ಬೆಂಗಳೂರು ಮತದಾರರಿಗೆ ಮಹತ್ವದ (voters names deleted in bengaluru) ಎಚ್ಚರಿಕೆ: ಹೆಸರು ಉಳಿಸಿಕೊಳ್ಳಲು ಈ ಕೆಲಸ ಕಡ್ಡಾಯ
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿಶೇಷ ಪರಿಷ್ಕರಣೆ :ಅರ್ಜಿ ಸಲ್ಲಿಸಲು ಕೊನೆಯ ಅವಕಾಶ
ಗಣತಿ ನಮೂನೆ ಸಲ್ಲಿಸಿದವರು ತಕ್ಷಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಅಧಿಕಾರಿಗಳಿಗೆ ಮನವಿ
ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ (voters names deleted in bengaluru) ಸಮಗ್ರ ಪರಿಷ್ಕರಣೆ (SIR-2026) ಪ್ರಕ್ರಿಯೆ ಇದೀಗ ನಿರ್ಣಾಯಕ ಹಂತ ತಲುಪಿದೆ.
ರಾಜ್ಯದಾದ್ಯಂತ ಮತದಾರರ ವಿವರಗಳನ್ನು ಮರುಪರಿಶೀಲಿಸುವ ಕಾರ್ಯ ಭರದಿಂದ ಸಾಗುತ್ತಿದ್ದು, ಹಲವು ಮತದಾರರ ಹೆಸರುಗಳು ತಾತ್ಕಾಲಿಕವಾಗಿ ಗೈರು, ಸ್ಥಳಾಂತರ, ಮರಣ, ನಕಲು ಹಾಗೂ ಇತರೆ ಕಾರಣಗಳಿಂದ ಪರಿಶೀಲನೆ ಪಟ್ಟಿಗೆ ಸೇರಿವೆ.
ವಿಶೇಷವಾಗಿ ಬೆಂಗಳೂರಿನಲ್ಲಿ ಮಾತ್ರವೇ ಸುಮಾರು 49.53 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ
ಪ್ರತಿಯೊಬ್ಬ ಮತದಾರರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿದೆಯೇ ಎಂಬುದನ್ನು ಪರಿಶೀಲಿಸುವುದು ಅತ್ಯಂತ ಅಗತ್ಯವಾಗಿದೆ.

ಚುನಾವಣಾ ಆಯೋಗದ ನಿರ್ದೇಶನದಂತೆ, ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಕೈಗೊಂಡಿದ್ದಾರೆ.
ಈ ಪ್ರಕ್ರಿಯೆಯಲ್ಲಿ ಹಲವು ಮತದಾರರು ಮನೆಯಲ್ಲಿರದಿರುವುದು, ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೋಂದಾಯಿಸಿರುವುದು ಪತ್ತೆಯಾಗಿದೆ.
ಲಭ್ಯ ಮಾಹಿತಿಯ ಪ್ರಕಾರ, ಸುಮಾರು 7.98 ಲಕ್ಷ ಮತದಾರರು ಗೈರು, 33.84 ಲಕ್ಷ ಮಂದಿ ಶಾಶ್ವತವಾಗಿ (voters names deleted in bengaluru) ಸ್ಥಳಾಂತರಗೊಂಡವರು,
3.15 ಲಕ್ಷ ಮಂದಿ ಮೃತರು, 60 ಸಾವಿರಕ್ಕೂ ಹೆಚ್ಚು ನಕಲು ದಾಖಲೆಗಳು ಹಾಗೂ ಉಳಿದವರು ಇತರೆ ಕಾರಣಗಳ ಅಡಿಯಲ್ಲಿ ವರ್ಗೀಕರಿಸಲಾಗಿದೆ.
ಆದರೆ ಈ ಪಟ್ಟಿ ಅಂತಿಮವಲ್ಲ. ಸಂಬಂಧಿಸಿದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಮಾಹಿತಿಯನ್ನು ತಿದ್ದುಪಡಿ ಮಾಡಿಸಿಕೊಳ್ಳುವ ಅವಕಾಶವನ್ನು ಇನ್ನೂ ಹೊಂದಿದ್ದಾರೆ.
