯಾಲೆ’ ನಂತರ ಇದು ನಿರ್ದೇಶಕರ ಎರಡನೇ ಚಿತ್ರವಾಗಿದೆ.

ಈ ಚಿತ್ರಕ್ಕೆ ಖ್ಯಾತ ಸಾಹಿತಿ ಹೃದಯ ಶಿವ ಅವರ  ಸಂಗೀತ, ಗೀತರಚನೆ ಹಾಗೂ ಸಂಭಾಷಣೆ ನೀಡಿದ್ದಾರೆ. ಈ ಮೂಲಕ ಗೀತರಚನೆಕಾರರಾಗಿದ್ದ ಹೃದಯ ಶಿವ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

ಪ್ರಕಾಶ್ ಬೆಳವಾಡಿ, ಸಂಜು ಬಸಯ್ಯ(ಕಾಮಿಡಿ ಕಿಲಾಡಿಗಳು) ,‌ಬೇಬಿ ಲೈಲಾ, ಪ್ರಮೋದ್ ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.

Exit mobile version