ನೈಜ ಮುಖಂಡರ ಅಂತ್ಯದ ಹಿಂದೆ ಯಾರ ಕೈವಾಡವಿದೆ, ಆತ್ಮವಂಚನೆಯ ಪಾದಯಾತ್ರೆ ಯಾಕೆ? : ನಳಿನ್‌ ಕುಮಾರ್‌ ಕಟೀಲ್

Bengaluru : ಅನೇಕ ನೈಜ ಮುಖಂಡರ ಅಂತ್ಯದ ಹಿಂದೆ ಯಾರ ಕೈವಾಡ ಇದೆ ಎಂದು ರಾಹುಲ್ ಗಾಂಧಿ(Rahul Gandhi) ಅವರಿಗೆ ಪ್ರಶ್ನಿಸಿ ಸಮರ್ಪಕ ಉತ್ತರ ಸಿಕ್ಕಿದರೆ ಮಾತ್ರ ಹೆಜ್ಜೆ ಹಾಕಿ.

ಆತ್ಮವಂಚನೆಯ ಪಾದಯಾತ್ರೆ ಯಾಕೆ? ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್‌(Tweet) ಮಾಡಿರುವ ಅವರು, ನಕಲಿ ಗಾಂಧಿ ಕುಟುಂಬಕ್ಕೆ ಅಧಿಕಾರ ನೀಡಲು ಪಾದಯಾತ್ರೆ (Why the walk of self-deception) ಮಾಡುತ್ತಿರುವ ಕಾಂಗ್ರೆಸ್ (Congress) ಕಾರ್ಯಕರ್ತರು ತಮ್ಮ ಪಕ್ಷದ ಹಿರಿಯರಾದ ಮಾಧವರಾವ್ ಸಿಂಧಿಯಾ,

ರಾಜೇಶ್ ಪೈಲೆಟ್ ಸಹಿತ ಅನೇಕ ನೈಜ ಮುಖಂಡರ ಅಂತ್ಯದ ಹಿಂದೆ ಯಾರ ಕೈವಾಡ ಇದೆ (Why the walk of self-deception) ಎಂದು ರಾಹುಲ್ ಅವರಿಗೆ ಪ್ರಶ್ನಿಸಿ ಸಮರ್ಪಕ ಉತ್ತರ ಸಿಕ್ಕಿದರೆ ಮಾತ್ರ ಹೆಜ್ಜೆ ಹಾಕಿ. ಆತ್ಮವಂಚನೆಯ ಪಾದಯಾತ್ರೆ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : https://vijayatimes.com/kerala-cm-letter-to-pm/

ರಾಜಸ್ಥಾನದಲ್ಲಿ ಕಾಂಗ್ರೆಸ್ಸಿನ ಯುವನಾಯಕ ಸಚಿನ್ ಪೈಲೆಟ್ ಅವರನ್ನು ಸಿಎಂ ಮಾಡುತ್ತೇನೆ ಎಂದು ಕೊಟ್ಟ ಭರವಸೆಯನ್ನು ಯಾರದ್ದೋ ಬ್ಲ್ಯಾಕ್ ಮೇಲ್ಗೆ ಹೆದರಿ ಹಿಂದೆ ಪಡೆದುಕೊಂಡ ರಾಹುಲ್‌ ಗಾಂಧಿ ಅವರಿಗೆ ತಮ್ಮ ಪಕ್ಷದಲ್ಲಿಯೇ ಯುವಕರಿಗೆ ಸ್ಥಾನಮಾನ ಕೊಡಲು ಸಾಧ್ಯವಾಗುತ್ತಿಲ್ಲ.

https://youtu.be/B17BlX9yaF8

ಹಾಗಿರುವಾಗ ದೇಶದ ಯುವಜನಾಂಗಕ್ಕೆ ಅವರು ಏನು ಭವಿಷ್ಯ ನೀಡಬಲ್ಲರು? ಪಕ್ಷ ಕಟ್ಟಿ ಬೆಳೆಸಿದ ಹಿರಿಯರು ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ಒಬ್ಬೊಬ್ಬರಾಗಿ ರಾಜೀನಾಮೆ (Resign)

ಕೊಟ್ಟು ಹೊರಗೆ ಹೋಗುತ್ತಿರುವಾಗ ಅದನ್ನು ಸರಿ ಮಾಡುವುದು ಬಿಟ್ಟು ದೇಶಕ್ಕೆ ಭವಿಷ್ಯ ಕೊಡುತ್ತೇನೆ ಎಂದು ಪಾದಯಾತ್ರೆ ಮಾಡಿದರೆ ನೀವು ನಡೆದ ಬೀದಿಗಳ ಜನ ಕೂಡ ನಿಮ್ಮನ್ನು ನಂಬುವುದಿಲ್ಲ ಎಂದು ಕಾಂಗ್ರೆಸ್ಸಿನ ರಾಹುಲ್‌ ಗಾಂಧಿ ಅವರಿಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Exit mobile version