• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಾಂಸಹಾರಿ ಪಿಜ್ಜಾ ನೀಡಿದ ರೆಸ್ಟೋರೆಂಟ್ ನಿಂದ ೧ ಕೋ.ರೂ ಪರಿಹಾರ ಕೇಳಿ ದೂರು ದಾಖಲಿಸಿದ ಮಹಿಳೆ!

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಮಾಂಸಹಾರಿ ಪಿಜ್ಜಾ ನೀಡಿದ ರೆಸ್ಟೋರೆಂಟ್ ನಿಂದ ೧ ಕೋ.ರೂ ಪರಿಹಾರ ಕೇಳಿ ದೂರು ದಾಖಲಿಸಿದ ಮಹಿಳೆ!
0
SHARES
0
VIEWS
Share on FacebookShare on Twitter

ಘಜಿಯಾಬಾದ್, ಮಾ. 17: ತಮಗೆ ಸಸ್ಯಾಹಾರದ ಬದಲು ಮಾಂಸಾಹಾರಿ ಪಿಜ್ಜಾ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ನ್ಯಾಯಾಲಯ ಮೆಟ್ಟಿಲೇರಿದ್ದಾಳೆ. 2019ರ ಮಾರ್ಚ್​ 21ರಂದು ಉತ್ತರ ಪ್ರದೇಶದ ಘಜಿಯಾಬಾದ್​ನಲ್ಲಿ ಈ ಘಟನೆ ನಡೆದಿದ್ದು, 1 ಕೋಟಿ ರೂ. ಪರಿಹಾರ ಕೋರಿ ದೀಪಾಲಿ ಎಂಬ ಮಹಿಳೆಯು ಗ್ರಾಹಕ ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾಳೆ.

ತನ್ನ ನಿವಾಸದಲ್ಲಿ ಪಿಜ್ಜಾ ರೆಸ್ಟೋರೆಂಟ್ ನಿಂದ ಸಸ್ಯಾಹಾರಿ ಪಿಜ್ಜಾಕ್ಕಾಗಿ ಮಹಿಳೆ ಆರ್ಡರ್ ಮಾಡಿದ್ದರು. ರೆಸ್ಟೋರೆಂಟ್ ನಿಂದ ಬಂದ ಪಿಜ್ಜಾವನ್ನು ನೋಡಿದ ದೀಪಾಲಿಗೆ ಅಚ್ಚರಿ ಕಾದಿತ್ತು. ಏಕೆಂದರೆ ರೆಸ್ಟೋರೆಂಟ್​ ತಪ್ಪಾಗಿ ಮಾಂಸಾಹಾರಿ ಪಿಜ್ಜಾ ನೀಡಲಾಗಿತ್ತು. ಇದರಿಂದ ಕೋಪಗೊಂಡ ಮಹಿಳೆಯು ಗ್ರಾಹಕ ನ್ಯಾಯಾಲಯಕ್ಕೆ ಪಿಜ್ಜಾ ರೆಸ್ಟೋರೆಂಟ್ ವಿರುದ್ಧ ದೂರು ದಾಖಲಿಸಿದ್ದಾಳೆ.

“ಪಿಜ್ಜಾ ಆರ್ಡರ್ ಮಾಡಿದ್ದ ದಿನದಂದು ಹೋಳಿ ಹಬ್ಬ ಆಚರಿಸಿದ್ದೆವು. ಹೋಳಿ ಹಬ್ಬ ಆಚರಣೆ ಮಾಡಿದ ನಂತರ ನಮ್ಮ ಕುಟುಂಬದ ಸದಸ್ಯರೆಲ್ಲರಿಗೂ ತುಂಬ ಹಸಿವಾಗಿದ್ದ ಕಾರಣ ಸಸ್ಯಾಹಾರಿ ಪಿಜ್ಜಾ ಆರ್ಡರ್ ಮಾಡಿದ್ದೆ. ಪಿಜ್ಜಾ ನಿಗದಿತ ಸಮಯಕ್ಕೆ ಬಾರದೆ 30 ನಿಮಿಷ ತಡವಾಗಿ ಡೆಲಿವರಿ ಮಾಡಿದ್ದಲ್ಲದೆ, ಸಸ್ಯಾಹಾರಿಯ ಬದಲು ಮಾಂಸಾಹಾರಿ ಪಿಜ್ಜಾ ನೀಡಿದ್ದಾರೆ ಎಂದು ಸೇವಿಸಿದ ನಂತರ ತಿಳಿಯಿತು. ಅಣಬೆ ಬದಲು ಅದರಲ್ಲಿ ಮಾಂಸದ ತುಣುಕುಗಳನ್ನು ಪಿಜ್ಜಾದಲ್ಲಿ ಬಳಸಿದ್ದಾರೆ” ಎಂದು ದೀಪಾಲಿ ತಮ್ಮ ದೂರಿನಲ್ಲಿ ವಿವರಿಸಿದ್ದಾರೆ.

ತಮಗೆ ನೀಡಿರುವುದು ಮಾಂಸಾಹಾರಿ ಪಿಜ್ಜಾ ಎಂದು ತಿಳಿದ ತಕ್ಷಣ ಗ್ರಾಹಕರ ನ್ಯಾಯಾಲಯಕ್ಕೆ ‌ ಕರೆ ಮಾಡಿ ದೀಪಾಲಿ ದೂರು ನೀಡಿದ್ದರು. ನಂತರ ಪಿಜ್ಜಾ ರೆಸ್ಟೋರೆಂಟ್​ನ ಆಫೀಸರ್ ದೀಪಾಲಿಗೆ ಕರೆ ಮಾಡಿ, ತಮ್ಮ ಔಟ್‌ಲೆಟ್‌ನಿಂದ ಕುಟುಂಬದ ಸದಸ್ಯರೆಲ್ಲರಿಗೂ ಉಚಿತವಾಗಿ ಪಿಜ್ಜಾ ನೀಡುವುದಾಗಿ ಹೇಳಿದರು. ಆದರೆ ದೀಪಾಲಿಯು ಇದು ಸಾಧಾರಣ ಪ್ರಕರಣವಲ್ಲ. ಇದರಿಂದ ನನ್ನ ಧಾರ್ಮಿಕ ಭಾವನೆ ಹಾಗೂ ಸಂಪ್ರದಾಯಕ್ಕೆ ಧಕ್ಕೆಯಾಗಿದೆ. ಇದರಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದು, ಸಾಮಾನ್ಯ ಸ್ಥಿತಿಗೆ ಮರಳಿ ಬರಲು ಹಣ ವ್ಯಯಿಸಬೇಕಾಗುತ್ತದೆ ಎಂದು ದೂರಿನಲ್ಲಿ ದೀಪಾಲಿ ವಿವರಿಸಿದ್ದಾರೆ.

ಪ್ರಕರಣವನ್ನು ಕೈಗೆತ್ತಿಕೊಂಡಿರುವ ದೆಹಲಿ ಜಿಲ್ಲಾ ಗ್ರಾಹಕ ನ್ಯಾಯಾಲಯವು, ಮಹಿಳೆಯ ದೂರಿನ ಅರ್ಜಿಗೆ ಉತ್ತರಿಸುವಂತೆ ಪಿಜ್ಜಾ ರೆಸ್ಟೊರೆಂಟ್ಗೆ ಆದೇಶಿಸಿದ್ದು, ಮಾರ್ಚ್ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ.

Related News

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.