Bengaluru: ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ (Guarantee) ಒಂದಾಗಿರುಗ ಅನ್ನಭಾಗ್ಯ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ಹೆಣಗಾಡುತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರಿಕ್ಕೆ ಬಂದು 100 ದಿನಗಳೇ ಕಳೆದರೂ, ರಾಜ್ಯ ಕಾಂಗ್ರೆಸ್ (Congress) ಸರ್ಕಾರಕ್ಕೆ ಅನ್ನಭಾಗ್ಯ ಯೋಜನೆಯಡಿ ಘೋಷಣೆ ಮಾಡಿದಂತೆ 5 ಕೆಜಿ ಅಕ್ಕಿ ನೀಡಲು ಸಾಧ್ಯವಿಲ್ಲ, ಅದರ ಬದಲಿಗೆ ಹಣ ಪಾವತಿಸುವ ವ್ಯವಸ್ಥೆಯನ್ನೇ ಮುಂದುವರೆಸುತ್ತೇವೆ ಎಂದು ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರಸ್ತುತ ಕೇಂದ್ರ ಬಿಜೆಪಿ (BJP) ಸರ್ಕಾರ 5 ಕೆಜಿ ಅಕ್ಕಿಯನ್ನು ನೀಡುತ್ತಿದೆ. ಅದರೊಂದಿಗೆ ಇನ್ನೂ 5 ಕೆಜಿ ಅಕ್ಕಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನೀಡಬೇಕಿತ್ತು. ಆದರೆ ಅಕ್ಕಿ ಖರೀದಿಸಲು ಸಾಧ್ಯವಾಗದೇ, ಅಕ್ಕಿ ನೀಡಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ನೇರ ನಗದು ಪಾವತಿ ವ್ಯವಸ್ಥೆಯ ಮೂಲಕ ಪಡಿತರ ಕಾರ್ಡ್ ಹೊಂದಿರುವವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ವ್ಯವಸ್ಥೆಯನ್ನು ರೂಪಿಸಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಪ್ರಮುಖ ನಿರ್ಣಯಗಳು :
• ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹ ಲಕ್ಷ್ಮಿ ಸೌಲಭ್ಯ ನೀಡುವ ತೀರ್ಮಾನಕ್ಕೆ ಅನುಮೋದನೆ
• ವೈದ್ಯರಿಗೆ ಗ್ರಾಮೀಣ ಭಾಗದಲ್ಲಿ ಕಡ್ಡಾಯ ಸೇವೆಗೆ ವಿನಾಯಿತಿ ನೀಡಲಾಗಿದೆ.
• ನಗರ ಸ್ಥಳೀಯ ಸಂಸ್ಥೆಗಳಲ್ಲಿ 400.24 ಕೋಟಿ ರೂಪಾಯಿ ವೆಚ್ಚದಲ್ಲಿ ಮಲತ್ಯಾಜ್ಯ ಸಂಸ್ಕರಣಾ ಸ್ಥಾವರ ಸ್ಥಾಪನೆಗೆ ಒಪ್ಪಿಗೆ ನೀಡಿದೆ.
• ಮಲತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ತ್ಯಾಜ್ಯವನ್ನು ಸಾಗಿಸಲು 161 ಸೆಸ್ಪೂಲ್ ವಾಹನಗಳ ಖರೀದಿ.
• ನಗರ ಅನಿಲ ವಿತರಣಾ ಜಾಲದ ಅಭಿವೃದ್ಧಿ ರಾಜ್ಯ ನೀತಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿತು.
• ಹುಬ್ಬಳ್ಳಿ (Hubballi) ಗೋಕುಲ ರಸ್ತೆಯಲ್ಲಿರುವ ಕೇಂದ್ರ ಬಸ್ ನಿಲ್ದಾಣ ಮೇಲ್ದರ್ಜೆಗೆ.
• ಬೆಳಗಾವಿಯ (Belgaum) ಸುವರ್ಣಸೌಧದಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆ ನಿರ್ಧರಿಸಿತು. ಡಿಸೆಂಬರ್ (December) 4 ರಿಂದ 15 ರವರೆಗೆ ಅಧಿವೇಶನ ನಡೆಯುವ ಸಾಧ್ಯತೆ.
• ಧಾರವಾಡದಲ್ಲಿ (Dharwad) ನೂತನ ಬಸ್ ನಿಲ್ದಾಣ ನಿರ್ಮಿಸುವ ಕಾಮಗಾರಿಗೆ ಆಡಳಿತಾತ್ಮಕ ಒಪ್ಪಿಗೆ
• ಕರ್ನಾಟಕ (Karnataka) ಸಚಿವರ ವೇತನ ಮತ್ತು ಭತ್ಯೆಗಳ (ತಿದ್ದುಪಡಿ) ಅಧಿನಿಯಮ –2022ಕ್ಕೆ ಅನುಮೋದನೆ
• ರಾಜ್ಯದ 11 ಪೊಲೀಸ್ ತರಬೇತಿ ಶಾಲೆಗಳ ಬಲವರ್ಧನೆ 20 ಕೋಟಿ ನೆರವು.
• ಕೊಪ್ಪಳ (Koppala) ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ 450 ಹಾಸಿಗೆಗಳ ಬೋಧನಾ ಆಸ್ಪತ್ರೆ ನಿರ್ಮಾಣ