‘ಕಡಲಮುತ್ತು’ ಚಿತ್ರದ ಪೂಜೆ

ದೇವರಾಜ್ ಕುಮಾರ ಫಿಲಂಸ್ ಲಾಂಛನದಲ್ಲಿ ಕಡಲಮುತ್ತು ಎಂಬ ಚಿತ್ರ ಅಕ್ಟೋಬರ್ ನಲ್ಲಿ ಆರಂಭವಾಗಲಿದೆ.

ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ನೂತನ ಚಿತ್ರದ ನಿರ್ದೇಶನ ಹಾಗೂ ನಾಯಕನ ಜವಾಬ್ದಾರಿಯನ್ನು ದೇವರಾಜ್ ಕುಮಾರ್ ಮಾಡಲಿದ್ದಾರೆ ಈ ಹಿಂದೆ ದೇವರಾಜ ಕುಮಾರ್ ಅವರು ಡೇಂಜರ್ ಜೋನ್ ಮತ್ತು ನಿಶಬ್ದ 2 ಹಾಗೂ ಅನುಷ್ಕಾ ನಿರ್ದೇಶನ ಮಾಡಿದ್ದು ಹಾಗೂ ಇತ್ತೀಚೆಗೆ ತಾಜ್ ಮಹಲ್ -2 ನಿರ್ದೇಶನದೊಂದಿಗೆ, ನಾಯಕನಟನಾಗೂ ಅಭಿನಯಿಸಿದ್ದಾರೆ. ಕಡಲಮುತ್ತು ಚಿತ್ರದಲ್ಲೂ ನಾಯಕನಾಗಿ ಅಭಿನಯಿಸುತ್ತಿರುವ ದೇವರಾಜ್ ಕುಮಾರ್ ಅವರು‌ ನಿರ್ದೇಶನವನ್ನು ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನೂ ದೇವರಾಜ್ ಕುಮಾರ್ ಅವರೇ ಬರೆದಿದ್ದಾರೆ.

ದೇವರಾಜ್ ಕುಮಾರ್ ಅವರಿಗೆ ಹೊಸ ನಾಯಕಿಯಾಗಿ ನಟಿಸಲು‌ ನೂತನ ಪ್ರತಿಭೆ ಅನ್ವೇಷಣೆ ನಡೆಸಲಾಗುತ್ತಿದೆ. ಈ ಚಿತ್ರದ ಕಥಾವಸ್ತು ವಿಶೇಷವಾಗಿದ್ದು ಸಂಪೂರ್ಣ ಚಿತ್ರೀಕರಣ ಸಮುದ್ರ ದಂಡೆಯಲ್ಲಿ ನಡೆಯಲಿದೆ. ವೀನಸ್ ಮೂರ್ತಿ ಛಾಯಾಗ್ರಹಣ, ವಿಕ್ರಂ ಸೆಲ್ವ ಸಂಗೀತ ನಿರ್ದೇಶನ, ರವೀಂದ್ರ ಮುದ್ದಿ ಸಾಹಿತ್ಯ, ಚಂದ್ರು ಬಂಡೆ ಸಾಹಸ ನಿರ್ದೇಶನ, ವಿಜಯ್ ಸಂಕಲನ ಹಾಗೂ ಬಿ.ಧನಂಜಯ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. 45 ದಿನಗಳ ಕಾಲ ಮಂಗಳೂರು ಕುಂದಾಪುರ, ಉಡುಪಿ, ಕಾರವಾರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

Exit mobile version