• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

‘ವಿಜಯಾನಂದ’ ಚಿತ್ರೀಕರಣ ಶುರು

Preetham Kumar P by Preetham Kumar P
in ಮನರಂಜನೆ
‘ವಿಜಯಾನಂದ’ ಚಿತ್ರೀಕರಣ ಶುರು
0
SHARES
0
VIEWS
Share on FacebookShare on Twitter

ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಮುಹೂರ್ತ ನೆರವೇರಿಸಿಕೊಂಡ ‘ವಿಜಯಾನಂದ’ ಚಿತ್ರದ ಚಿತ್ರೀಕರಣ ಭರದಿಂದ ಆರಂಭವಾಗಿದೆ.

ಹುಬ್ಬಳ್ಳಿಯಲ್ಲಿ ಮುಹೂರ್ತ ನೆರವೇರಿದ ಜಾಗಕ್ಕಿಂತ 20ಕಿ.ಮೀ ದೂರದಲ್ಲಿ ಚಿತ್ರೀಕರಣ ಶುರುವಾಗಿದ್ದು 60ದಿನಗಳ ಕಾಲ ಶೂಟಿಂಗ್ ಮುಂದುವರಿಯಲಿರುವುದಾಗಿ ನಿರ್ದೇಶಕಿ ರಿಷಿಕಾ ಶರ್ಮ ತಿಳಿಸಿದ್ದಾರೆ. ಇದು ಪದ್ಮ ಶ್ರೀ ವಿಜಯ ಸಂಕೇಶ್ವರ ಅವರ ನೈಜ ಬದುಕಿನ ಕತೆಯಾಗಿದ್ದರೂ, ಒಂದು ಕಮರ್ಷಿಯಲ್ ಸಿನಿಮಾಗೆ ಬೇಕಾದ ಎಲ್ಲ ಸ್ವಾತಂತ್ರ್ಯಗಳನ್ನು ಬಳಸಿಕೊಂಡೇ ಚಿತ್ರ ಮಾಡುವುದಾಗಿ ಅವರು ಹೇಳಿದ್ದಾರೆ.

ಚಿತ್ರದಲ್ಲಿ ನಿಹಾಲ್ ನಾಯಕನಾಗಿದ್ದು ಅವರಿಗೆ ಜೋಡಿಯಾಗಿ ಸಿರಿ ಪ್ರಹ್ಲಾದ್ ನಟಿಸುತ್ತಿದ್ದಾರೆ. ವಿನಯಾ ಪ್ರಸಾದ್ ಅವರು ವಿಜಯ ಸಂಕೇಶ್ವರ ಅವರ ತಾಯಿಯ ಪಾತ್ರವನ್ನು ಮಾಡಿದ್ದಾರೆ. ತಂದೆಯಾಗಿ ಅನಂತನಾಗ್ ನಟಿಸಿರುವ ಕಾರಣ ಒಂದಷ್ಟು ಸಮಯದ ಬಳಿಕ ಹಿಟ್ ಜೋಡಿ ಈ ಮೂಲಕ ಮತ್ತೆ ಒಂದಾಗಿದೆ ಎನ್ನಬಹುದು. ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿಯವರು ವಿಜಯಾನಂದ ಚಿತ್ರದಲ್ಲಿ ಪ್ರಮುಖ ಖಳನಾಗಿ ಕಾಣಿಸಿಕೊಳ್ಳಲಿರುವುದು ಮತ್ತೊಂದು ವಿಶೇಷ. ‘ತನ್ನ ವ್ಯಕ್ತಿತ್ವವನ್ನು
ಉಳಿಸಿಕೊಳ್ಳಲು ಇನ್ನೊಬ್ಬರ ವ್ಯಕ್ತಿತ್ವ ಹಾಳು ಮಾಡುವ ವ್ಯಕ್ತಿಯ ಪಾತ್ರ ನನ್ನದು’ ಎಂದು ಶೈನ್ ಹೇಳಿದ್ದಾರೆ.

