ಬೆಂಗಳೂರು, ಜು. 31: ಮೇಕೆದಾಟು ಯೋಜನೆ ನಮ್ಮ ಹಕ್ಕು, ಅಣೆಕಟ್ಟು ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯೋಜನೆಗೆ ಸಂಬಂಧಿಸಿದಂತೆ ಡಿಪಿಆರ್ ಅಪ್ರೂವಲ್ ಪಡೀತೀವಿ ಎಂದಿದ್ದಾರೆ.
ಈ ಸಂಬಂಧ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ನಮ್ಮ ಹಕ್ಕಾಗಿದ್ದು, ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಏನೂದ್ರೂ ಮಾಡಿಕೊಳ್ಳಲಿ. ಅವರಿಗೂ ನಮಗೂ ಸಂಬಂಧ ಇಲ್ಲ. ಈಗಾಗಲೇ ಯೋಜನೆಗೆ ಡಿಪಿಆರ್ ಮಾಡಿದ್ದೇವೆ ಎಂದರು.
ಡಿಪಿಆರ್ ಅನುಮತಿ ಪಡೆದು ಯೋಜನೆ ಮಾಡಿಯೇ ತೀರುತ್ತೇವೆ. ಯಾರಾದ್ರೂ ಉಪವಾಸ ಕೂರಲಿ. ಯಾರಾದ್ರೂ ಊಟ ಮಾಡಿಕೊಳ್ಳಲಿ ಎಂದು ಅಣ್ಣಾಮಲೈ ವಿರುದ್ಧ ಕಿಡಿಕಾರಿದ್ದಾರೆ.