ಕಲ್ಕತ್ತಾ ಸೆ 1 : ದೇಶದಲ್ಲಿ ಕಳೆದ ವಾರದಿಂದ ಕೊರೊನಾ ಲಸಿಕೆಯ ನೀಡಿಕೆಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಕೂಡ ಕೆಲವೆಡೆ ಕೊರೊನಾ ಲಸಿಕೆಗೆ ನೂಕು ನುಗ್ಗಲು ಉಂಟಾಗುತ್ತಿದೆ. ಕೊರೊನಾ ಲಸಿಕೆಗೆ ನೂಕನುಗ್ಗಲು ಉಂಟಾಗಿ ಸುಮಾರು 30 ಜನರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳ ಪೈಗುರಿ ಜಿಲ್ಲೆಯ ಕೋವಿಡ್-19 ಲಸಿಕಾ ಕೇಂದ್ರವೊಂದರ ಬಳಿ ನಡೆದಿದೆ. ಕಾಲ್ತುಳಿತದಿಂದಾಗಿ ಸುಮಾರು 30 ಜನರು ಗಾಯಗೊಂಡಿದ್ದು ಇವರಲ್ಲಿ ಐವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಉತ್ತರ ಬಂಗಾಳದ ಜಲಪೈ ಗುರಿಯ ದುಪ್ಗುರಿ ಬ್ಲಾಕ್ ನಲ್ಲಿ ಶಾಲೆಯೊಂದನ್ನು ಲಸಿಕಾ ಕೇಂದ್ರವಾಗಿ ಪರಿವರ್ತಿಸಲಾಗಿತ್ತು. ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಟೀ ಗಾರ್ಡನ್ ಜನರು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಿ ಪರಿಣಾಮ ನೂಕುನುಗ್ಗಲು ಉಂಟಾಯಿತು. ಜನರಿಂದ ಒಮ್ಮೆಲ್ಲೆ ನೂಕು ನೂಗಲು ಉಂಟಾದ ಪರಿಣಾಮ ಈ ಘಟನೆ ಸಂಭವಿಸಿದೆ. ಲಸಿಕಾ ಕೇಂದ್ರದ ಬಳಿ ಸುಮಾರು 2 ಸಾವಿರ ಜನರು ನೆರೆದಿದ್ದರು. ಅಲ್ಲಿ ಯಾವುದೇ ಪೊಲೀಸರು ಕೂಡ ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದಾರೆ. ನಂತರ ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೆರಿಸಲಾಗಿದೆ ಎಂದು ತಿಳಿದುಬಂದಿದೆ.