Bengaluru: ಲೋಕಸಭೆ ಚುನಾವಣೆ 2024ರ ಎರಡನೇ ಹಂತದಲ್ಲಿ ಇಂದು (Voted Against Hate-Prakash Raj)ಆರಂಭವಾಗಿದೆ. 13 ರಾಜ್ಯಗಳ 88 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು,
ಕರ್ನಾಟಕದಲ್ಲೂ ಇದರ ಬಿಸಿ ಏರುತ್ತಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಬೆಂಗಳೂರಿನ ಮತಗಟ್ಟೆಯೊಂದರಲ್ಲಿ
ತಮ್ಮ ಮತ ಹಕ್ಕು ಚಲಾಯಿಸಿರುವ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ (Voted Against Hate-Prakash Raj) ವಿಡಿಯೋ ಸಂದೇಶ ಪೋಸ್ಟ್ ಮಾಡಿದ್ದು.
ತಮ್ಮ ಅಬಿಮಾನಿಗಳು ಮತ್ತು ಫಾಲೋವರ್ಸ್ಗೆ (Followers) ತಪ್ಪದೇ ಮತದಾನ ಮಾಡುವಂತೆ ಕರೆ ನೀಡಿದ್ದಾರೆ.ನಾನು ಇಂದು ಬದಲಾವಣೆಗೆ ಮತ ನೀಡಿದ್ದೇನೆ. ನಾನು ದ್ವೇಷದ ವಿರುದ್ಧ ಮತ ನೀಡಿದ್ದೇನೆ.
ಸಂಸತ್ತಿನಲ್ಲಿ ನನ್ನ ದನಿಯಾಗಬಲ್ಲರೆಂದು ನಾನು ನಂಬುವ ಪ್ರತಿನಿಧಿಗೆ ನಾನು ಮತ ಹಾಕಿದ್ದೇನೆ. ದಯವಿಟ್ಟು ಹೋಗಿ ಮತದಾನ ಮಾಡಿ ಮತ್ತು ಬದಲಾವಣೆ ತನ್ನಿ. ಎಲ್ಲರನ್ನೂ ಪ್ರೀತಿಸುತ್ತೇನೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ (Social Media) ಪೊಸ್ಟ್ ಮಾಡಿರುವ ವೀಡಿಯೋಗೆ ನೀಡಿದ ಶೀರ್ಷಿಕೆಯಲ್ಲಿ ನಾನು ಮತದಾನ ಮಾಡಿದ್ದೇನೆ. ದಯವಿಟ್ಟು ನೀವು ಕೂಡಾ ಹತ್ತಿರದ ಮತಗಟ್ಟೆಗೆ ಹೋಗಿ ಮತದಾನ
ಮಾಡಿ # ಜಸ್ಟ್ ಆಸ್ಕಿಂಗ್ # ಸೇವ್ ಡೆಮಾಕ್ರೆಸಿ ಸೇವ್ ಇಂಡಿಯಾ (Save Democracy Save India) ಎಂದು ಬರೆದುಕೊಂಡಿದ್ದಾರೆ.
ಮತ ಚಲಾಯಿಸಿದ ನಂತರ ಮಾಧ್ಯಮವೊಂದರ ಜೊತೆ ಮಾತನಾಡಿದ್ದ ಪ್ರಕಾಶ್ ರಾಜ್ ಅವರು, ನನ್ನ ಮತ ನನ್ನ ಹಕ್ಕಿಗೆ ಸಂಬಂಧಿಸಿದೆ, ಯಾರು ನನ್ನನ್ನು ಪ್ರತಿನಿಧಿಸಬೇಕೆಂದು, ಯಾರು ಸಂಸತ್ತಿನಲ್ಲಿ ನನ್ನ
ದನಿಯಾಗಬೇಕೆಂದು ಆರಿಸುವ ನನ್ನ ಅಧಿಕಾರವಿದು.
ಕಳೆದೊಂದು ದಶಕದಲ್ಲಿ ನಾವು ನೋಡಿರುವ ದ್ವೇಷ ಮತ್ತು ವಿಭಜನಾತ್ಮಕ ರಾಜಕಾರಣದಿಂದಾಗಿ ನೀವು ನಂಬಿಕೆಯಿರಿಸಿರುವ ಅಭ್ಯರ್ಥಿಗೆ ಮತ ನೀಡುವುದು ಅಗತ್ಯ. ನಾನು ನಂಬಿಕೆ ಇರಿಸಿದ ಅಭ್ಯರ್ಥಿಗೆ ಹಾಗು
ಅವರು ತಂದ ಪ್ರಣಾಳಿಕೆಗೆ ಮತ್ತು ಬದಲಾವಣೆಗೆ ಮತ ನೀಡಿದ್ದೇನೆ ಎಂದು ಹೇಳಿದ್ದಾರೆ. ಬಿಜೆಪಿ (BJP) ಸರ್ಕಾರವನ್ನು ಟೀಕಿಸುವ ಕೆಲಸದಲ್ಲಿರುವ ಬಹುಭಾಷಾ ನಟ ಪ್ರಕಾಶ್ ರಾಜ್, ಚುನಾವಣೆ ಹತ್ತಿರ
ಬರುತ್ತಿದ್ದಂತೆ ಮತ್ತಷ್ಟು ಬಿರುಸಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕೊಂಚ ಖಾರವಾಗಿಯೇ ಪ್ರಧಾನಿ ಮೋದಿ (Modi) ಮತ್ತು ಕೇಂದ್ರ ಬಿಜೆಪಿ ಸರ್ಕಾರವನ್ನೇ ಗುರಿಯನ್ನಾಗಿಸಿಕೊಂಡು ಟೀಕಾಸ್ತ್ರ
ಪ್ರಯೋಗ ಮಾಡುತ್ತಿದ್ದಾರೆ.
ಇದನ್ನು ಓದಿ: ಆಸ್ಪತ್ರೆಗೆ ದಾಖಲಾದ ಕರ್ನಾಟಕದ ಮಾಜಿ ಸಿಎಂ ಎಸ್ಎಂ ಕೃಷ್ಣ!