• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವಯನಾಡ್: 18 ವರ್ಷ ಮೇಲ್ಪಟ್ಟ ಎಲ್ಲಾ ಅರ್ಹ ವಯಸ್ಕರಿಗೂ ಕೋವಿಡ್‌ ಲಸಿಕೆ ವಿತರಣೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ವಯನಾಡ್:  18 ವರ್ಷ ಮೇಲ್ಪಟ್ಟ ಎಲ್ಲಾ ಅರ್ಹ ವಯಸ್ಕರಿಗೂ ಕೋವಿಡ್‌ ಲಸಿಕೆ ವಿತರಣೆ
0
SHARES
0
VIEWS
Share on FacebookShare on Twitter

ಕೇರಳ, ಆ. 16: ಕೇರಳದ ವಯನಾಡ್ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ಅರ್ಹ ವಯಸ್ಕರಿಗೂ ಕೋವಿಡ್‌ ಲಸಿಕೆಯ ಮೊದಲ ಡೋಸ್ ವಿತರಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತಿಳಿಸಿದ್ದಾರೆ. ಇದೇ ವೇಳೆ ಲಸಿಕೆ ವಿತರಣೆ ಪ್ರಕ್ರಿಯೆಲ್ಲಿ ತೊಡಗಿರುವ ಆರೋಗ್ಯ ಕಾರ್ಯಕರ್ತರ ಪರಿಶ್ರಮ, ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

ವಯನಾಡಿನಲ್ಲಿ ವಿಶೇಷವಾಗಿ ಬುಡಕಟ್ಟು ಜನಸಂಖ್ಯೆ ಹೆಚ್ಚು. ಹಾಗಾಗಿ ಬುಡಕಟ್ಟು ಜನರು ಹೆಚ್ಚಿರುವ ಕುಗ್ರಾಮಗಳಲ್ಲಿ ಲಸಿಕೆ ವಿತರಿಸಲು 28 ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಹಾಸಿಗೆ ಹಿಡಿದ 636 ರೋಗಿಗಳ ಮನೆಗಳಿಗೆ ತೆರಳಿ, ಲಸಿಕೆಯನ್ನು ನೀಡಿವೆ ಎಂದು ಅವರು ಮಾಹಿತಿ ನೀಡಿದರು.

ಈಗಾಗಲೇ ಈ ಜಿಲ್ಲೆಯಲ್ಲಿ 2,13,311 ಮಂದಿಗೆ (ಶೇಕಡ 31.67) ಲಸಿಕೆಯ ಎರಡನೇ ಡೋಸ್‌ ನೀಡಲಾಗಿದೆ. ಭಾನುವಾರದ ವೇಳೆಗೆ 45 ಮೇಲ್ಪಟ್ಟ ಎಲ್ಲರಿಗೂ ಲಸಿಕೆಯ ಮೊದಲ ಡೋಸ್‌ ಅನ್ನು ನೀಡಲಾಗಿತ್ತು. ಈ ಮೈಲಿಗಲ್ಲು ಸಾಧಿಸುವಲ್ಲಿ ನಾಗರಿಕ ಸಂಸ್ಥೆಗಳು, ಬುಡಕಟ್ಟು ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕಾರ್ಮಿಕ ಇಲಾಖೆ, ಕುಟುಂಬಶ್ರೀ ಮಿಷನ್‌ನ ಸದಸ್ಯರುಗಳು ಮತ್ತು ಆಶಾ ಕಾರ್ಯಕರ್ತರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅವರು ಹೇಳಿದರು.

ವಯನಾಡ್ ಜಿಲ್ಲೆಯಲ್ಲಿ 6,16,112 ಮಂದಿಗೆ ಮೊದಲ ಡೋಸ್‌ ನೀಡಲಾಗಿದೆ. ಆದರೆ ಕೋವಿಡ್‌ ಸೋಂಕು ದೃಢಪಟ್ಟ ವ್ಯಕ್ತಿಗಳು, ಪ್ರತ್ಯೇಕ ವಾಸದಲ್ಲಿರುವವರು ಮತ್ತು ಲಸಿಕೆ ಪಡೆಯಲು ಬಯಸದವರಿಗೆ ‌ಲಸಿಕಾ ಅಭಿಯಾನದಿಂದ ವಿನಾಯತಿ ನೀಡಲಾಗಿದೆ ಎಂದು ಅವರು ತಿಳಿಸಿದರು.

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.