ನಿರ್ದೇಶಕಿ ರಿಷಿಕಾ ಚಿತ್ರದ ಮೂಲಕ ಹೊಸ ಕಲಾವಿದರಿಗೆ ಕೂಡ ಅವಕಾಶ ನೀಡಿದ್ದು, ಅವರಿಗೆ ಈಗಾಗಲೇ ತರಬೇತಿ ನೀಡಿ ಸಿದ್ಧಪಡಿಸಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ‘ಬ್ರಹ್ಮಗಂಟು’ ಧಾರಾವಾಹಿ ಮೂಲಕ ಗುರುತಿಸಿಕೊಂಡಿರುವ ನಟ ಭರತ್ ಬೋಪಣ್ಣ ಕೂಡ ಒಂದು ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಯುವನಟಿ ಅರ್ಚನಾ ಕೊಟ್ಟಿಗೆಯವರು ವಿಜಯಸಂಕೇಶ್ವರ ಅವರ ಪುತ್ರ ಆನಂದ್ ಸಂಕೇಶ್ವರ್ ಅವರ ಪತ್ನಿಯಾಗಿ ಕಾಣಿಸಲಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ಮಲಯಾಳಂನ‌ ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ನೀಡುತ್ತಿದ್ದಾರೆ.

ಮುಹೂರ್ತದ ದಿನ ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಕ್ಲ್ಯಾಪ್ ಮಾಡಿದ್ದು ವಿಜಯ ಸಂಕೇಶ್ವರ ಅವರು ಕ್ಯಾಮೆರಾ ಚಾಲನೆ ಮಾಡಿದ್ದರು. ವಿಜಯ ಸಂಕೇಶ್ವರ ಅವರ ಬದುಕಲ್ಲಿ ಪ್ರಧಾನ ತಿರುವಿಗೆ ಕಾರಣರಾದ ಗಣೇಶ್ ಶಾ ಎನ್ನುವ ವ್ಯಕ್ತಿಯಾಗಿ ನಟಿಸಲಿರುವ ರವಿಚಂದ್ರನ್ ಕೂಡ ಸಮಾರಂಭದಲ್ಲಿ ಪಾಲ್ಗೊಂಡು‌ ವಿ ಆರ್ ಎಲ್ ಸಂಸ್ಥೆ ಮತ್ತು ಚಿತ್ರತಂಡದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

Related News

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023
ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​
ಪ್ರಮುಖ ಸುದ್ದಿ

ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​

May 26, 2023
ತೆಲುಗು ಖ್ಯಾತ ನಟ ಪ್ರತಿದಿನ ರಾತ್ರಿ ಡೇಟಿಂಗ್​ಗೆ ಬರುವಂತೆ ಹಿಂಸೆ ಕೊಟ್ಟಿದ್ದರು : ಹನ್ಸಿಕಾ ಮೋಟ್ವಾನಿ
ಪ್ರಮುಖ ಸುದ್ದಿ

ತೆಲುಗು ಖ್ಯಾತ ನಟ ಪ್ರತಿದಿನ ರಾತ್ರಿ ಡೇಟಿಂಗ್​ಗೆ ಬರುವಂತೆ ಹಿಂಸೆ ಕೊಟ್ಟಿದ್ದರು : ಹನ್ಸಿಕಾ ಮೋಟ್ವಾನಿ

May 24, 2023
‘RRR’ ಚಿತ್ರದ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ರೇ ಸ್ಟೀವನ್ಸನ್ ನಿಧನ : ಎಸ್ಎಸ್ ರಾಜಮೌಳಿ ಸಂತಾಪ
ಪ್ರಮುಖ ಸುದ್ದಿ

‘RRR’ ಚಿತ್ರದ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ರೇ ಸ್ಟೀವನ್ಸನ್ ನಿಧನ : ಎಸ್ಎಸ್ ರಾಜಮೌಳಿ ಸಂತಾಪ

May 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.