ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ

ಧಾರವಾಡ, ಡಿ. 28: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಂಗ ಬಂಧನದಲ್ಲಿರುವಂತಹ ಮಾಜಿ ಸಚಿವ ವಿನಯ್ ಕುಲಕರ್ಣಿಗೆ, ಸದ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ ಎನ್ನುವಂತಾಗಿದೆ. ಇಂದು ಮತ್ತೆ ಜನವರಿ 8, 2021ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ, ಧಾರವಾಡದ ವಿಶೇಷ ಸಿಬಿಐ ಕೋರ್ಟ್ ಆದೇಶಿಸಿದೆ. ಈ ಮೂಲಕ ವಿನಯ್ ಕುಲಕರ್ಣಿಗೆ ಜೈಲೇ ಗತಿ ಎಂಬಂತಾಗಿದೆ.

ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿ, ನ್ಯಾಯಂಗ ಬಂಧನದಲ್ಲಿರುವಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ, ನ್ಯಾಯಾಂಗ ಬಂಧನದ ಅವಧಿ, ಇಂದು ಮುಕ್ತಾಯಗೊಂಡಿತ್ತು. ಹೀಗಾಗಿ ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಧಾರವಾಡ ವಿಶೇಷ ಸಿಬಿಐ ನ್ಯಾಯಾಲಯ, ಜನವರಿ 8, 2021ರವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ. ಹೀಗಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೊಸ ವರ್ಷಕ್ಕೂ ಬಿಡುಗಡೆ ಭಾಗ್ಯ ಇಲ್ಲದಂತಾಗಿದೆ.

Exit mobile version