ಮತದಾರರ ಅನುಕೂಲಕ್ಕಾಗಿ ಗುರುತಿಸಲಾದ ವಿವರಗಳನ್ನು ಸಂಬಂಧಿತ ಅಧಿಕಾರಿಗಳು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.
ಯಾವುದೇ ತಪ್ಪು ಮಾಹಿತಿ ಕಂಡುಬಂದರೆ ಅಥವಾ ಹೆಸರು ಅನಾವಶ್ಯಕವಾಗಿ ಪಟ್ಟಿಗೆ ಸೇರಿದ್ದರೆ, ಮತದಾರರು ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿ (BLO) ಅಥವಾ ಮತದಾರರ ನೋಂದಣಾಧಿಕಾರಿಯನ್ನು ಸಂಪರ್ಕಿಸಿ ಆಕ್ಷೇಪಣೆ ಸಲ್ಲಿಸಬಹುದು.
ಅಗತ್ಯ ದಾಖಲೆಗಳನ್ನು ನೀಡಿ ತಮ್ಮ ಹೆಸರು ಹಾಗೂ ವಿವರಗಳನ್ನು ದೃಢೀಕರಿಸುವ ಮೂಲಕ ಮುಂದಿನ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯುವಂತೆ ನೋಡಿಕೊಳ್ಳಬಹುದು. ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಸಹಕಾರವನ್ನು ಕೋರಿದ್ದಾರೆ.
ಇದರ ಜೊತೆಗೆ, ಇನ್ನೂ ಗಣತಿ ನಮೂನೆಯನ್ನು (Enumeration Form) ಭರ್ತಿ ಮಾಡಿ ಸಲ್ಲಿಸದ ಮತದಾರರಿಗೆ ಮಹತ್ವದ ಸೂಚನೆ ನೀಡಲಾಗಿದೆ.
ಆಗಸ್ಟ್ 7ರೊಳಗೆ ಸಂಬಂಧಪಟ್ಟ ಬಿಎಲ್ಒ ಅವರಿಗೆ ಭರ್ತಿ ಮಾಡಿದ ನಮೂನೆಯನ್ನು ಸಲ್ಲಿಸುವಂತೆ ಮನವಿ ಮಾಡಲಾಗಿದೆ. ನಂತರ ಈ ಎಲ್ಲಾ ಮಾಹಿತಿಯನ್ನು ಡಿಜಿಟಲೀಕರಣಗೊಳಿಸಿ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
ಕೊನೆಯ ಕ್ಷಣದವರೆಗೆ ಕಾಯದೆ ಸಾಧ್ಯವಾದಷ್ಟು ಬೇಗ ದಾಖಲೆಗಳನ್ನು ಸಲ್ಲಿಸುವುದು ಒಳಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಂಡರೆ ಮಾತ್ರ ಮುಂದಿನ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಿರುತ್ತದೆ.
ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಪ್ರಭುತ್ವದ ಹಕ್ಕಾಗಿದೆ. ಆದ್ದರಿಂದ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ, ವಿವರಗಳು ಸರಿಯಾಗಿವೆಯೇ ಎಂಬುದನ್ನು ಪ್ರತಿಯೊಬ್ಬರೂ ಪರಿಶೀಲಿಸಿಕೊಳ್ಳಬೇಕು.
ಯಾವುದೇ ಗೊಂದಲ ಕಂಡುಬಂದರೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವುದು ಉತ್ತಮ. ನಿಗದಿತ ಅವಧಿಯೊಳಗೆ
ಅಗತ್ಯ ಕ್ರಮ ಕೈಗೊಳ್ಳುವುದರಿಂದ ಭವಿಷ್ಯದ ಚುನಾವಣೆಯಲ್ಲಿ ಯಾವುದೇ ತೊಂದರೆ ಇಲ್ಲದೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಸಾಧ್ಯವಾಗುತ್ತದೆ.
ಇದನ್ನು ಓದಿ : https://vijayatimes.com/kejriwal-lashes-out-at-meta/