ಹೊಸದಿಲ್ಲಿ, ಮೇ. 24: ಕುಸ್ತಿಪಟು ಕೊಲೆ ಪ್ರಕರಣದಲ್ಲಿ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಭಾನುವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ದೆಹಲಿಯ ಕ್ರೀಡಾಂಗಣದಲ್ಲಿ ಮೇ 4ರಂದು ನಡೆದ ಗಲಾಟೆಯಲ್ಲಿ ಕುಸ್ತಿಪಟು ಸಾಗರ್ ರಾಣಾ ಕೊಲೆಯಾಗಿದ್ದರು. ಈ ಗಲಾಟೆಯಲ್ಲಿ ಸುಶೀಲ್ ಕುಮಾರ್ ಮತ್ತು ಇತರ ಕೆಲವರು ಭಾಗಿಯಾಗಿದ್ದರು ಎಂಬ ಗಂಭೀರ ಆರೋಪವಿತ್ತು. ಕೊಲೆ ಪ್ರಕರಣ ಬಹಿರಂಗ ಆಗುತ್ತಿದ್ದಂತೆ ಸುಶೀಲ್ ತಲೆಮರೆಸಿಕೊಂಡಿದ್ದರು.
ಪ್ರಕರಣದ ತನಿಖೆ ನಡೆಯುತ್ತಿದ್ದು ಆರೋಪಿಗಳ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಲಾಗಿತ್ತು